ಗ್ರಾಮೀಣ ಬ್ಯಾಂಕ್ ನೌಕರರ ಮುಷ್ಕರ
Team Udayavani, Mar 27, 2018, 11:45 AM IST
ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರು ಸೋಮವಾರ ಮಾಮಾಸ್ ಜಾಯಿಂಟ್ ರಸ್ತೆಯಲ್ಲಿನ ಬ್ಯಾಂಕ್ನ ಪ್ರಾದೇಶಿಕ ಕಚೇರಿ ಎದುರು 3ದಿನದ ಮುಷ್ಕರ ಆರಂಭಿಸಿದ್ದಾರೆ.
ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಪ್ರಗತಿ ಕೃಷ್ಣಾ ಬ್ಯಾಂಕ್ ಅಧಿಕಾರಿಗಳ ಸಂಘಗಳ ಸಮನ್ವಯ ಹಾಗೂ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಆರಂಭಿಸಿದ ಮುಷ್ಕರದ ಸಂದರ್ಭದಲ್ಲಿ ನೌಕರರು, ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆಯಿಂದ ಗ್ರಾಮೀಣ ಬ್ಯಾಂಕ್ ನ ಸ್ವರೂಪ ಬದಲಾಗುತ್ತದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ತೊಂದರೆ ಆಗಲಿದೆ ಎಂದು ಆರೋಪಿಸಿ, ಘೋಷಣೆ ಕೂಗಿದರು.
ಪ್ರೇರಕ ಬ್ಯಾಂಕ್ನ ನಿವೃತ್ತಿ ಯೋಜನೆಯನ್ನು ನಮಗೂ ಜಾರಿಗೊಳಿಸಬೇಕು. ಗ್ರಾಮೀಣ ಬ್ಯಾಂಕ್ಗಳ ಖಾಸಗೀಕರಣ ಕೈ ಬಿಡಬೇಕು. ಅನುಕಂಪ ಆಧಾರಿತ ನೇಮಕಾತಿ ಪದ್ಧರಿ ಜಾರಿ, ಪ್ರೇರಕ ಬ್ಯಾಂಕ್ನಲ್ಲಿನ ಸೇವಾ ನಿಯಮ, ನೇರ ನೇಮಕಾತಿ, ಬಡ್ತಿ ಯೋಜನೆಯನ್ನು ನಮ್ಮ ಬ್ಯಾಂಕ್ನಲ್ಲೂ ಅನುಷ್ಠಾನಗೊಳಿಸಲು ಮುಷ್ಕರನಿರತ ಸಂಘ, ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದರು. ಈ ಬೇಡಿಕೆ ಈಡೇರಿಕೆಗೆ ಹಲವು ಬಾರಿ ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಮೂರು ದಿನಗಳ ಮುಷ್ಕರ ಆರಂಭಿಸಲಾಗಿದ್ದು, ಈಗಲಾದರೂ ಸರ್ಕಾರ ನಮ್ಮ ಬೇಡಿಕೆ ಈಡೇರಿಕೆಗೆ ಯತ್ನಿಸಬೇಕು ಎಂದು ಆಗ್ರಹಿಸಿದರು.
ಸಂಘದ ಪದಾಧಿಕಾರಿಗಳಾದ ಸುಭಾಷಚಂದ್ರ, ಕರಿಬಸಪ್ಪ ದಪ್ಪೇರ್, ಮಹಾಬಲೇಶ್, ಎಸ್. ನಾಗರಾಜ್, ಶ್ರೀಧರ್,
ನಾಗೇಶ್ವರಿ ನಾಯರಿ, ವಿರೂಪಾಕ್ಷಯ್ಯ, ಈಶ್ವರಪ್ಪ ಮುಷ್ಕರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ