ಸಿಡಿದೆದ್ದ ಶಾಸಕ ರಾಜೇಶ್‌ ಬೆಂಬಲಿಗರು


Team Udayavani, Apr 16, 2018, 5:03 PM IST

dvg-1.jpg

ದಾವಣಗೆರೆ: ಜಗಳೂರು ಶಾಸಕ, ಕಾಂಗ್ರೆಸ್‌ ನ ಹಾಲಿ ಶಾಸಕ ಎಚ್‌.ಪಿ. ರಾಜೇಶ್‌ಗೆ ಟಿಕೆಟ್‌ ತಪ್ಪಿದೆ ಎಂಬ ವದಂತಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆಕ್ರೋಶ ಮೂಡಿಸಿ ಕೊನೆಗೆ ಜಿಲ್ಲಾ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಭರವಸೆ ಮಾತುಗಳ ಹಿನ್ನೆಲೆಯಲ್ಲಿ ಅದು ಶಮನ ಆಯಿತು. ಹಾಲಿ ಶಾಸಕ ಎಚ್‌.ಪಿ. ರಾಜೇಶ್‌ಗೆ ಟಿಕೆಟ್‌ ತಪ್ಪಿದ ವದಂತಿ ಹರಡುತ್ತಿದ್ದಂತೆ ಅವರ ಬೆಂಬಲಿಗರು ಏಕಾಏಕಿ ಜಿಲ್ಲಾ
ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ದಾವಣಗೆರೆ ನಿವಾಸದ ಮುಂದೆ ಜಮಾಯಿಸಿದರು.

ಶಾಸಕ ರಾಜೇಶ್‌ ಪರ ಘೋಷಣೆ ಕೂಗಿದ ಕಾರ್ಯಕರ್ತರು, ಜಗಳೂರಲ್ಲಿ ರಾಜೇಶ್‌ ಬಿಟ್ಟು ಬೇರೆ ಯಾರಿಗೇ ಟಿಕೆಟ್‌ ಕೊಟ್ಟರೂ ಕಾಂಗ್ರೆಸ್‌ ಸೋಲುವುದು ಖಚಿತ ಎಂದು ಹೇಳಿದರು. ಸುಮಾರು ಅರ್ಧ ಗಂಟೆ ಕಾಲ ಬಹಿರಂಗ ಸಭೆ ನಡೆಸಿ, ರಾಜೇಶ್‌ಗೆ ಮಾತ್ರ ಟಿಕೆಟ್‌ ಕೊಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಕಾಂಗ್ರೆಸ್‌ ಮುಖಂಡ ಎಲ್‌.ಬಿ. ಭೈರೇಶ್‌ ಮಾತನಾಡಿ, ಎಚ್‌.ಪಿ. ರಾಜೇಶ್‌ ಓರ್ವ ಪ್ರಾಮಾಣಿಕ ರಾಜಕಾರಣಿ. ಒಮ್ಮೆ ಪಕ್ಷೇತರರಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಸ್ವತಃ ಕಾಂಗ್ರೆಸ್‌ ನಾಯಕರೇ ರಾಜೇಶ್‌ ರನ್ನು ಪಕ್ಷಕ್ಕೆ ಆಹ್ವಾನಿಸಿ, ಟಿಕೆಟ್‌ ನೀಡಿದ್ದರು.

ಆಗ 38 ಸಾವಿರ ಮತಗಳ ಅಂತರದಲ್ಲಿ ರಾಜೇಶ್‌ ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ ಇಷ್ಟು ಮತಗಳ
ಅಂತರದಲ್ಲಿ ಯಾವುದೇ ಎಸ್‌ಟಿ ಮೀಸಲು ಕ್ಷೇತ್ರದ ಅಭ್ಯರ್ಥಿ ಗೆಲುವು ಸಾಧಿಸಿರಲಿಲ್ಲ. ಇಂತಹ ವ್ಯಕ್ತಿಗೆ ಕೆಲ ಸ್ಥಳೀಯ ಮುಖಂಡರ ಕಾರಣದಿಂದ ಟಿಕೆಟ್‌ ತಪ್ಪಿಸುವ ಯತ್ನ ನಡೆಯುತ್ತಿದೆ. ಈ ವ್ಯಕ್ತಿಗಳು ಪಕ್ಷಕ್ಕಾಗಿ ಏನೂ ಮಾಡಿಲ್ಲ. ಅವರು ಕ್ಷೇತ್ರಕ್ಕೆ ಬಂದು ಪಕ್ಷದ ಅಭ್ಯರ್ಥಿ ಪರ 50 ಮತ ಹಾಕಿಸುವ ಸಾಮರ್ಥ್ಯ ಹೊಂದಿಲ್ಲ. ಇಂತಹ ವ್ಯಕ್ತಿಗಳ ಮಾತಿಗೆ ಹೈಕಮಾಂಡ್‌ ಮಣೆ ಹಾಕಬಾರದು ಎಂದು ಆಗ್ರಹಿಸಿದರು. ಮುಖಂಡರಾದ ಮಂಜುನಾಥ, ಗೋಣಿ ಪ್ರಕಾಶ್‌, ಡಿ.ಆರ್‌. ಹನುಮಂತಪ್ಪ, ಆಜಂ ಉಲ್ಲಾ ಸಭೆಯಲ್ಲಿ ಮಾತನಾಡಿದರು. 

ಜಯಸಿಂಹ ವಿರುದ್ಧ ಆಕ್ರೋಶ ಕೆಪಿಸಿಸಿ ಸದಸ್ಯ ಆನಗೋಡು ಜಯಸಿಂಹ ವಿರುದ್ಧ ಕಾರ್ಯಕರ್ತರು ಆಕ್ರೋಶದ ನುಡಿಗಳನ್ನಾಡಿದರು. ಕ್ಷೇತ್ರದಲ್ಲಿ ಬಂದು 50 ಓಟ್‌ ಹಾಕಿಸುವ ಸಾಮರ್ಥ್ಯ ಆನಗೋಡು ಜಯಸಿಂಹಗೆ ಇಲ್ಲ. ಅಂತಹವರು ಪುಷ್ಪಾ ಲಕ್ಷ್ಮಣಸ್ವಾಮಿಗೆ ಟಿಕೆಟ್‌ ನೀಡಲಾಗುತ್ತದೆ. ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಹೇಳುತ್ತಾರೆ.  ಇಂತಹವರಿಂದ ಜಗಳೂರಲ್ಲಿ ಕಾಂಗ್ರೆಸ್‌ ನಿರ್ನಾಮ ಆಗಲಿದೆ ಎಂದು ಜಗಳೂರು ಕಾಂಗ್ರೆಸ್‌ ಮುಖಂಡರು ಏಕವಚನದಲ್ಲಿ ಜಯಸಿಂಹ ವಿರುದ್ಧ ವಾಗ್ಧಾಳಿ ನಡೆಸಿದರು. ರಾಜೇಶ್‌ರಿಗೆ
ಟಿಕೆಟ್‌ ಕೊಡಬೇಕಿರುವುದು ನೀವೇ. ನಾವು ಯಾರನ್ನೂ ಹೈ ಕಮಾಂಡ್‌ ಎಂದು ಒಪ್ಪಲ್ಲ. ನೀವೇ ರಾಜೇಶ್‌ರನ್ನು ಪಕ್ಷಕ್ಕೆ ಕರೆತಂದು ಕಳೆದ ಬಾರಿ ಟಿಕೆಟ್‌ ಕೊಡಿಸಿದ್ದೀರಿ. ಈ ಬಾರಿ ಸಹ ನೀವೇ ಟಿಕೆಟ್‌ ಕೊಡಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರಿಗೆ ಮನವಿ ಮಾಡಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.