ಗೆದ್ದರೆ ವಸತಿ ಕಲ್ಪಿಸಲು ಪ್ರಥಮ ಆದ್ಯತೆ: ರಾಮಪ್ಪ


Team Udayavani, Apr 20, 2018, 12:58 PM IST

dvg-4.jpg

ಹರಿಹರ: ಚುನಾವಣೆ ನಿಮಿತ್ತ ತಾವು ಯಾವುದೇ ಸುಳ್ಳು ಭರವಸೆ ನೀಡುವುದಿಲ್ಲ. ಆದರೆ ಮತದಾರರಿಗೆ ಕೊಟ್ಟ ಮಾತನ್ನು ಮಾತ್ರ ಈಡೇರಿಸದೇ ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಎಸ್‌. ರಾಮಪ್ಪ ಹೇಳಿದರು.

ನಗರದ ಎಸ್‌.ಎಸ್‌.ಕೆ. ಕಲ್ಯಾಣ ಮಂಟಪದಲ್ಲಿ ಗುರುವಾರ ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಾಲಿ ಶಾಸಕರು 5 ವರ್ಷಗಳ ಹಿಂದೆ ಪ್ರಕಟಿಸಿದ್ದ ಚುನಾವಣಾ ಪ್ರಣಾಳಿಕೆಯ ಯಾವುದೇ ಭರವಸೆ ಈಡೇರಿಸಿಲ್ಲ ಎಂದರು. 

ಆಟೋ ಚಾಲಕರು, ಕೂಲಿ ಕಾರ್ಮಿಕರಿಗೆಲ್ಲ ಯಾರದೋ ಜಮೀನು ತೋರಿಸಿ, ಮನೆ ಕಟ್ಟಿಸಿ ಕೊಡುವುದಾಗಿ ಹೇಳಿ ಶಾಸಕರು ಮತ ಪಡೆದಿದ್ದರು. ಆದರೆ ಆಯ್ಕೆಯಾದ ನಂತರ ಮನೆ ಕೊಡಿಸುವುದಿರಲಿ, ಅವರತ್ತ ತಿರುಗಿಯೂ ನೋಡಿಲ್ಲ. ತಾವು ಶಾಸಕರಾದರೆ ನಿರ್ವಸತಿಕರಿಗೆಲ್ಲ ವಸತಿ ಕಲ್ಪಿಸಲು ಪ್ರಥಮ ಆದ್ಯತೆ ನೀಡುವುದಾಗಿ ತಿಳಿಸಿದರು.

ತಾಲೂಕು ಆಸ್ಪತ್ರೆಗೆ ಡಯಾಲಿಸಿಸ್‌ ಕೇಂದ್ರ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ರಸ್ತೆ, ಚರಂಡಿ ನಿರ್ಮಾಣ ಮುಂತಾದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಯೋಜನೆಗಳೆಲ್ಲಾ ತಮ್ಮವೇ ಎಂದು ಶಾಸಕರು ಹೇಳಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ ಅವರು, ಏ. 24 ರಂದು ನಗರದ ನೀರಾವರಿ ಇಲಾಖೆ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ ಪಟೇಲ್‌ ಮಾತನಾಡಿ, ಬಿಜೆಪಿ ಮಾತ್ರ ನಮಗೆ ಪ್ರತಿಸ್ಪರ್ಧಿ. ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ದುಡಿದರೆ ಬಿಜೆಪಿಯನ್ನು ಸಹ ಸುಲಭವಾಗಿ ಸೋಲಿಸಬಹುದು ಎಂದರು.

ಉದ್ಯಮಿ ಕೃಷ್ಣಾಸಾ ಭೂತೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಸಮಯದ ಅಭಾವದಿಂದ ಸೂಕ್ತ ಪ್ರಚಾರ ನಡೆಸಲಾಗದಿದ್ದರೂ ರಾಮಪ್ಪ 40 ಸಾವಿರ ಮತ ಗಳಿಸಿದರು. ಈಗ ಹೆಚ್ಚಿನ ಕಾಲಾವಕಾಶವಿದ್ದು, 80 ಸಾವಿರಕ್ಕೂ ಅಧಿಕ ಮತ ಪಡೆಯುವಲ್ಲಿ ಅನುಮಾನವಿಲ್ಲ ಎಂದರು. 

ಸಭೆಯಲ್ಲಿ ನಿವೃತ್ತ ಡಿವೈಎಸ್ಪಿ ನಾಗರಾಜ, ಜಿ.ವಿ. ವಿರೇಶ, ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಬಿ.ಕೆ ಸೈಯ್ಯದ್‌ ರೆಹಮಾನ್‌, ಸಿ.ಎನ್‌.ಹುಲಿಗೇಶ, ಕೂಕ್ಕನೂರು ದ್ಯಾಮಣ್ಣ, ಕುಂಬಳೂರು ಹಾಲಪ್ಪ, ವಕೀಲರಾದ ಬಿ.ನಾಗೇಂದ್ರಪ್ಪ, ಹನಗವಾಡಿ ಹನುಮಂತಪ್ಪ, ಜಿ.ಬೇವಿನಹಳ್ಳಿಯ ದಾನಮ್ಮ, ನಿಖೀಲ್‌ ಕೊಂಡಜ್ಜಿ, ಬಿ.ರೇವಣಸಿದ್ದಪ್ಪ, ನಿಂಗಣ್ಣ, ಎಂ.ಬಿ.ಅಣ್ಣಪ್ಪ ಮತ್ತಿತರರು ಮಾತನಾಡಿದರು. 

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಲ್‌.ಬಿ. ಹನುಮಂತಪ್ಪ, ಅಬಿದಲಿ, ರಾಜ್ಯ ಹಿಂದುಳಿದ ವರ್ಗಗಳ ಮಹಿಳಾ ಕಾರ್ಯದರ್ಶಿ ಗೀತಾ ಕದರಮಂಡಲಗಿ, ಜಿಪಂ ಸದಸ್ಯೆ ಅರ್ಚನಾ ಬಸವರಾಜ್‌, ಜಿಪಂ ಮಾಜಿ ಸದಸ್ಯೆ ಗಂಗಮ್ಮ, ದೊಸ್ಥಾನಾ ಖಲೀಲ, ರಾಜನಹಳ್ಳಿ ರಾಮಪ್ಪ, ಕೆ. ಜಡಿಯಪ್ಪ, ಬಿಳಸನೂರು ಬಸವರಾಜ, ಬಿ.ಕೆ ಮುಸ್ತಾಫ್‌, ಶ್ಯಾಮ್‌ಸನ್‌ ಮೇಸ್ತ್ರಿ, ಭಾನುವಳ್ಳಿ ಅತ್ತಾವುಲ್ಲಾ, ಸೇವಾದಳ ಅಧ್ಯಕ್ಷೆ ಪುಷ್ಪಾ, ಹಂಚಿನ ನಾಗಣ್ಣ, ಬಿ. ಬಾಲರಾಜ್‌, ಎಚ್‌. ಶಿವಪ್ಪ, ವೈ. ರಘುಪತಿ, ಜೆ.ಟಿ ಪ್ರವೀಣಕುಮಾರ, ಎ.ಕೆ. ನಾಗೇಂದ್ರಪ್ಪ, ಪುರುಷೋತ್ತಮ, ನೇತ್ರಾವತಿ ಪ್ಯಾಟಿ, ಡಿ.ವೈ ಇಂದಿರಾ, ನೇತ್ರಾವತಿ, ವೈ. ಭಾಗ್ಯಾದೇವಿ, ತಿಪ್ಪೇಸ್ವಾಮಿ, ಮಲೇಬೆನ್ನೂರು ಗ್ರಾಪಂ ಮಾಜಿ ಅಧ್ಯಕ್ಷೆ ಮಂಜಮ್ಮ ಮತ್ತಿತರರಿದ್ದರು.

ಮುಖಂಡ ಅಜಮ್‌ಖಾನ್‌, ಮೌಲಾನಾ ನಜೀರ ಅಹ್ಮದ್‌ಸಾಬ್‌, ಶಬ್ಬಿರ ಮೌಲಾನಾಸಾಬ್‌, ಫಜಲ್‌ಸಾಬ್‌, ಶಮಿಉಲ್ಲಾ, ಎಳೆಹೊಳೆ ಪ್ರಭುಗೌಡ, ಚಂದ್ರಪ್ಪ ಹುಲ್ಮನಿ, ಕುಣೆಬೇಳಕೇರಿ ಚಿಕ್ಕಪ್ಪ, ನಿವೃತ್ತ ಶಿಕ್ಷಕ ಟಿ. ಪುಟ್ಟಪ್ಪ, ಮಲೇಬೆನ್ನೂರಿನ ಬಿಜೆಪಿ ಮತ್ತು ಜೆಡಿಎಸ್‌ನ 40ಕ್ಕೂ ಹೆಚ್ಚು ಜನ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು ಪಕ್ಷದ ಜಿಲ್ಲಾಧ್ಯಕ್ಷ ಎಚ್‌.ಬಿ. ಮಂಜಪ್ಪ,
ಮಾಜಿ ಸಚಿವ ಡಾ| ವೈ. ನಾಗಪ್ಪ, ನಗರಸಭಾ ಸದಸ್ಯ ಶಂಕರ್‌ ಖಟಾವಕರ್‌ ಮತ್ತಿತರರ ಗೈರು ಹಾಜರಿ ಎದ್ದು ಕಾಣುತ್ತಿತ್ತು 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.