ನೈಸರ್ಗಿಕ ಸಂಪನ್ಮೂಲ ದುರುಪಯೋಗ ಸಲ್ಲ
Team Udayavani, Apr 24, 2018, 5:04 PM IST
ಹುಬ್ಬಳ್ಳಿ: ಸ್ವಯಂಘೋಷಿತ ಬುದ್ಧಿಜೀವಿ ಮನುಷ್ಯನ ದುರಾಸೆಯಿಂದ ನೈಸರ್ಗಿಕ ಸಂಪನ್ಮೂಲಗಳ ದುರುಪಯೋಗವಾಗುತ್ತಿದೆ ಎಂದು ಅಗಸ್ತ್ಯ ವಿಜ್ಞಾನ ಕೇಂದ್ರದ ಮುಖ್ಯಸ್ಥ ಗುರು ಮದ್ನಳ್ಳಿ ವಿಷಾದ ವ್ಯಕ್ತಪಡಿಸಿದರು. ನಗರದ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರದಿಂದ ವಿಶ್ವ ಭೂ ದಿನದ ನಿಮಿತ್ತ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀವಿಗಳ ಪೋಷಣೆಗೆ ಅಗತ್ಯವಿರುವುದೆಲ್ಲವೂ ಭೂಗ್ರಹದ ಮೇಲಿದೆ. ಮನುಕುಲ, ಜೀವಸಂಕುಲದ ಒಳಿತಿಗಾಗಿ ಸಂಪನ್ಮೂಲಗಳು ಬಳಕೆಯಾಗಬೇಕಿದೆ. ಭೂಮಿಯನ್ನು ಪ್ರದೂಷಣೆಯಿಂದ ರಕ್ಷಿಸಿ ಸಸಿನೆಟ್ಟು ಮರವಾಗಿ ಬೆಳೆಸಿ ಅಧಿಕ ಭೂ ತಾಪಮಾನದಿಂದ ಭೂಮಿ ರಕ್ಷಿಸುವ ಅನಿವಾರ್ಯತೆ ಇದೆ ಎಂದರು. ಚಿಗುರು ಉಚಿತ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ನಗರದ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಸಂಚರಿಸಿ ಪರಿಸರ ಕಾಳಜಿ ಕುರಿತು ಅರಿವು ಮೂಡಿಸಿದರು.
ಸಾರ್ವಜನಿಕರು ಹಾಗೂ ಕಾರ್ಮಿಕರ ಕೈಗೆ ಹಸಿರು ಬ್ಯಾಂಡ್ ಕಟ್ಟಿ, ಸಸಿಗಳನ್ನು ವಿತರಿಸಿ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ವಿಜ್ಞಾನ ಕೇಂದ್ರದಲ್ಲಿ ವಿಶ್ವ ಭೂದಿನ ನಿಮಿತ್ತ ಹಾಗೂ ಪರಿಸರ ರಕ್ಷಣೆ ಕುರಿತು ಪಿಪಿಟಿ ಪ್ರದರ್ಶಿಸಿ ವಿವರಿಸಲಾಯಿತು. ಕಾರ್ಯಕ್ರಮದಲ್ಲಿ ಮಂಜುನಾಥ ಜಾನಣ್ಣವರ, ಫಕ್ಕೀರೇಶ್ವರ ಮಡಿವಾಳರ, ಶಂಕರ ಕುರುಬರ, ಹನುಮಂತಪ್ಪ ಬಿ., ಶಶಿಕಲಾ ಗೌರಿ, ನಿವೇದಿತಾ ಜವಳಿಮಠ, ಸುಜಯ ಭೋಜಕರ, ನಿಂಗನಗೌಡ ಸತ್ತಿಗೌಡ್ರ, ಪುಂಡಲೀಕ ದೇವರಮನಿ, ದೀಪ್ತಿ ಗಾಯಕವಾಡ, ಬಸವರಾಜ ಮುದಗಲ್ಲ, ನಾರಾಯಣ ಚವ್ಹಾಣ, ಹನ್ನಿಫಾ ಗೋಟೇಗಾರ, ಜ್ಯೋತಿ ಕಾಪರೆ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು