ಅಮಿತ್‌ ಶಾ ರೋಡ್‌ ಶೋಗೆ ಜನಸಾಗರ


Team Udayavani, Apr 30, 2018, 9:20 AM IST

dav-1.jpg

ದಾವಣಗೆರೆ: ಕರ್ನಾಟಕದಲ್ಲಿ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಬಿಜೆಪಿ ಭಾನುವಾರ
ಬೆಣ್ಣೆನಗರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ಭರ್ಜರಿ ರೋಡ್‌ ಶೋ ನಡೆಸಿತು. ಅಮಿತ್‌ ಶಾ ಬಿರು ಬಿಸಿಲಿನಲ್ಲೂ ಕರ್ನಾಟಕ ನವ ನಿರ್ಮಾಣ ಯಾತ್ರೆಯ ರಥವೇರಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಚಿವ ಎಸ್‌. ಎ. ರವೀಂದ್ರನಾಥ್‌, ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯಶವಂತರಾವ್‌ ಜಾಧವ್‌ ಪರ ಸುಮಾರು 2 ಕಿಲೋ ಮೀಟರ್‌ ಉದ್ದಕ್ಕೂ ಮತಯಾಚಿಸಿದರು. ವೀರಮದಕರಿ (ಹೊಂಡದ) ವೃತ್ತದಿಂದ ತೆರೆದ ಬಸ್‌ನಲ್ಲಿ ರೋಡ್‌ ಶೋ ಆರಂಭಿಸಿದ ಶಾಗೆ ಸಂಸದ
ಜಿ.ಎಂ. ಸಿದ್ದೇಶ್ವರ್‌ ಸಾಥ್‌ ನೀಡಿದರು.

ಹೊಂಡದ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಅಮಿತ್‌ ಶಾ ಆಗಮಿಸುತ್ತಲೇ ಬಿಜೆಪಿ, ನರೇಂದ್ರ ಮೋದಿ, ಅಮಿತ್‌ ಶಾ, ಬಿ.ಎಸ್‌.ಯಡಿಯೂರಪ್ಪ ಪರ ಜಯಘೋಷ ಹಾಕಿದರು. ಭಾರತ್‌ ಮಾತಾ ಕಿ ಜೈ, ಶಿವಾಜಿ ಮಹಾರಾಜ್‌ ಕೀ ಜೈ, ಜೈರಾಮ್‌.. ಶ್ರೀರಾಮ್‌ ಎಂಬ ಘೋಷಣೆಗಳು ಮುಗಿಲು ಮುಟ್ಟಿದವು. ಹಿಂದೆ ಶಾ ಜನರತ್ತ ಕೈ ಬೀಸಿ ಬರುತ್ತಿದ್ದರೆ, ಮುಂದೆ ಡೊಳ್ಳು, ಡ್ರಂ ವಾದ್ಯಗಳು ಮೊಳಗುತ್ತಿದ್ದವು. ನಂದಿಕೋಲು ಗಮನ ಸೆಳೆಯಿತು. ರಸ್ತೆಯ ಅಕ್ಕಪಕ್ಕದ ಕಟ್ಟಡಗಳ ಮೇಲೆ ನಿಂತ ಜನರು ಹೂವಿನ ಮಳೆ ಸುರಿಸುವ ಮೂಲಕ ಅಮಿತ್‌ ಶಾಗೆ ಭರ್ಜರಿ ಸ್ವಾಗತ ಕೋರಿದರು. 

ಮೆರವಣಿಗೆಯ ಮುಂದೆ ಸಾಗುತ್ತಿದ್ದ ಕಾರ್ಯಕರ್ತರು ಬಿಸಿಲನ್ನು ಲೆಕ್ಕಿಸದೆ ಕುಣಿದು ಕುಪ್ಪಳಿಸಿದರು. ಅಮಿತ್‌ ಶಾ ಕೈ ಜೋಡಿಸಿ, ಮತ ಹಾಕುವಂತೆ ಮನವಿ ಮಾಡಿದರು. ಶಾ ಪಕ್ಕದಲ್ಲಿದ್ದ ರವೀಂದ್ರನಾಥ್‌, ಯಶವಂತರಾವ್‌ ಜಾಧವ್‌ ರಸ್ತೆ ಬದಿಯಲ್ಲಿದ್ದ ಜನರಿಗೆ ಕೈ ಮುಗಿದು ಮತ ಹಾಕುವಂತೆ ಕೋರಿದರು. 

ಮೆರವಣಿಗೆ ಹೊಂಡದ ವೃತ್ತದಿಂದ ಅರುಣ ಚಿತ್ರಮಂದಿರ, ರಾಂ ಅಂಡ್‌ ಕೋ ವೃತ್ತ, ಪಿಜೆ ಬಡಾವಣೆಯ ಚರ್ಚ್‌ ರಸ್ತೆ ಮೂಲಕ ವಿನೋಬ ನಗರ 2ನೇ ಮುಖ್ಯ ರಸ್ತೆ ಮೂಲಕ ಪಿಬಿ ರಸ್ತೆ ಪ್ರವೇಶಿಸಿತು. ಪಿಬಿ ರಸ್ತೆಯ ಶ್ರೀಶೈಲ ಮಠದವರೆಗೆ ಸಾಗಿ, ಅಂತ್ಯಕಂಡಿತು.

ಪಕ್ಷದ ಮುಖಂಡರಾದ ಡಾ| ಎ.ಎಚ್‌. ಶಿವಯೋಗಿ ಸ್ವಾಮಿ, ಎಚ್‌. ಎಸ್‌.ನಾಗರಾಜ, ವೈ. ಮಲ್ಲೇಶ್‌, ಬಿ.ಎಂ. ಸತೀಶ್‌, ಕೃಷ್ಣಮೂರ್ತಿ ಪವಾರ್‌, ಎನ್‌. ರಾಜಶೇಖರ್‌, ರಾಜನಹಳ್ಳಿ ಶಿವಕುಮಾರ್‌, ಪಿ.ಸಿ. ಶ್ರೀನಿವಾಸ್‌, ಕೃಷ್ಣಮೂರ್ತಿ ಪವಾರ್‌ ಮೆರವಣಿಗೆಯಲ್ಲಿ ಭಾಗಿಯಾದ್ದರು. 

ಮಾತಿನ ಚಕಮಕಿ 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಆಗಮನದ ವೇಳೆ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಮುಂದಾದ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಅಲ್ಲಿಂದ ಕಳುಹಿಸಿದ ಘಟನೆ ನಡೆಯಿತು. ಬೆಳಗ್ಗೆ 10.30ಕ್ಕೆ ಅಮಿತ್‌ ಶಾ ರೋಡ್‌ ಶೋಗೂ ಮುನ್ನ ನಗರ ದೇವತೆ ದುರ್ಗಾಂಬಿಕೆಗೆ ಪೂಜೆ ಸಲ್ಲಿಸುವ ಕಾರ್ಯಕ್ರಮ ಇತ್ತು. 

ಇದೇ ವೇಳೆ ದೇವಸ್ಥಾನದ ಹಿಂದಿನ ರಸ್ತೆಯಲ್ಲಿ ಕೆಲ ಕಾಂಗ್ರೆಸ್‌ ಮುಖಂಡರು ತಮ್ಮ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ
ಪ್ರಚಾರ ನಡೆಸುತ್ತಿದ್ದರು. ಸುಮಾರು 15 ಜನರಿದ್ದ ಕಾರ್ಯಕರ್ತರ ಗುಂಪು ಕಾಂಗ್ರೆಸ್‌ ಪರ ಘೋಷಣೆ ಕೂಗುತ್ತ ರಸ್ತೆಯಲ್ಲಿ ಸಾಗುತ್ತಿತ್ತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರ ಗುಂಪು ಅಮಿತ್‌ ಶಾರನ್ನು ಸ್ವಾಗತಿಸಲು ಅಲ್ಲಲ್ಲಿ ನೆರೆದಿತ್ತು. ಅತ್ತ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಪರ ಘೋಷಣೆ ಕೂಗುತ್ತಿದ್ದರೆ, ಇತ್ತ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪರ ಘೋಷಣೆ ಕೂಗಿದರು. ಈ ವೇಳೆ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಲ್ಲಿಂದ ಹೋಗಲು ಸೂಚಿಸಿದರು.

ಬಿಜೆಪಿಗರು ಈಗಾಗಲೇ ಈ ಭಾಗದಲ್ಲಿ ರೋಡ್‌ ಶೋ ನಡೆಸಲು ಅನುಮತಿ ಪಡೆದಿದ್ದಾರೆ ಎಂಬುದನ್ನು ತಿಳಿಸಿ, ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಗ ಹಾಕಿದರು. ಕಾರ್ಯಕರ್ತರಲ್ಲಿ ಅಮಿತೋತ್ಸಾಹ ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಆಗಮನದಿಂದ ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಉತ್ಸಾಹ ಕಂಡು ಬಂತು. ಶಾ ಆಗಮನದ ವೇಳೆ ಕೇಕೆ ಹಾಕಿ ಕುಣಿದ ಕಾರ್ಯಕರ್ತರು ಕೈಯಲ್ಲಿ ಬಿಜೆಪಿ ಧ್ವಜ, ಬಿ.ಎಸ್‌. ಯಡಿಯೂರಪ್ಪ, ನರೇಂದ್ರ ಮೋದಿ, ಅಮಿತ್‌ ಶಾರ ಸಣ್ಣ ಸಣ್ಣ ಕಟೌಟ್‌ ಹಿಡಿದು ಜೈಕಾರ ಹಾಕಿದರು. ದಾರಿಯುದ್ದಕ್ಕೂ ಡೊಳ್ಳು, ಡ್ರಂ, ನಂದಿಕೋಲು ಕುಣಿತಕ್ಕೆ ಹೆಜ್ಜೆ ಹಾಕಿಕೊಂಡು ಸಾಗಿದರು. ವಿಶೇಷವಾಗಿ ಮಹಿಳಾ ಕಾರ್ಯಕರ್ತರ ಪ್ರಮಾಣ ಸಹ ಹೆಚ್ಚಿನ ಸಂಖ್ಯೆಯಲ್ಲಿ ಇದ್ದುದು ಗಮನ ಸೆಳೆಯಿತು. ಜೈನ ಸಮುದಾಯದ ಮಹಿಳೆಯರು, ಯುವತಿಯರು ಸಹ ಮೆರವಣಿಗೆಯಲ್ಲಿ ಕಾಣಿಸಿಕೊಂಡರು.

ರಾಜ್ಯದಲ್ಲೀಗ ಬಿಜೆಪಿ ಸುನಾಮಿ 
ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದ್ದು, ಎಲ್ಲೆಡೆ ಜನರು ಪಕ್ಷದ ಪರ ಒಲವು ತೋರಿಸುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿವರ್ತನಾ ಯಾತ್ರೆಯಲ್ಲಿ ಯಡಿಯೂರಪ್ಪ ನೀಡಿರುವ ಎಲ್ಲಾ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದರು.

ನಗರದ ನೆಹರು ಮೈದಾನದಲ್ಲಿ ಭಾನುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯಾಗಿಸಿದ ಸಿದ್ದರಾಮಯ್ಯ ಅವರಿಗೆ ಮದಕರಿ ನಾಯಕ ನೆನಪಾಗಲಿಲ್ಲವೇಕೇ ಎಂದು ಪ್ರಶ್ನಿಸಿದ ಶಾ, ನಾವು ಚಿತ್ರದುರ್ಗದಲ್ಲಿ ಮದಕರಿ ನಾಯಕನ ಭವ್ಯ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಅಲ್ಲದೆ ವಿವಿ ಸಾಗರ ಜಲಾಶಯಕ್ಕೆ 5 ಟಿಎಂಸಿ ನೀರು ಹರಿಸುತ್ತೇವೆ ಎಂದರು.

ಚಿತ್ರದುರ್ಗ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಇಲ್ಲಿನ ಶಾಸಕರು ಹಿರಿಯೂರು ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕ್ಷೇತ್ರ ಬರಗಾಲ ಎದುರಿಸುತ್ತಿದೆ. ಹೀಗಿದ್ದರೂ ಕಳೆದ 10 ವರ್ಷಗಳಲ್ಲಿ ಸ್ಥಳೀಯ ಶಾಸಕರು ವಿಧಾನಸಭೆ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ ಎಂದು ಟೀಕಿಸಿದರು.

ಹಿರಿಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ತಂದೆ ಎ. ಕೃಷ್ಣಪ್ಪ ಕೆಲವೇ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಅವರ ಆಸೆಯಂತೆ ಈ ಭಾಗದ ಜನರ ಸೇವೆ ಮಾಡಲು ನಾನು ಸ್ಪರ್ಧಿಸಿದ್ದೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. 

ಡಿ.ಟಿ. ಶ್ರೀನಿವಾಸ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಳ್ಳಕೆರೆ ಕ್ಷೇತ್ರದ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ, ಹೊಸದುರ್ಗ ಕ್ಷೇತ್ರದ ಅಭ್ಯರ್ಥಿ ಗೂಳಿಹಟ್ಟಿ ಶೇಖರ್‌, ಹೊಳಲ್ಕೆರೆ ಕ್ಷೇತ್ರದ ಅಭ್ಯರ್ಥಿ ಎಂ. ಚಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌, ಮಾಜಿ ಶಾಸಕ ಆರ್‌. ರಾಮಯ್ಯ, ಮುಖಂಡರಾದ ಸಿದ್ದೇಶ್‌ ಯಾದವ್‌, ಮುರಳಿ, ಲಿಂಗಮೂರ್ತಿ, ಟಿ.ಜಿ. ನರೇಂದ್ರನಾಥ್‌, ದ್ಯಾಮೇಗೌಡ, ಯಶವಂತ್‌, ಟಿ. ಚಂದ್ರಶೇಖರ್‌, ಎಚ್‌. ಎನ್‌. ನರಸಿಂಹಯ್ಯ, ಕೇಶವಮೂರ್ತಿ ಉಪಸ್ಥಿತರಿದ್ದರು.

ಕಾಂಗ್ರೆಸ್‌ ಸರ್ಕಾರ ಮನೆಗೆ ಕಳುಹಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ರೈತರು ಅಪಾರ ಪ್ರಮಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಜ್ಯದ ಖಜಾನೆ ಲೂಟಿಯಾಗಿದೆ. ಇಂತಹ ಸರ್ಕಾರವನ್ನು ಮನೆಗೆ ಕಳುಹಿಸಿ ಅಭಿವೃದ್ಧಿ ಹಾಗೂ ಬದ್ಧತೆ ಇರುವ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಅಮಿತ್‌ ಶಾ ಕೋರಿದರು.

ಟಾಪ್ ನ್ಯೂಸ್

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.