ನನ್ನ ಹೋರಾಟ ರಾಜ್ಯದಲ್ಲೂಮುಂದುವರಿಯಲಿದೆ: ಚೇತನ್‌


Team Udayavani, Apr 30, 2018, 10:04 AM IST

chethan-kumar-10424-14-11-2016-04-58-48.jpg

ದಾವಣಗೆರೆ: ನಾನು 23 ವರ್ಷದವರೆಗೆ ಅಮೆರಿಕದಲ್ಲಿ ನೆಲೆಸಿದವನು. ಕಾಯಕ ತತ್ವ ಹಾಗೂ ಶೋಷಿತರ ಪರ ದನಿ ಎತ್ತುವುದಕ್ಕೆ ಅಲ್ಲೂ ಅವಕಾಶ ಇಲ್ಲ. ನಾನು ಈ ಕಾರ್ಯ ಮಾಡಿದ್ದಕ್ಕೆ ನನ್ನನ್ನು ಅಮೆರಿಕ ವಿರೋಧಿ ಎಂದು ಪಟ್ಟ ಕಟ್ಟಿ ಓಡಿಸಿದರು ಎಂದು ಚಲನಚಿತ್ರ ನಟ, ಆ ದಿನಗಳು ಖ್ಯಾತಿಯ ಚೇತನ್‌ ಹೇಳಿದರು.

ಭಾನುವಾರ ವರದಿಗಾರರ ಕೂಟದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ನಾಡು ಕರ್ನಾಟಕಕ್ಕೆ ಬಂದು ಮತ್ತೆ ಈ ಹೋರಾಟಕ್ಕೆ ಅಣಿಯಾಗಿದ್ದೇನೆ. ಇಲ್ಲಿಯ ಜನ ನನ್ನನ್ನು ಒಪ್ಪುತ್ತಾರೆ. ನನ್ನ ವಿಷಯಗಳಿಗೆ ಮನ್ನಣೆ ನೀಡುತ್ತಾರೆ ಎಂಬ ಕಾರಣಕ್ಕೆ ಇಲ್ಲೂ ಸಹ ಅದೇ ಹೋರಾಟ ಆರಂಭಿಸಿದ್ದೇನೆ. ಈಗಾಗಲೇ ಕೆಲ ವಿಷಯಗಳಲ್ಲಿ ನಾವು ಜಯ ಸಾಧಿಸಿದ್ದೇವೆ ಎಂದರು.

ಬಿಜೆಪಿಗರು ನನ್ನನ್ನು ನಕ್ಸಲೈಟ್‌ ತರಹ ನೋಡುತ್ತಿದ್ದಾರೆ. ಕೆಲ ಹೋರಾಟಗಳಲ್ಲಿ ಭಾಗಿಯಾಗಿದ್ದಕ್ಕೆ ನಕ್ಸ್‌ಲೈಟ್‌ ಪಟ್ಟ ಕಟ್ಟಿದ್ದಾರೆ. ಆದರೆ ನಾನು ಹಿಂದೇಟು ಹಾಕಲ್ಲ. ಮುಂದೆ ರಾಜಕೀಯ ಪ್ರವೇಶ ಕುರಿತು ಸಹ ಚಿಂತಿಸುತ್ತಿದ್ದೇನೆ ಎಂದರು.

ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಸ್ಥಾನಮಾನ ನೀಡುವುದು ಅನಿವಾರ್ಯ. ಈ ಹಿಂದೆಯೇ ಅಂದರೆ 1871ರಲ್ಲಿ ಇಂಗ್ಲಿಷರ ಆಳ್ವಿಕೆ ಕಾಲದಲ್ಲಿ ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಸ್ಥಾನಮಾನ ಇತ್ತು. ಇದನ್ನೇ ಆಧರಿಸಿ, ಈ ಹಿಂದೆ ವೀರಶೈವ ಲಿಂಗಾಯತ ಹೆಸರಲ್ಲಿ ಸ್ವತಂತ್ರ ಧರ್ಮ ಸ್ಥಾನಮಾನ ಪಡೆಯುವಯತ್ನ ನಡೆಯಿತು. ಆದರೆ, ಶೈವ ಎಂಬ ಪದ ಬಂದ ಹಿನ್ನೆಲೆಯಲ್ಲಿ ಸ್ವತಂತ್ರ ಧರ್ಮ ಸ್ಥಾನಮಾನ ಸಿಗಲಿಲ್ಲ. ಈ ಬಾರಿ ಬಸವಣ್ಣನವರ ಶರಣ ತತ್ವ ಆಧಾರದಡಿ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಸ್ಥಾನಮಾನ ದೊರಕಿಸುವ ಯತ್ನ ನಡೆದಿದೆ. ಇದಕ್ಕೆ ಕೇಂದ್ರ ಸರ್ಕಾರ ಬೆಂಬಲಿಸಬೇಕು. ನಾಗಮೋಹನ್‌ ದಾಸ್‌ ವರದಿ ಅಂಗೀಕರಿಸಿ, ಸ್ವತಂತ್ರ ಧರ್ಮ ಸ್ಥಾನಮಾನ ನೀಡಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ನಾವು ದೇವದಾಸಿ ಪದ್ಧತಿ ವಿರುದ್ಧ ಹೋರಾಟ ನಡೆಸಲು ಅಣಿಯಾಗಿದ್ದೇವೆ. ಸರ್ಕಾರ ಈಗಾಗಲೇ ಈ ಪದ್ಧತಿ ರದ್ದು ಮಾಡಿದ್ದರೂ ಸಹ ಆಚರಣೆಯಲ್ಲಿದೆ. ಇದರ ವಿರುದ್ಧ ದೊಡ್ಡಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಇದೇ ಕಾರಣಕ್ಕೆ ನಾನು ಶನಿವಾರ ಮುತ್ತುಕಟ್ಟು ಆಚರಣೆ ಮಾಡಲಾಗುವ ಸ್ಥಳ ಉಚ್ಚಂಗಿದುರ್ಗಕ್ಕೆ ಹೋಗಿ ಬಂದೆ ಎಂದು ತಿಳಿಸಿದರು.

ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜ ಬಡದಾಳ್‌, ಖಜಾಂಚಿ ಎ.ಎಲ್‌. ತಾರಾನಾಥ, ಹಿರಿಯ ಪತ್ರಕರ್ತರಾದ ಬಕ್ಕೇಶ ನಾಗನೂರು, ಸುಭಾಷ್‌ ಬಣಗಾರ್‌ ಸೇರಿದಂತೆ ವಿವಿಧ ಪತ್ರಿಕೆ, ಟಿವಿ ಮಾಧ್ಯಮದ ಪ್ರತಿನಿಧಿಗಳು ಸಂವಾದದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.