ಹೊಂದಾಣಿಕೆ-ಸಮನ್ವಯ ಜೀವನ ಸಾಗಿಸಿ: ಬಸವಪ್ರಭು ಶ್ರೀ


Team Udayavani, Jun 13, 2018, 11:11 AM IST

dav-1.jpg

ದಾವಣಗೆರೆ: ಮಾನವರೆಲ್ಲಾ ಒಂದೇ ಎಂಬ ಭಾವನೆ, ಪರಸ್ಪರ ಹೊಂದಾಣಿಕೆ, ಸಮನ್ವಯತೆ ಜೀವನ ಸಾಗಿಸಬೇಕು ಎಂದು ದಾವಣಗೆರೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದ್ದಾರೆ.

ರಂಜಾನ್‌ ಹಬ್ಬದ ಪ್ರಯುಕ್ತ ಅಲ್‌ ಮೋಮಿನಿನ್‌ ಬೈತುಲ್‌ ಮಾಲ್‌ ಕಮಿಟಿಯವರು ಮಂಗಳವಾರ   ಎಸ್‌.ಎಸ್‌.
ಮಲ್ಲಿಕಾರ್ಜುನ್‌ ನಗರದ ಬೀಡಿ ಲೇಔಟ್‌ನಲ್ಲಿ ಹಮ್ಮಿಕೊಂಡಿದ್ದ ಬಡ ಹೆಣ್ಣು ಮಕ್ಕಳಿಗೆ ಸೀರೆ ವಿತರಣೆ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ಮಾನವರೆಲ್ಲರೂ ಒಂದೇ. ಜಾತಿ-ಧರ್ಮಗಳು ಅವರವರ ಆಚರಣೆಗಳ ಮೇಲೆ ಅವಲಂಬಿತವಾಗಿವೆ ಎಂದರು.

ಯಾರು ಕಷ್ಟದಲ್ಲಿ ಇರುತ್ತಾರೋ ಅಂತವರಿಗೆ ಸಹಾಯ ಮಾಡುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಪಾಲಿಸುವ ಮೂಲಕ ಸನ್ಮಾರ್ಗದಲ್ಲಿ ನಡೆಯಬೇಕು. ದೇವರ ಧ್ಯಾನ ನಂತರ ದಾನ, ಧರ್ಮ ಮಾಡುವ ರಂಜಾನ್‌ ತಿಂಗಳು ಪವಿತ್ರವಾದದು. ತಿಂಗಳು ಉಪವಾಸ ಮಾಡುವುದರಿಂದ ಆರೋಗ್ಯವು ಸುಧಾರಿಸುವುದರ ಜೊತೆಗೆ ಹಸಿವಿನ ಅರಿವು ಮೂಡುತ್ತದೆ. ಹಾಗಾಗಿ ರಂಜಾನ್‌ ಮಾಸ ಇಸ್ಲಾಂ ಧರ್ಮದಲ್ಲಿ ಶ್ರೇಷ್ಠವಾದ ಆಚರಣೆ ತಿಂಗಳು ಎಂದು ತಿಳಿಸಿದರು.

ಚಿತ್ರದುರ್ಗ ಬಂಜಾರ ಪೀಠದ ಸೇವಾಲಾಲ್‌ ಸ್ವಾಮೀಜಿ ಮಾತನಾಡಿ, ಪವಿತ್ರ ರಂಜಾನ್‌ ತಿಂಗಳಲ್ಲಿ ರೋಜಾ ಮಾಡುವುದರಿಂದ ಮುಖದಲ್ಲಿ ಹೊಸ ಚೈತನ್ಯ ಮೂಡುತ್ತದೆ. ಅಸಹಾಯಕರಿಗೆ ಸಹಾಯ ಮಾಡುವುದರಿಂದ ಬದುಕು ಸಾರ್ಥಕವಾಗುತ್ತದೆ. ಎಷ್ಟೋ ಬಡವರಿಗೆ ಹಬ್ಬದಲ್ಲಿ ಬಟ್ಟೆಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ. 
ಸಂಘ-ಸಂಸ್ಥೆಗಳು ಈ ರೀತಿ ಬಟ್ಟೆಗಳನ್ನು ಹಂಚಿದರೆ ಬಡವರು ಸಹ ಸಂತೋಷದಿಂದ ಹಬ್ಬವನ್ನು ಆಚರಿಸುತ್ತಾರೆ.
ಯಾರು ಬೇರೆಯವರ ಕಷ್ಟಗಳಲ್ಲಿ ಭಾಗಿಯಾಗುತ್ತಾರೆ. ಅಂಥವರು  ಸತ್ಪ್ರಜೆಗಳಾಗಿ ಬದುಕನ್ನು ಸಾಗಿಸುತ್ತಾರೆ ಎಂದು ತಿಳಿಸಿದರು.

ಬೈತುಲ್‌ ಮಾಲ್‌ ಕಮಿಟಿ ಅಧ್ಯಕ್ಷ ಕೆ.ಸಿ. ಮಹ್ಮದ್‌ ಮಾತನಾಡಿ, ಸಮಾಜದಲ್ಲಿ ಎಲ್ಲರೂ ಸುಖ-ಸಂತೋಷದಿಂದ ರಂಜಾನ್‌ ಹಬ್ಬವನ್ನು ಆಚರಿಸಲು ಜಕಾತನ್ನು ಪ್ರತಿಯೊಬ್ಬರೂ ನೀಡುವಂತಾಗಲಿ ಎಂದು ಆಶಿಸಿದರು. ಕಮಿಟಿ ಪ್ರಧಾನ ಕಾರ್ಯದರ್ಶಿ ನಜೀರ್‌ ಅಹ್ಮದ್‌ ಮಾತನಾಡಿ, ಬೈತ್‌ ಎಂದರೆ ಮನೆ ಎಂದರ್ಥ. ಮಾಲ್‌ ಎಂದರೆ ಹಣ-ಒಡವೆ-ಐಶ್ವರ್ಯ ಎಂಬುದಾಗಿದೆ. ಪ್ರಪಂಚದಲ್ಲಿ ಮೊಟ್ಟ ಮೊದಲಿಗೆ ಮಹ್ಮದ್‌ ಪೈಗಂಬರ್‌ರವರು ಈ ಆಚರಣೆ ಜಾರಿಗೆ
ತಂದರು.  ಇಸ್ಲಾಂ ಧರ್ಮದಲ್ಲಿ ಅಳವಡಿಸಿ ಪ್ರತಿಯೊಬ್ಬ ಶ್ರೀಮಂತರು ಜಕಾತನ್ನು ತೆಗೆದು ಬಡವರಿಗೆ ನೀಡುವುದು ಕಡ್ಡಾಯಗೊಳಿಸಿದ್ದಾರೆ.

ಇಸ್ಲಾಂ ಧರ್ಮದ 5 ತತ್ವಗಳಲ್ಲಿ ಇದನ್ನು ಮುಖ್ಯವಾಗಿ ಪಾಲಿಸಲು ತಿಳಿಸಿದ್ದಾರೆ. ಜಕಾತನ್ನು ನೀಡಿದರೆ ಸಮಾಜದಲ್ಲಿ ಬಡತನ ನಿರ್ಮೂಲನೆ ಮಾಡಲು ಸಾಧ್ಯ ಎಂದರು.

ಕಾಂಗ್ರೆಸ್‌ ಮುಖಂಡ ಸೈಯದ್‌ ಸೈಪುಲ್ಲಾ, ನಗರಪಾಲಿಕೆ ಸದಸ್ಯ ಫಾರೂಕ್‌ ಅಬ್ದುಲ್‌, ನಗರಸಭಾ ಮಾಜಿ ಸದಸ್ಯ ಎ. ಅಲ್ಲಾಭಕ್ಷಿ, ಯುವಮುಖಂಡ ಕೆ. ಹಸನ್‌, ಹಾಜಿ ಮೂಸಾಸಾಬ್‌, ಶಫಿವುಲ್ಲಾ, ಶರೀಫ್‌, ಮಜ್ಜೀದ್‌, ಆಸಿಫ್‌, ಸಾಧಿಕ್‌, ಹಜರತ್‌ಅಲಿ, ಮುಕ್ತಾರ್‌ ಉಜ್ಜಿನಿ, ರಫಿಕ್‌, ಅಫೂಜ್‌, ಪತ್ರಕರ್ತ ಕೆ.ಎಂ. ಸಿದ್ಧಲಿಂಗಸ್ವಾಮಿ ಇತರರು ಇದ್ದರು. ಪತ್ರಕರ್ತ ಎ. ಫಕ್ರುದ್ದೀನ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.