ಶಿಕ್ಷಕರಿಲ್ಲದ ಶಾಲೆ-ಪ್ರತಿಭಟನೆ
Team Udayavani, Jun 14, 2018, 3:11 PM IST
ಜಗಳೂರು: ಕಾಯಂ ಶಿಕ್ಷಕರನ್ನು ನೇಮಿಸುವಂತೆ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿ ಅಣಬೂರು ಗುರುಸಿದ್ದನಗೌಡ ನಗರದ ನಿವಾಸಿಗಳು ಮಕ್ಕಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಲೆಯ ವಿದ್ಯಾರ್ಥಿಗಳೊಂದಿಗೆ ಆಗಮಿಸಿದ ಪಾಲಕರು, ನಿವಾಸಿಗಳು ಕಚೇರಿಯ ಎದುರು ಧರಣಿ ಕುಳಿತು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೀರೇಶ್ ಮಾತನಾಡಿ, ಎಸ್ಎಸ್ಐ ಯೋಜನೆಯಡಿ ಪ್ರಾರಂಭಿಸಲಾಗಿರುವ ಶಾಲೆಗೆ ಶಿಕ್ಷಣ ಇಲಾಖೆ ಕಾಯಂ ಶಿಕ್ಷಕರನ್ನು ನೇಮಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು. ಮೇ 28 ರಿಂದ ಶಾಲೆ ಪ್ರಾರಂಭವಾಗಿದೆ. ಆದರೆ ಶಿಕ್ಷಕರಿಲ್ಲದೆ ಶಾಲೆಗೆ ಬೀಗ ಜಡಿಯಲಾಗಿದೆ. ಇಲ್ಲಿಯವರೆಗೂ ಯಾವೊಬ್ಬ ಶಿಕ್ಷಕರೂ ಬಂದಿಲ್ಲ. ಶಿಕ್ಷಕರನ್ನು ನೇಮಿಸುವಂತೆ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಧರಣಿ ನಿರತರ ಮನವಿ ಆಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಚಂದ್ ಮಾತನಾಡಿ, ಶಾಲೆಗೆ ಹನುಮಂತಪ್ಪ ಎಂಬ
ಶಿಕ್ಷಕರನ್ನು ನಿಯೋಜಿಸಲಾಗಿದೆ. ನಾಳೆಯಿಂದ ಅವರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದು ಪ್ರತಿಭಟನಾಕಾರರ
ಮನವೊಲಿಸಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ನಿರ್ದೇಶಕ ಕೆ. ಚಂದ್ರಪ್ಪ, ಮುಖಂಡರಾದ ಎಚ್.ಕೆ ಸಣ್ಣಕಾಟಪ್ಪ, ನಾಗರಾಜ್, ರೇಣುಕೇಶ್, ತಿಪ್ಪೇಸ್ವಾಮಿ ಇತರರು ಇದ್ದರು.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 56 ಶಿಕ್ಷಕರ ಕೊರತೆ ಎದುರಾಗಿದೆ. ಸಮಸ್ಯೆ ಇದ್ದ ಕಡೆ ಖಾಸಗಿ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ಶಿಕ್ಷಕರ ಕೊರತೆ ಎದುರಾಗಿರುವ ಶಾಲೆಗಳಿಗೆ ಕೂಡಲೇ ನಿಯೋಜನೆಯ ಮೂಲಕ ಹೊಂದಾಣಿಕೆ ಮಾಡಲಾಗುವುದು.
ಈಶ್ವರ್ಚಂದ್, ಕ್ಷೇತ್ರ ಶಿಕ್ಷಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ