ಆಸ್ಪತ್ರೆ ಅವ್ಯವಸ್ಥೆ ಕಂಡು ಹೌಹಾರಿದ ಜಿಪಂ ತಂಡ


Team Udayavani, Jun 16, 2018, 9:54 AM IST

davangere-1.jpg

ದಾವಣಗೆರೆ: ಸುಮಾರು 80 ವರ್ಷದ ಹಳೆಯ ಕಟ್ಟಡದ ಮೇಲೆ 9 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟುತ್ತಿರುವುದನ್ನು
ಕಂಡು ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಕ್ಷಣ ಕಾಲ ಅವಕ್ಕಾದ ಘಟನೆ ಶುಕ್ರವಾರ ಚಾಮರಾಜಪೇಟೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್‌ ಭೇಟಿ ಸಂದರ್ಭದಲ್ಲಿ ನಡೆಯಿತು.

ಜಿಪಂ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು, ಉಪಾಧ್ಯಕ್ಷೆ ಗೀತಾ ಗಂಗಾನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶೈಲ ಬಸವರಾಜ್‌, ಬಿ.ಎಂ. ವಾಗೀಶಸ್ವಾಮಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಸಂದರ್ಭದಲ್ಲಿ 1932ರಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆ ಕಟ್ಟಡದ ಮೇಲೆ ಮತ್ತೂಂದು ಕಟ್ಟಡ ಕಟ್ಟುತ್ತಿರುವುದನ್ನು ಕಂಡು ಬೆಚ್ಚಿ ಬಿದ್ದರು.

ಮಳೆಗಾಲದಲ್ಲಿ ಸೋರುವ ಹಳೆಯ ಕಟ್ಟಡದ ಮೇಲೆ ಇನ್ನೊಂದು ಕಟ್ಟಡ ಕಟ್ಟಲಿಕ್ಕೆ ಸಾಧ್ಯವೇ?. ಇದಕ್ಕೆ
ಪರವಾನಗಿ ಪಡೆಯಲಾಗಿದೆಯೇ ಎಂದು ಪ್ರಶ್ನಿಸಿದರು. ಸಂಬಂಧಿತ ಇಲಾಖೆಯಿಂದ ಎನ್‌ಒಸಿ (ನೋ ಅಬ್ಜೆಕ್ಷನ್‌ ಸರ್ಟಿ ಫಿಕೇಟ್‌)  ಪಡೆದಿರುವುದಾಗಿ ಗುತ್ತಿಗೆದಾರ  ತಿಳಿಸಿದರು.

ವಾರ್ಡ್‌ಗಳಲ್ಲೂ ಯಾವುದೇ  ರೀತಿಯ ಸ್ವಚ್ಛ ಇಲ್ಲ. ದುರ್ವಾಸನೆ ಹರಡಿದೆ. ಹೊರ ಮತ್ತು ಒಳ ರೋಗಿಗಳಿಗೆ ಶುದ್ಧ ಕುಡಿಯುವ ನೀರು ಕೂಡ ಇಲ್ಲ. ಹಾಸಿಗೆ, ಹೊದಿಕೆಗಳು ಗಲೀಜಾಗಿರುವುದನ್ನು ನೋಡಿದರೆ ಆಸ್ಪತ್ರೆ ಎನ್ನುವಂತಿಲ್ಲ ಎಂದು ಭೇಟಿ ನೀಡಿದ ತಂಡ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಜನರು ಗುಣಮುಖರಾಗಲು ಆಸ್ಪತ್ರೆಗೆ ಬರುತ್ತಾರೆ. ಅದರೆ, ಇಲ್ಲಿ ನೋಡಿದರೆ ರೋಗ ಇಲ್ಲದವರಿಗೂ ರೋಗ ಬರುವಂತಿದೆ. ಮೊದಲು ಸ್ವತ್ಛ, ಶುದ್ಧ ವಾತಾವರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಂಡ  ಸೂಚಿಸಿತು.

ಸ್ನಾನಕ್ಕೆ ಬಿಸಿ ನೀರು, ಶುದ್ಧ ಕುಡಿಯುವ ನೀರು ಇಲ್ಲ, ರೋಗಿಗಳ ವಸ್ತು ಇಟ್ಟುಕೊಳ್ಳಲು ಯಾವುದೇ ಟೇಬಲ್‌ ಇಲ್ಲ ಎಂಬ ಆರೋಪಗಳು ರೋಗಿಗಳು, ಸಂಬಂಧಿಕರಿಂದ ಕೇಳಿ ಬಂದವು. ನೂತನವಾಗಿ ನಿರ್ಮಿಸಲಾಗುತ್ತಿರುವ ನೂರು ಹಾಸಿಗೆಯುಳ್ಳ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದ  ತಂಡ, ಈ ಕಟ್ಟಡಕ್ಕೆ ಈಗಾಗಲೇ 50 ಹಾಸಿಗೆಗಳು ಮಂಜೂರಾಗಿವೆ. ಬೇಗೆನೆ ಪೂರ್ಣಗೊಳಿಸಬೇಕು ಎಂದು ಸೂಚಿಸಿತು.

ಅರವಳಿಕೆ ತಜ್ಞ ಡಾ| ಬಸವರಾಜ್‌ ಮಾತನಾಡಿ, ಆಸ್ಪತ್ರೆಯಲ್ಲಿನ ಸಣ್ಣಪುಟ್ಟ ಸಮಸ್ಯೆಗಳ ನಿವಾರಣೆಗೆ ಯಾವುದೇ ರೀತಿಯ ಅನುದಾನ ಇಲ್ಲದೆ ಸಮಸ್ಯೆ ಆಗುತ್ತಿದೆ. ರೋಗಿಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಡಳಿತಾತ್ಮಕ
ಖರ್ಚಿಗಾಗಿ 2 ಲಕ್ಷ ನೀಡಲಾಗುತ್ತಿದೆ. ಸಣ್ಣಪುಟ್ಟ ಸಮಸ್ಯೆ ಬಗೆಹರಿಸಿಕೊಳ್ಳಲು, ನಿರ್ವಹಣೆಗಾಗಿ ಪ್ರತ್ಯೇಕ ಅನುದಾನದ ಅಗತ್ಯ ಇದೆ ಎಂದು ತಿಳಿಸಿದರು. ಪ್ರಭಾರ ಅಧೀಕ್ಷಕ ಡಾ| ನೀಲಕಂಠ ಇದ್ದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.