ಅವಸರದಿಂದ ಕೆಲಸ ಮಾಡಿ ಕೆಡಿಸದಿರಿ
Team Udayavani, Jun 20, 2018, 9:54 AM IST
ದಾವಣಗೆರೆ: ಗಾಜಿನಮನೆ ನಿರ್ಮಾಣದಲ್ಲಿ ಆಗಿರುವ ಲೋಪದೋಷ ಸರಿಪಡಿಸಿ ಪ್ರವಾಸಿಗರನ್ನ ಆಕರ್ಷಿಸುವಂತೆ ಮಾಡಬೇಕು ಎಂದು ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಭೂಸೇನಾ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳವಾರ ಗಾಜಿನಮನೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈಚೆಗೆ ಗ್ಲಾಸ್ ಹೌಸ್ನ ಗಾಜು ಒಡೆದು ಬಿದ್ದಿವೆ. ಯಾವುದೇ ಅನಾಹುತ ಸಂಭವಿಸಿಲ್ಲ. ಮುಂಜಾಗ್ರತೆಯಾಗಿ ಸಡಿಲಗೊಂಡಿರುವ ಗಾಜುಗಳನ್ನು ತೆರವುಗೊಳಿಸಿ, ಹೊಸದಾಗಿ ಗಾಜುಗಳನ್ನು ಭದ್ರವಾಗಿ ಅಳವಡಿಸಬೇಕು. ಯಾವುದೇ ಕಾರಣಕ್ಕೂ ಗಾಜಿನ ಮನೆಯ ಗಾಜುಗಳು ಕಳಚಿ ಬೀಳದಂತೆ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಗಾಜಿನಮನೆಯ ನ್ಯೂನತೆ ಸರಿಪಡಿಸಿ, ಸಾರ್ವಜನಿಕರನ್ನ ಆಕರ್ಷಿಸುವಂತೆ ಮಾಡಬೇಕು ಎಂದಾಗ, ಅಧಿಕಾರಿಗಳು ಇನ್ನೂ 15 ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಹೇಳಿದರು. ಅವಸರ ಅವಸರವಾಗಿ ತರಾತುರಿಯಲ್ಲಿ ಕೆಲಸ
ಮಾಡಿ, ಕೆಡಿಸಬೇಡಿ, ಕೆಲಸ ನಿಧಾನವಾಗಿ ಆದರೂ ಪರವಾಗಿಲ್ಲ. ಗುಣಮಟ್ಟದ ಕೆಲಸ ಮಾಡಬೇಕು. ಗಾಜುಗಳನ್ನು ಭದ್ರವಾಗಿ ಅಳವಡಿಸಿ ಮುಂದೆ ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
ಗಾಜಿನಮನೆಯ ಕಂಟ್ರೋಲ್ರೂಂ, ಸಂಗೀತ ಕಾರಂಜಿ ಹಾಗೂ ಸುತ್ತಮುತ್ತಲ ಪ್ರದೇಶ ವೀಕ್ಷಿಸಿ ಸುಸಜ್ಜಿತವಾಗಿ ಗ್ಲಾಸ್ಹೌಸ್ ನಿರ್ಮಾಣ ಆಗಿದೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರಾದ ಶಿವರಾಜ ಪಾಟೀಲ, ಎಲ್.ಎನ್. ಕಲ್ಲೇಶ್, ರಾಂಪುರ ನರೇಂದ್ರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಟಿ.ಆರ್. ವೇದಮೂರ್ತಿ, ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕಾಧಿಕಾರಿ ಎಲ್.ಎಸ್. ಪ್ರಭುದೇವ್, ಭೂ ಸೇನಾ ನಿಗಮದ ಅಧಿಕಾರಿಗಳು ಇದ್ದರು.
ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರವೀಂದ್ರನಾಥ್, ಆಸ್ಪತ್ರೆ ಕಟ್ಟಡ ಶಿಥಿಲವಾಗಿದೆ. ಸಂಬಂಧಿತರು ಕಟ್ಟಡ ಸಂರಕ್ಷಣೆಗೆ ಹೆಚ್ಚಿನ ಗಮನ ನೀಡಬೇಕು. ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಗಬೇಕಾಗಿರುವ ಅಭಿವೃದ್ದಿ ಕಾರ್ಯಕ್ಕೆ ಅನುದಾನ ಬಳಕೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರು.
ಪ್ರಧಾನಿಮಂತ್ರಿಗಳ ಮಹತ್ವಾಕಾಂಕ್ಷಿಯ ಜೆನರಿಕ್ ಔಷಧಿ ಮಳಿಗೆಯಿಂದ ಜನರಿಗೆ ಅನುಕೂಲ ಆಗುತ್ತದೆ. ಜೆನರಿಕ್ ಔಷಧಿ ಮಳಿಗೆಯಲ್ಲಿ ಕೆಲ ಔಷಧಿ ದೊರೆಯುವುದಿಲ್ಲ ಎಂಬ ದೂರು ಕೇಳಿ ಬರುತ್ತಿವೆ. ಆ ಬಗ್ಗೆ ಗಮನ ಹರಿಸಬೇಕು. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾ
ವಹಿಸಬೇಕು ಎಂದು ಸೂಚಿಸಿದರು.
ಆಸ್ಪತ್ರೆ ಅಧೀಕ್ಷಕಿ ಡಾ| ಎಚ್.ಡಿ. ನೀಲಾಂಬಿಕೆ, ನಿವಾಸಿ ವೈದ್ಯಾಧಿಕಾರಿ ಡಾ| ಎಚ್.ಎಸ್. ರಾಘವೇಂದ್ರಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ