ಯೋಗ ಆರೋಗ್ಯಕ್ಕೆ ಸುಪ್ರೀಂ ಕೋರ್ಟ್: ಶ್ರೀ
Team Udayavani, Jun 21, 2018, 9:45 AM IST
ದಾವಣಗೆರೆ: ಅಲೋಪತಿ, ಹೊಮಿಯೋಪಥಿ ಕೆಳ ಹಂತದ ಕೋರ್ಟ್. ಆಯುರ್ವೇದ ಹೈಕೋರ್ಟ್,
ಯೋಗ ಸುಪ್ರೀಂ ಕೋರ್ಟ್ ಇದ್ದ ಹಾಗೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಬಣ್ಣಿಸಿದ್ದಾರೆ.
ನಗರದ ಸರ್ಕಾರಿ ಬಾಲಕರ ಹೈಸ್ಕೂಲ್ ಮೈದಾನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ತಪೋವನ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪತಂಜಲಿ ಯೋಗ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಯೋಗ ಒಕ್ಕೂಟದಿಂದ 4ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ವಿದ್ಯಾರ್ಥಿಗಳ ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಮಾತನಾಡಿದ ಅವರು, ನಿತ್ಯವೂ ಯೋಗಾಸನ ಮಾಡಿ, ಆರೋಗ್ಯವಂತರಾಗಿರಿ. ಹಾಗೆಯೇ ಪ್ರತಿಯೊಬ್ಬರೂ ಮದ್ಯ ಬಿಟ್ಟು, ಗ್ರೀನ್ ಟೀ ಕುಡಿಯಿರಿ. ಇದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.
ಪ್ರತಿನಿತ್ಯದ ಯೋಗಭ್ಯಾಸದಿಂದ ದೇಹಕ್ಕೆ ಶಕ್ತಿ ಬರುತ್ತದೆ. ವ್ಯಕ್ತಿತ್ವ ವಿಕಸನ ಹೊಂದಲಿದೆ. ಮುಖದಲ್ಲಿ ಕಾಂತಿ ಹೊಮ್ಮುತ್ತದೆ. ಸರಿಯಾಗಿ ಉಸಿರಾಡುವುದು ಹಾಗೂ ವಿವಿಧ ಬಗೆಯ ಯೋಗಾಸನ ಮಾಡುವುದರಿಂದ ಯಾವುದೇ
ಕಾಯಿಲೆಗಳು ಹತ್ತಿರ ಸುಳಿಯವುದಿಲ್ಲ ಎಂದರು. ಹಾಡಿ ಹಾಡಿ ರಾಗಾ ಬಂತು….ಉಗುಳಿ ಉಗುಳಿ ರೋಗ ಬಂತು ಎನ್ನುವ ಹಾಗೆ ಪ್ರತಿಯೊಬ್ಬರೂ ಲಾಲಾರಸವನ್ನು ಎಲ್ಲೆಂದರಲ್ಲಿ ಉಗುಳುತ್ತಿದ್ದಾರೆ.
ಈ ಲಾಲಾ ರಸದಲ್ಲಿ 1 ಲಕ್ಷ ಜೀವರಾಶಿಗಳು ಇರುತ್ತವೆ. ಈ ಕಾರಣಕ್ಕಾಗಿಯೇ ಪ್ರಾಣಿಗಳು ಗಾಯದ ಮೇಲೆ ನೆಕ್ಕುತ್ತಲೇ ಇರುವುದು. ಹಾಗಾಗಿ ಗಾಯ ಬೇಗ ಮಾಯವಾಗುತ್ತದೆ. ಆದ್ದರಿಂದ ಯಾರೂ ಕೂಡ ಉಗುಳಬೇಡಿ ಎಂದು ಅವರು ಸಲಹೆ ನೀಡಿದರು.
ಯೋಗ ಜಾಗೃತಿ ಜಾಥಾ ಉದ್ಘಾಟಿಸಿದ ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ಯೋಗ ಮಾಡುವುದರಿಂದ ಸಕ್ಕರೆ ಕಾಯಿಲೆ, ಹೃದಯ, ಮೈ, ಕೈ ನೋವು ಮಾಯವಾಗುತ್ತವೆ. ಯೋಗ ಬಲ್ಲವರು ಆರೋಗ್ಯವಂತರಾಗಿರುವುದರ ಜೊತೆಗೆ ಚೈತನ್ಯಶೀಲರಾಗಿರುತ್ತಾರೆ. ಯೋಗ ಹೆಚ್ಚು ಸಮಯ ಕೆಲಸ ಮಾಡಲು ಉತ್ಸಾಹ ತುಂಬುತ್ತದೆ ಎಂದರು.
ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮಾತನಾಡಿ,ಯೋಗ ಆರೋಗ್ಯ ನೀಡುವುದರ ಜೊತೆಗೆ ಉತ್ತಮ ಮನುಷ್ಯರಾಗಿ ಬದುಕಲು ದಾರಿ ದೀಪವಾಗುತ್ತದೆ ಎಂದರು.
ಯೋಗ ಜಾಗೃತಿ ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜುಗಳಿಂದ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ವೇಳೆ ಯೋಗಪಟು ಅರ್ಜೇಟೆನಾ ವಿಕ್ಟರ್ ಡ್ರಿಯಾನೋ, ಇಳಕಲ್ ವಿಜಯ ಮಹಾಂತೇಶ್ವರ
ಮಠದ ಶ್ರೀ ಗುರು ಮಹಾಂತೇಶ್ವರ ಸ್ವಾಮೀಜಿ, ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ಬಿ.ಸಿ. ಉಮಾಪತಿ, ಜಿಪಂ ಉಪಾಧ್ಯಕ್ಷೆ ಗೀತಾ ಗಂಗಾನಾಯ್ಕ, ಜಿಪಂ ಸದಸ್ಯೆ ಶೈಲಾ ಬಸವರಾಜ್, ಪಾಲಿಕೆ ಮೇಯರ್ ಶೋಭಾ ಪಲ್ಲಾಗಟ್ಟೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೋದಂಡರಾಮ್, ಪಿಯು ಡಿಡಿ
ಸಾವಿತ್ರಮ್ಮ, ಜಿಲ್ಲಾ ಆಯುಷ್ ಅಧಿಕಾರಿ ಸಿದ್ದೇಶ್, ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ
ವಾಸುದೇವ್ ರಾಯ್ಕರ್, ಎನ್ಸಿಸಿ ಕರ್ನಲ್ ಕೃಷ್ಣ ನಾಯರ್ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ