ಔಷಧ ಉದ್ಯಮದ ಮೇಲೆ ಎಂಎನ್‌ಸಿಗಳ ಕಣ್ಣು: ಕುಮಾರಸ್ವಾಮಿ


Team Udayavani, Jun 25, 2018, 10:56 AM IST

davangere-2.jpg

ದಾವಣಗೆರೆ: ದೇಶದ ಔಷಧ ಉದ್ಯಮದ ಮೇಲೆ ಬಹುರಾಷ್ಟ್ರೀಯ ಕಂಪನಿಗಳ ಕರಿಗಣ್ಣು ಬಿದ್ದಿದ್ದು, ಇದು ಸಣ್ಣ ವ್ಯಾಪಾರಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ವದೇಶಿ ಜಾಗರಣ ಮಂಚ್‌ನ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಂ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಭಾನುವಾರ ನಗರದ ಸದ್ಯೋಜಾತ ಶಿವಾನಿಕೇತನ ಹಿರೇಮಠದಲ್ಲಿ ತಾಲೂಕು ಔಷಧ ವ್ಯಾಪಾರಿಗಳ ಸಂಘದ ಉದ್ಘಾಟನೆ, ನಿರಂತರ ಕಲಿಕೆ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿದೇಶಿ ಔಷಧ ಕಂಪನಿಗಳ ವ್ಯವಸ್ಥೆಯು ಕೇಂದ್ರೀಕೃತವಾಗಿದ್ದರೆ, ಭಾರತೀಯ ಔಷಧ ಉದ್ಯಮವು ವಿಕೇಂದ್ರೀಕೃತ ವ್ಯವಸ್ಥೆಯಾಗಿದೆ.
ಇಲ್ಲಿ ಸಾವಿರಾರು ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದು, ಲಕ್ಷಾಂತರ ಕುಟುಂಬಗಳಿಗೆ ಜೀವನೋಪಾಯಕ್ಕೆ ಮಾರ್ಗವಾಗಿದೆ. 

ಬಹುರಾಷ್ಟ್ರೀಯ ಕಂಪನಿಗಳು ಒಂದು ವೇಳೆ ಔಷಧ ಉದ್ಯಮದ ಮೇಲೆ ಹಿಡಿತ ಸಾಧಿಸಿದರೆ ದುಷ್ಪರಿಣಾಮ ಬೀರುವುದು ಖಚಿತ ಎಂದರು. ನಮ್ಮಲ್ಲಿ ಈಗ ಕೈಗೆಟಕುವ ದರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಔಷಧ ಉತ್ಪಾದನೆಯಾಗುತ್ತಿವೆ. 

ಔಷಧ ಉತ್ಪಾದನೆಯಲ್ಲಿ ಭಾರತ ಜಗತ್ತಿನಲ್ಲಿ 3ನೇ ಸ್ಥಾನದಲ್ಲಿದೆ. 2017-18ನೇ ಸಾಲಿನಲ್ಲಿ ಭಾರತದಿಂದ 16.4 ಶತಕೋಟಿ ಡಾಲರ್‌ ಮೌಲ್ಯದ ಔಷಧ ಉತ್ಪನ್ನಗಳು ವಿದೇಶಕ್ಕೆ ರಫ್ತಾಗಿವೆ. ಇದರಲ್ಲಿ ಅಮೇರಿಕಾಕ್ಕೆ ಶೇ.40,
ಯೂರೋಪ್‌ ರಾಷ್ಟ್ರಗಳಿಗೆ ಶೇ.20, ಆಫ್ರಿಕಾ ದೇಶಗಳಿಗೆ ಶೇ.19 ಹಾಗೂ ಏಷ್ಯನ್‌ ರಾಷ್ಟ್ರಗಳಿಗೆ ಶೇ. 21ರಷ್ಟು ಉತ್ಪನ್ನ ಸೇರಿವೆ. ಪ್ರಪಂಚದ ಒಟ್ಟು ಔಷಧ ಉತ್ಪನ್ನದಲ್ಲಿ ಭಾರತದ ಪಾಲು ಶೇ. 20ರಷ್ಟಿದೆ ಎಂದು ಅವರು ತಿಳಿಸಿದರು.

ಔಷಧ ಉದ್ಯಮದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ಕೊಟ್ಟಿದ್ದರಿಂದ ಸಾಕಷ್ಟು ಕಂಪನಿಗಳು ಲಗ್ಗೆ ಹಾಕಿದ್ದವು. ಆದರೆ, ಆ ಕಂಪನಿಗಳು ಹೊಸ ಉತ್ಪಾದಕ ಕೈಗಾರಿಕೆಗಳನ್ನೇನೂ ಹುಟ್ಟು ಹಾಕಲಿಲ್ಲ. ಬದಲಿಗೆ ದೇಶದಲ್ಲಿ ಹಾಲಿ ಇರುವ ಪ್ರಮುಖ ಕಂಪನಿಗಳನ್ನೇ ಖರೀದಿಸಿ, ಔಷಧ ಉದ್ಯಮದ ಮೇಲೆ ಏಕಸ್ವಾಮ್ಯ ಸಾಧಿಸಲು ಯತ್ನಿಸಿದವು. ಸದ್ಯ ಅಂತಹ ಪ್ರಯತ್ನಗಳಿಗೆ ಕಡಿವಾಣ ಬಿದ್ದಿದ್ದರೂ, ದೇಶೀಯ ಔಷಧ ಉದ್ಯಮ ಹೊಸ ಹೊಸ ಸವಾಲುಗಳಿಗೆ ತೆರೆದುಕೊಂಡಿದೆ ಎಂದು ಅವರು ಹೇಳಿದರು.

ಆಧುನಿಕ ಯುಗದಲ್ಲಿ ಆನ್‌ಲೈನ್‌ ಟ್ರೇಡಿಂಗ್‌ ಸಣ್ಣ ವ್ಯಾಪಾರಿಗಳಿಗೆ ಕಂಟಕಪ್ರಾಯವಾಗಿದೆ. ನಮ್ಮ ಇಡೀ ದೇಶದ ಚಿಲ್ಲರೆ ವಹಿವಾಟು ಅಮೇರಿಕಾದ ವಾಲ್‌ಮಾರ್ಟ್‌ ಕಂಪನಿಯ ವಾರ್ಷಿಕ ವಹಿವಾಟಿಗಿಂತಲೂ ಕಡಿಮೆ ಇದೆ. ಸ್ವಾತಂತ್ರ್ಯ ಪೂರ್ವದ 1940ರ ಡ್ರಗ್ಸ್‌ ಅಂಡ್‌ ಫಾರ್ಮಸಿಟಿಕಲ್‌ ಆಕ್ಟ್ ಕಾಯ್ದೆಯಲ್ಲಿ ಆನ್‌ಲೈನ್‌ ಟ್ರೇಡಿಂಗ್‌ಗೆ ಕಡಿವಾಣ ಹಾಕುವ ಅವಕಾಶವಿಲ್ಲ. ಆದರೂ, 2005ರ ಪೇಟೆಂಟ್‌ ಕಾಯ್ದೆಯ ಸೆಕ್ಷನ್‌ 3ಡಿ ಹಾಗೂ ಸೆಕ್ಷನ್‌ 84 ಔಷಧ ಉತ್ಪಾದಕರು, ವಿತರಕರು ಹಾಗೂ ರೋಗಿಗಳನ್ನು ಕಾಪಾಡಲು ಸಮರ್ಥವಾಗಿದ್ದು, ಡಬ್ಲುಟಿಒ ಒಪ್ಪಂದದಂತೆ ಇದನ್ನು
ತೆಗೆದುಹಾಕಲು ಬಹುರಾಷ್ಟ್ರೀಯ ಕಂಪನಿಗಳ ಒತ್ತಡ ನಿರಂತರವಾಗಿದೆ ಎಂದು ಅವರು ತಿಳಿಸಿದರು.

ಔಷಧ ವ್ಯಾಪಾರಿಗಳ ತಾಲೂಕು ಸಂಘದ ಅಧ್ಯಕ್ಷ ಬಿ.ಒ. ಮಲ್ಲಿಕಾರ್ಜುನ್‌ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ ವಲಯ ಉಪ ಔಷಧ ನಿಯಂತ್ರಕ ಬಿ.ಪಿ.ಅರುಣಕುಮಾರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಜಿ.ಡಿ. ರಾಘವನ್‌, ಕೆ.ಇ.ಪ್ರಕಾಶ, ಡಿ. ಬಾಲಚಂದ್ರ ರೆಡ್ಡಿ, ಸಿ. ಕುಮಾರ, ಆರ್‌. ಪರಶುರಾಮ, ಎಂ.ಎಸ್‌.ಗೀತಾ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.