ಕಾವಲುಗಾರರ ಮೇಲಿನ ಪ್ರೀತಿಗೆ ವಿದ್ಯಾರ್ಥಿಗಳ ಪ್ರತಿಭಟನೆ !
Team Udayavani, Jun 29, 2018, 3:36 PM IST
ಚನ್ನಗಿರಿ: ಹಾಸ್ಟೆಲ್ ರಾತ್ರಿ ಪಾಳಿಯ ಕಾವಲುಗಾರರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಯಾರೋ ಹೇಳಿದ ಮಾತು ಕೇಳಿ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ರಾತ್ರಿ ಊಟವನ್ನು ತ್ಯಜಿಸಿ ಪ್ರತಿಭಟನೆ ಮಾಡಲು ಮುಂದಾದ ಘಟನೆ ತಾಲೂಕಿನ ಕೆರೆಬಿಳಚಿ ಗ್ರಾಮದಲ್ಲಿರುವ ಬಿಸಿಎಂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ರಾತ್ರಿ ನಡೆದಿದೆ.
ಕೆರೆಬಿಳಚಿ ಗ್ರಾಮದಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ 5ನೇ ತರಗತಿಯಿಂದ 10 ನೇ ತರಗತಿಯವರೆಗಿನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಸತಿ ನಿಲಯದಲ್ಲಿ ಜ್ಯೋತಿ ಮತ್ತು ಭಾರತಿ ಎಂಬ ಇಬ್ಬರು ಕಾವಲುಗಾರರು ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ.
ಅವರನ್ನು ತೆಗೆದು ಹಾಕಲಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಮಕ್ಕಳು ಊಟ ತ್ಯಜಿಸಿ ಅದೇ ಕಾವಲುಗಾರರು ನಮಗೆ
ಬೇಕು. ಇಲ್ಲವಾದರೆ ನಾವು ಊಟವನ್ನು ಮಾಡುವುದಿಲ್ಲ ಎಂದು ಪ್ರತಿಭಟನೆಗೆ ಮುಂದಾಗಿದ್ದಾರೆ.
ನಂತರ ಹಾಸ್ಟೆಲ್ ವಾರ್ಡ್ನ್ ದೂರವಾಣಿ ಮೂಲಕ ಮಾತನಾಡಿ ಯಾರನ್ನೂ ಕೆಲಸದಿಂದ ತೆಗೆದುಹಾಕಿಲ್ಲ
ಎಂದು ಸ್ಪಷ್ಟಪಡಿಸಿದ ನಂತರ ಮಕ್ಕಳು ಊಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಾಸ್ಟೆಲ್ನಲ್ಲಿ ಜ್ಯೋತಿ ಮತ್ತು ಭಾರತಿ ಎಂಬುವರು ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು
ತೆಗೆದುಹಾಕಲಾಗಿದೆ ಎಂದು ಯಾರೋ ಹೇಳಿದ ಮಾತನ್ನು ಕೇಳಿ ಮಕ್ಕಳು ಈ ರೀತಿ ಮಾಡಿದ್ದಾರೆ. ಯಾರನ್ನೂ ತೆಗೆದುಹಾಕಿಲ್ಲ. ಮಕ್ಕಳಿಗೆ ವಿಷಯವನ್ನು ತಿಳಿಸಿದ್ದು ಮಕ್ಕಳು ಊಟ ಮಾಡಲು ಮುಂದಾಗಿದ್ದಾರೆ.
ಮಮತ, ಹಾಸ್ಟೆಲ್ವಾರ್ಡನ್.
ಜ್ಯೋತಿ, ಮತ್ತು ಭಾರತಿ ಮೇಡಮ್ ನಮ್ಮನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಾರೆ. ಇವರನ್ನು ಹಾಸ್ಟೆಲ್ನಿಂದ ತೆಗೆದುಹಾಕಿದ್ದಾರೆ ಎಂದು ಅವರೇ ಹೇಳಿದ್ದರು. ಅವರನ್ನು ಕೆಲಸದಿಂದ ತೆಗೆದರೆ ನಾವ್ಯಾರೂ ಮಕ್ಕಳು ಹಾಸ್ಟೆಲ್ನಲ್ಲಿ ಇರುವುದಿಲ್ಲ.
ತಸ್ಮಿಯಾ, ಹಾಸ್ಟೆಲ್ ವಿದ್ಯಾರ್ಥಿನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್