ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ-ಸೌಲಭ್ಯ ಸಿಗಲಿ


Team Udayavani, Jul 3, 2018, 3:31 PM IST

dvg-1.jpg

ದಾವಣಗೆರೆ: ನಾವು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಗಮನಕ್ಕೆ ತರುವುದಲ್ಲ. ಕೊರತೆ ಬಗ್ಗೆ ಸಭೆಗಳಲ್ಲಿ ಪ್ರಸ್ತಾಪಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ನೇತೃತ್ವದ ತಂಡ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ಸೂಚಿಸಿದೆ. 

ಜಿಪಂ ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ. ವಾಗೀಶ್‌ಸ್ವಾಮಿ, ಸದಸ್ಯೆ ಶೈಲಜಾ ಬಸವರಾಜ್‌ ಅವರಿದ್ದ ತಂಡ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ವಿವಿಧ ವಿಭಾಗ ಪರಿಶೀಲಿಸಿದ ವೇಳೆ ವೈದ್ಯಾಧಿಕಾರಿಗಳು ಅಲ್ಲಿನ ಸಮಸ್ಯೆ ಹೇಳಿದಾಗ, ಅಗತ್ಯ ಇರುವ ಉಪಕರಣಗಳ ಬಗ್ಗೆ ಸಂಬಂಧಿತರ ಗಮನಕ್ಕೆ ತಂದು, ಅವುಗಳನ್ನ ತರಿಸಿಕೊಂಡು ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಕೊಡುವಂತಾಗಬೇಕು. ಯಂತ್ರೋಪಕರಣಗಳ ಕೊರತೆ ಮುಂದಿಟ್ಟುಕೊಂಡು ಆಸ್ಪತ್ರೆಗೆ ಬಂದವರಿಗೆ ತೊಂದರೆ ಕೊಡುವುದು ಸರಿಯಲ್ಲ. ಸಕಾಲಿಕವಾಗಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿತು.

ಸಂಜೆಯ ವೇಳೆಯಲ್ಲೂ ಹೊರ ರೋಗಿ ವಿಭಾಗದಲ್ಲಿ ಅತಿ ಹೆಚ್ಚಿನ ಜನರು ಇರುವುದನ್ನು ಕಂಡು ಪ್ರಶ್ನಿಸಿದ ಜಿಪಂ ತಂಡಕ್ಕೆ, ಸೋಮವಾರ ದಾವಣಗೆರೆ ಜಿಲ್ಲೆಯ ವಿವಿಧ ಭಾಗದಿಂದ ಮಾತ್ರವಲ್ಲ, ಹೊರ ಜಿಲ್ಲೆಯಿಂದಲೂ ಜನರು ಆಗಮಿಸುತ್ತಾರೆ. ಹಾಗಾಗಿಯೇ ಅತಿ ಹೆಚ್ಚಿನ ಜನರು ಇದ್ದಾರೆ ಎಂದು ನಿವಾಸಿ ವೈದ್ಯಾಧಿಕಾರಿ ಡಾ| ರಾಘವೇಂದ್ರಸ್ವಾಮಿ ಹೇಳಿದರು. 

ಸ್ಕ್ಯಾನಿಂಗ್‌ ಸೆಂಟರ್‌ನಲ್ಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇರುವುದು ಕಂಡು ಬಂದಿತು. ಅಧ್ಯಕ್ಷೆ ಮಂಜುಳಾ ಟಿ.ವಿ. ರಾಜು ಕಾರಣ ಕೇಳಿದಾಗ, ಹಾವೇರಿ, ಬಳ್ಳಾರಿ ಜಿಲ್ಲೆಯ ಭಾಗದಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗರ್ಭಿಣಿಯರು ಹೆರಿಗೆಗೆ ದಾಖಲಾಗುತ್ತಾರೆ. ತಿಂಗಳಿಗೆ ಕನಿಷ್ಠ 900 ಹೆರಿಗೆ ಆಗುತ್ತವೆ. ಸಹಜವಾಗಿಯೇ ಒತ್ತಡ ಇರುತ್ತದೆ. ಹಳೆ ಹೆರಿಗೆ ಆಸ್ಪತ್ರೆ ಜೊತೆಗೆ 100 ಹಾಸಿಗೆ ಸಾಮರ್ಥ್ಯದ ಹೊಸ ಆಸ್ಪತ್ರೆಗೆ ಬೇಡಿಕೆ ಸಲ್ಲಿಸಲಾಗಿದೆ. ಇನ್ನೂ ಮಂಜೂರಾತಿ ಆಗಿಲ್ಲ ಎಂದು ನಿವಾಸಿ ವೈದ್ಯರು ತಿಳಿಸಿದರು.

ಹೊಸ ಆಸ್ಪತ್ರೆಗೆ ಬೇಡಿಕೆ ಸಲ್ಲಿಸಿ ಎಷ್ಟು ದಿನಗಳಾಗಿವೆ. ಸಂಬಂಧಿತ ಸಚಿವರು, ಶಾಸಕರ ಗಮನಕ್ಕೆ ತರಲಾಗಿದೆಯೇ ಎಂಬ ಪ್ರಶ್ನೆಗೆ ಇದು ಬಹಳ ದಿನಗಳ ಬೇಡಿಕೆ ಎಂದು ಆಸ್ಪತ್ರೆ ಅಧೀಕ್ಷಕಿ ಡಾ| ನೀಲಾಂಬಿಕೆ ತಿಳಿಸಿದರು. ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿರುವ ಹೈಯರ್‌ ಎಂಡ್‌ ಅಲ್ಟ್ರಾಸೌಂಡ್‌ ಮೆಷಿನ್‌ಗೆ ಅಗತ್ಯ ಹೈಯರ್‌ ಎಂಡ್‌ ವ್ಯವಸ್ಥೆಯೇ ಇಲ್ಲ. ಮೈಂಡ್‌ಡ್ರೈ ಮೆಷಿನ್‌ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಡಿಜಿಟಲ್‌ ಎಕ್ಸ್‌ರೇ ಫಿಲಂ… ಕೊರತೆ ಇದೆ ಎಂದು ಅಲ್ಲಿನ ಸಿಬ್ಬಂದಿ ತಂಡದ ಗಮನಕ್ಕೆ ತಂದರು. 

ಮಹಿಳೆಯರ ವೈದ್ಯಕೀಯ ಚಿಕಿತ್ಸಾ ವಿಭಾಗ, ಹೃದ್ರೋಗ ವಿಭಾಗ, ವೆಂಟಿಲೇಟರ್‌, ಮೂತ್ರಪಿಂಡ ಚಿಕಿತ್ಸಾ ವಿಭಾಗ ಇತರೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಬರುವರಿಗೆ ಯಾವುದೇ ರೀತಿಯ ಲೋಪವಾಗದಂತೆ ಸಕಾಲಿಕ ಚಿಕಿತ್ಸೆ ಒದಗಿಸಲು ತಂಡ ತಿಳಿಸಿದೆ.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.