ಗ್ರಾಮೀಣಾಭಿವೃದ್ಧಿ ಕೇಂದ್ರಿತ ಸಂಶೋಧನೆ ಹೆಚ್ಚಾಗಲಿ
Team Udayavani, Jul 9, 2018, 4:16 PM IST
ದಾವಣಗೆರೆ: ವಿಜ್ಞಾನ ಕ್ಷೇತ್ರದಲ್ಲಿ ಗ್ರಾಮೀಣ ಭಾರತದ ಜನರ ಶ್ರೇಯೋಭಿವೃದ್ಧಿ ಉದ್ದೇಶದ ಸಂಶೋಧನೆ ನಡೆಯುವಂತಾಗಬೇಕು ಎಂದು ಜಿಲ್ಲಾ ವಿಜ್ಞಾನ ಪರಿಷತ್ ಅಧ್ಯಕ್ಷ ಡಾ| ಬಿ.ಇ.ರಂಗಸ್ವಾಮಿ ಆಶಿಸಿದ್ದಾರೆ.
ಭಾನುವಾರ ಶಿರಮಗೊಂಡನಹಳ್ಳಿಯ ಅನ್ಮೋಲ್ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ಅಭಿವೃದ್ಧಿಯನ್ನೇ ದೃಷ್ಟಿಯಲ್ಲಿಟ್ಟುಕೊಂಡು ಸಂಶೋಧನೆ ನಡೆಸುವ ಮೂಲಕ ಸಮಾಜ ಮತ್ತು ದೇಶಕ್ಕೆ ಉತ್ತಮ
ಕೊಡುಗೆ ನೀಡುವಂತಾದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನದ ಅಗತ್ಯತೆ ಹಿಂದಿಗಿಂತಲೂ ಹೆಚ್ಚಾಗಿದೆ. ವಿಜ್ಞಾನ ಸಮಾಜದಲ್ಲಿನ ಅಸಮಾನತೆಯನ್ನೇ ಮೂಲೋತ್ಪಾಟನೆ ಮಾಡಬಲ್ಲದು. ಸಂಶೋಧನೆ ಮತ್ತು ಅನ್ವೇಷಣೆಯ ಮೂಲಕ ರೈತರು, ವಿಕಲ ಚೇತನರಿಗೆ ಅನುಕೂಲ ಮಾಡಿಕೊಡುವಂತಾಗಬೇಕು ಎಂದು
ತಿಳಿಸಿದರು.
ಬುದ್ಧಿವಂತಿಕೆ ಮತ್ತು ಆವಿಷ್ಕಾರ ಎರಡೂ ಭಿನ್ನ. ಬುದ್ಧಿವಂತರಾಗಿದ್ದರೂ ಸಂಶೋಧನೆಯ ಗುಣವೇ ಇರದಿದ್ದರೆ ಯಾವುದೇ ಪ್ರಯೋಜನ ಆಗುವುದಿಲ್ಲ, ಸಂಶೋಧನೆಯತ್ತ ಆಸಕ್ತಿ ಇದ್ದವರು ಏನಾದರೂ ಒಂದು ಹೊಸದನ್ನು ಕಂಡು ಹಿಡಿಯುತ್ತಾರೆ. ವಿದ್ಯಾರ್ಥಿ ಸಮುದಾಯದಲ್ಲಿ ಸಂಶೋಧನೆ ಜ್ಞಾನ ಬೇಕಾಗಿದೆ ಎಂದು ತಿಳಿಸಿದರು.
ಪ್ರತಿಯೊಬ್ಬರಲ್ಲಿ ಅನ್ವೇಷಣೆಯ ಅಭಿರುಚಿ ಮತ್ತು ಆಸಕ್ತಿ ಇದ್ದಲ್ಲಿ ವಿಜ್ಞಾನಿ ಆಗಬಹುದು. ವಿಜ್ಞಾನಿಗಳಾಗಲು ಯಾವುದೇ ಕೋರ್ಸ್ನ ಅಗತ್ಯ ಇಲ್ಲ. ಬುದ್ಧಿಶಕ್ತಿಯ ಮೂಲಕ ಸಂಶೋಧನೆ ನಡೆಸಿ, ಹೊಸತನ ಕಂಡು ಹಿಡಿಯಬಹುದು. ವಿದ್ಯಾರ್ಥಿಗಳು ಮೂಲ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಮುಖ್ಯ ಶಿಕ್ಷಕ ಎಂ.ಟಿ. ಶರಣಪ್ಪ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಅದನ್ನು ಋಣಾತ್ಮಕವಾಗಿ ಬಳಸಿಕೊಳ್ಳುವ ಮನೋಭಾವ ಹೆಚ್ಚಾಗುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರ ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದೆ. ವಿಜ್ಞಾನದ ಉಪಯೋಗದ ಮೂಲಕ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳುವ ಬದಲಿಗೆ ಮಾನವೀಯತೆ ನಾಶ ಪಡಿಸಿಕೊಳ್ಳುವ ಮೂಲಕ ನಮ್ಮನ್ನು ನಾವೇ ನಾಶ ಮಾಡಿಕೊಳ್ಳುತ್ತಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದರು.
ಅನ್ಮೋಲ್ ವಿದ್ಯಾಸಂಸ್ಥೆ ಅಧ್ಯಕ್ಷ ಸಿ.ಜಿ. ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ಗಣಿತ-ವಿಜ್ಞಾನ ವಿಷಯ ಪರಿವೀಕ್ಷಕ ಕೆ. ಸೋಮಶೇಖರ್, ಯು. ಕೊಟ್ರೇಶ್ ಇತರರು ಇದ್ದರು. ಎಂ.ಗುರುಸಿದ್ದಸ್ವಾಮಿ ನಿರೂಪಿಸಿದರು. ಅನ್ಮೋಲ್ ವಿದ್ಯಾಸಂಸ್ಥೆಯ ಎನ್.ವಿ.ಶುಕ್ಲ, ಜೈನ್ ವಿದ್ಯಾಲಯದ ಮನನ್ ವಿ.ಜೈನ್, ಸರ್. ಎಂ.ವಿ. ಪಿಯು ಕಾಲೇಜಿನ ಜೆ.ವಿ.ಜಯಂತ್ಗೆ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ