ಪರವಾನಗಿಗೆ 20 ವರ್ಷದಿಂದ ಪರದಾಟ


Team Udayavani, Jul 10, 2018, 3:36 PM IST

dvg-1.jpg

ದಾವಣಗೆರೆ: ಮನೆಯ ಯಜಮಾನ ಹುಟ್ಟು ಕುರುಡ, ಹೆಂಡತಿ ವಿಕಲಚೇತನೆ, ಮಗ ಸಹ ಹುಟ್ಟು ಕುರುಡ, ಮೊಮ್ಮಕ್ಕಳಿಬ್ಬರೂ ಕುರುಡರು… ಇಂತಹ ಕುಟುಂಬ ತಮ್ಮ ಜಾಗದಲ್ಲೇ ಸಂಗೀತ ಮಂದಿರ ಕಟ್ಟಿಕೊಳ್ಳಲಿಕ್ಕೆ ಗ್ರಾಮ ಪಂಚಾಯತಿಯ ಪರವಾನಗಿಗಾಗಿ 20 ವರ್ಷದಿಂದ ಪರಿತಪಿಸುತ್ತಿದೆ!.

ಗ್ರಾಮ ಪಂಚಾಯತ್‌ ನಿಂದ ಪರವಾನಗಿಗಾಗಿಯೇ 20 ವರ್ಷದಿಂದ ಪ್ರತಿನಿತ್ಯ ತಮ್ಮ ಸಂಬಂಧಿಕರಿಂದಲೇ ಕಿರುಕುಳದ ನಡುವೆಯೂ ಇಡೀ ಕುಟುಂಬ ಅಲೆದಾಡುತ್ತಿರುವುದು ಅಚ್ಚರಿ ಮೂಡಿಸಿದರೂ ಸತ್ಯ!.

ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಸಂಗೀತ ಶಿಕ್ಷಕ ಕೆ.ಎನ್‌. ಮಂಜಪ್ಪ ನಾಟಕದ ಸಂಗೀತದ ಮೇಷ್ಟ್ರು. ಅವರ ಮಗ ನರೇಂದ್ರಕುಮಾರ್‌ ಸಹಕುರುಡರು. ರೇಂದ್ರಕುಮಾರ್‌ ಮಕ್ಕಳಾದ ಚಿನ್ಮಯ್‌ ಮತ್ತು ತ್ರಿವೇಣಿ ಸಹ ಕುರುಡರು.

ಗದಗಿನ ಪುಟ್ಟರಾಜ ಗವಾಯಿಗಳ ಸಂಗೀತ ಶಾಲೆಯಲ್ಲಿ ಅಭ್ಯಾಸ ಮಾಡಿದ್ದ ನರೇಂದ್ರಕುಮಾರ್‌ ಅನೇಕ ಕಡೆ ಕೆಲಸಕ್ಕಾಗಿ ಅಲೆದಾಡಿ, ಎಲ್ಲಿಯೂ ಕೆಲಸ ಸಿಗದಿದ್ದರಿಂದ ತಮ್ಮ ಮನೆಯ ಪಕ್ಕದ 14*12 ಅಡಿ ಅಳತೆಯ ಜಾಗದಲ್ಲಿ ಸಂಗೀತ ಮಂದಿರ ಕಟ್ಟಿಸಿ, ನಾಲ್ಕಾರು ಜನರಿಗೆ ಸಂಗೀತ ಕಲಿಸಿ, ಜೀವನ ನಿರ್ವಹಣೆಗೆ ಸಂಗೀತ ಮಂದಿರ ನಿರ್ಮಾಣಕ್ಕೆ ಮುಂದಾಗುತ್ತಿದ್ದಂತೆಯೇ ಗ್ರಾಮ ಪಂಚಾಯತಿ ತಕರಾರು ಎತ್ತಿತು. ಜಾಗ ಗ್ರಾಮ ಪಂಚಾಯತಿಯದ್ದು ಹಾಗಾಗಿ ಸಂಗೀತ ಮಂದಿರ ಕಟ್ಟುವಂತಿಲ್ಲ ಎಂದು ಮೌಖೀಕ ಸೂಚನೆ ನೀಡಿತು.

ಏಕಾಏಕಿ ಎದುರಾದ ತಕರಾರಿನಿಂದ ಅವಕ್ಕಾದ ಕುಟುಂಬದ ಸದಸ್ಯರು 1968ರಲ್ಲಿ ಕೆ.ಎನ್‌. ಮಂಜಪ್ಪ ಅವರ ತಂದೆ ಕೌದಿ ನಿರ್ವಾಣಪ್ಪ ಜಾಗ ವರ್ಗಾಯಿಸಿದ ಮೂಲ ದಾಖಲೆ ಪತ್ತೆ ಹಚ್ಚಿ, ಗ್ರಾಮ ಪಂಚಾಯತಿಗೆ ಸಲ್ಲಿಸಿದರು. ಆದರೂ, ಗ್ರಾಮ ಪಂಚಾಯತಿಯಿಂದ ಪರವಾನಗಿ ದೊರೆಯಲಿಲ್ಲ.

ತಮ್ಮದೇ ಜಾಗದಲ್ಲಿ ಸಂಗೀತ ಮಂದಿರ ಕಟ್ಟಿಸಲು ಪರವಾನಗಿ ಕೋರಿ ನರೇಂದ್ರಕುಮಾರ್‌ ಇಡೀ
ಕುಟುಂಬದೊಂದಿಗೆ ಅಲೆದಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ 14*12 ಅಡಿ ಸುತ್ತಳತೆಯ ಜಾಗವನ್ನು ಭಗೀರಥ ಭವನ ಇಲ್ಲವೇ ಸ್ತ್ರೀಶಕ್ತಿ ಭವನಕ್ಕೆ ಬಿಟ್ಟುಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

20 ವರ್ಷದಿಂದ ಪರಿತಪಿಸುತ್ತಿರುವ ಕುಟುಂಬ ಸೋಮವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದ ಜಿ.ಎಂ. ಸಿದ್ದೇಶ್ವರ್‌ರನ್ನು ಭೇಟಿಯಾಗಿ ಅಳಲು ತೋಡಿಕೊಂಡಿತು. ಕುಟುಂಬಕ್ಕೆ ಅಗತ್ಯ ನೆರವು ನೀಡುವಂತೆ ಸಂಸದರು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಸಿಇಒ ಎಸ್‌. ಅಶ್ವತಿಗೆ ಸೂಚಿಸಿದರು 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.