ವರ್ಷಗಳಿಂದ ಸ್ಥಗಿತಗೊಂಡಿದೆ ಹಾಸ್ಟೆಲ್‌ ಕಾಮಗಾರಿ


Team Udayavani, Jul 23, 2018, 3:19 PM IST

dvg-3.jpg

ಚನ್ನಗಿರಿ: ಶಿಕ್ಷಣ ಕ್ಷೇತ್ರದಲ್ಲಿ ದಾಪುಗಾಲು ಇಡುತ್ತಿರುವ ಪಟ್ಟಣದಲ್ಲಿ ವಿದ್ಯಾರ್ಥಿನಿಲಯಗಳ ಸಮಸ್ಯೆ ವಿದ್ಯಾಕಾಂಕ್ಷಿಗಳನ್ನು ಕಾಡುತ್ತಿದೆ. ಸ್ನಾತಕೋತ್ತರ ಪದವಿಗಾಗಿ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳು ಹಾಸ್ಟೆಲ್‌ ಸೌಲಭ್ಯವಿಲ್ಲದೆ ಪರದಾಡುವ ಸ್ಥಿತಿಯಿದೆ.

ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮಹಿಳಾ ಪಿಜಿ ಹಾಸ್ಟೆಲ್‌ ಕಟ್ಟಡ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ವಿದ್ಯಾರ್ಥಿಗಳು ಹಾಸ್ಟೆಲ್‌ ಸೌಲಭ್ಯಕ್ಕಾಗಿ ಅಲೆದಾಡುವಂತಾಗಿದೆ. ಕಟ್ಟಡ ಬೇಗ ಪೂರ್ಣಗೊಂಡರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಚಿತ್ರದುರ್ಗ, ದಾವಣೆಗೆರ ಜಿಲ್ಲೆಯ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಅಧ್ಯಯನಕ್ಕೆಂದು ಪಟ್ಟಣಕ್ಕೆ ಬರುತ್ತಿದ್ದು, ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯ ಕಲ್ಪಿಸುವ ದೃಷ್ಟಿಯಿಂದ ಆಡಳಿತ ಮಂಡಳಿ ಕಾಲೇಜು ಕ್ಯಾಂಪಸ್‌ನಲ್ಲಿ ಮಹಿಳಾ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಮುಂದಾಗಿದೆ. ಪ್ರಾರಂಭದಲ್ಲಿ ಹಾಸ್ಟೆಲ್‌ ಕಾಮಗಾರಿ ಭರದಿಂದ ಸಾಗಿದರೂ ನಂತರ ಹಣದ ಕೊರತೆಯಿಂದ ಅರ್ಧಕ್ಕೆ ಸ್ಥಗಿತಗೊಂಡಿತು. ಅಲ್ಲಿಂದ ಈವರೆಗೆ 4ವರ್ಷ ಕಳೆಯುತ್ತ ಬಂದರೂ ಕಾಮಗಾರಿ ಮಾತ್ರ ಪೂರ್ಣವಾಗಿಲ್ಲ.

ಗಿಡಗಂಟಿಗಳಿಂದ ಮುಚ್ಚಿಹೋಗಿದೆ ಹಾಸ್ಟೆಲ್‌: ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಒಟ್ಟು 1100 ವಿದ್ಯಾರ್ಥಿಗಳು ಅಭ್ಯಸಿಸುತ್ತಿದ್ದಾರೆ. ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ನೀಡುವ ಸಲುವಾಗಿ 2015ರಲ್ಲಿ ಯುಜಿಸಿಗೆ ಪತ್ರ ಬರೆದು
ಹಾಸ್ಟೆಲ್‌ಗೆ ಮಂಜೂರಾತಿ ಪಡೆಯಲಾಯಿತು. ದಾವಣಗೆರೆ ವಿಶ್ವವಿದ್ಯಾಲಯದ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ ನಂತರ ಒಟ್ಟು 3 ಕೋಟಿ ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಿಸಲು ತಿರ್ಮಾನಿಸಲಾಯಿತು. ಮೊದಲ ಹಂತದಲ್ಲಿ ವಿಶ್ವವಿದ್ಯಾಲಯ 40 ಲಕ್ಷ ರೂ. ಬಿಡುಗಡೆ ಮಾಡಿತು. ಉಳಿದಂತೆ 2.60 ಕೋಟಿ ರೂ. ವೆಚ್ಚದ ಕಟ್ಟಡ ಕ್ರಿಯಾಯೋಜನೆಯನ್ನು ರೂಪಿಸಿ ಸರ್ಕಾರಕ್ಕೆ ಪ್ರಸ್ತಾಪನೆಯನ್ನು ಸಲ್ಲಿಸಲಾಗಿದೆ.

ಕಟ್ಟಡದ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗಿದೆ. ಆದರೆ ಸರ್ಕಾರಿಂದ ಯಾವುದೇ ಅನುದಾನ
ಇದುವರೆಗೆ ಬಂದಿಲ್ಲ. ವಿವಿಯಿಂದ ಮಂಜೂರು ಆದ 40 ಲಕ್ಷ ರೂ.ಗಳಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿದ್ದು, ಕಟ್ಟಡ
ಅರ್ಧಕ್ಕೆ ನಿಂತಿದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಹಣಕ್ಕಾಗಿ 4 ವರ್ಷಗಳಿಂದ ಕಾಲೇಜಿನ ಆಡಳಿತ ಮಂಡಳಿಯವರು ಕಾಯುತ್ತಿದ್ದಾರೆ. ಈಗಾಗಲೇ ನಿರ್ಮಿಸಲಾದ ಕಟ್ಟಡ ಪಾಳುಬಿಳುವ ಸ್ಥಿತಿಗೆ ತಲುಪಿದೆ. ಗಡಗಂಟಿಗಳು ಎಲ್ಲೆಡೆ ಬೆಳೆದು
ಕಟ್ಟಡವನ್ನು ಆವರಿಸಿವೆ.

ಖಾಸಗಿ ರೂಂಗಳಿಗೆ ಮೊರೆ: ಉನ್ನತ ಶಿಕ್ಷಣಕ್ಕಾಗಿ ಬರುವಂತಹ ವಿದ್ಯಾರ್ಥಿಗಳು ಕಾಲೇಜ್‌ ಕ್ಯಾಂಪಸ್‌ನಲ್ಲಿ ಹಾಸ್ಟೆಲ್‌ ವ್ಯವಸ್ಥೆಯಿಲ್ಲದೆ ಪಟ್ಟಣದ ಕೆಲ ಖಾಸಗಿ ರೂಂಗಳನ್ನು ದುಪ್ಪಟ್ಟ ಹಣ ನೀಡಿ ಪಡೆಯುವಂತಾಗಿದೆ. ಹಾಗೂ ಊಟಕ್ಕಾಗಿ ಮೆಸ್‌ಗಳ ಮೊರೆ ಹೋಗಿದ್ದಾರೆ. ಇದರಿಂದ ಉನ್ನತ ಶಿಕ್ಷಣವನ್ನು ಪಡೆಯುವುದು ಹೊರೆಯಾಗಿದೆ.

ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಯುಜಿಸಿಯಿಂದ 40 ಲಕ್ಷ ರೂ. ಮಂಜೂರು ಆಗಿತ್ತು. ಅಷ್ಟು ಹಣದಲ್ಲಿ ಆಗುವಷ್ಟು ಕಟ್ಟಡ ನಿರ್ಮಾಣ ಮಾಡಲಾಗಿದೆ. ಇನ್ನಷ್ಟು ಕಾಮಗಾರಿ ಬಾಕಿಯಿದೆ. ಕಾಮಗಾರಿ ಪೂರ್ಣಗೊಳಿಸಲು ಯಾವುದೇ ಅನುದಾನ
ಬಾರದೆ ಇರುವ ಕಾರಣ ಕಾಲೇಜು ಪ್ರಾಂಶುಪಾಲರ ವಶಕ್ಕೆ ಕಟ್ಟಡವನ್ನು ನೀಡಲಾಗಿದೆ.  ಎ.ವಿ. ರವಿಕುಮಾರ್‌, ಸಹಾಯಕ
ಇಂಜಿನಿಯರ್‌, ಲೋಕೋಪಯೋಗಿ ಇಲಾಖೆ

ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೆ ಹಾಸ್ಟೆಲ್‌ ಪ್ರಾರಂಭಿಸಲು ಆಗುವುದಿಲ್ಲ. ಹಾಸ್ಟೆಲ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರಿಗೆ  ತೊಂದರೆಯಾಗಿದೆ. ಅನುದಾನಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.  ಡಾ| ಬಿ.ವಿ. ವೀರಪ್ಪ, ಪ್ರಾಂಶುಪಾಲರು, ಶ್ರೀ ಶಿವಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜ್‌, ಚನ್ನಗಿರಿ.

ಕಾಲೇಜಿನಲ್ಲಿ ದಾಖಲಾತಿಯನ್ನು ಪಡೆಯುವಾಗ ಹಾಸ್ಟೆಲ್‌ ಸೌಲಭ್ಯವಿದೆ ಎಂದು ಹೇಳಿದ್ದರು. ಸದ್ಯ ದ್ವಿತೀಯ ವರ್ಷದ ಪಿಜಿಯನ್ನು ಮುಗಿಸಿದ್ದೇವೆ. ಚನ್ನಗಿರಿಯಲ್ಲಿ ಮನೆ ಬಾಡಿಗೆಗೆ ಪಡೆದು ಅಭ್ಯಾಸ ಮಾಡುತ್ತಿದ್ದೇವೆ. ಇಲ್ಲಿಯವರೆಗೂ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಲಾಗಿಲ್ಲ. ತಕ್ಷಣ ಹಾಸ್ಟೆಲ್‌ ಪ್ರಾರಂಭಿಸಿದರೆ ಅನುಕೂಲವಾಗಲಿದೆ.  ಹಾಸ್ಟೆಲ್‌ ವಂಚಿತ ವಿದ್ಯಾರ್ಥಿನಿ.

„ಸಿ.ಎಸ್‌. ಶಶೀಂದ್ರ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.