ಮೈದುಂಬಿ ಹರಿದ ತುಂಗಭದ್ರೆ; ಬೆಳೆಗಳು ಜಲಾವೃತ


Team Udayavani, Aug 12, 2018, 3:04 PM IST

12-agust-17.jpg

ಕಂಪ್ಲಿ: ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಗೆ ಇನ್ನು ಕೇವಲ ಎರಡು ಅಡಿ ಬಾಕಿ ಉಳಿದಿದ್ದು, ಜಲಾಶಯಕ್ಕೆ 90 ಸಾವಿರ ಕ್ಯುಸೆಕ್ಸ್‌ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ 32 ಕ್ರೆಸ್ಟ್‌ ಗೇಟುಗಳ ಮೂಲಕ ತುಂಗಭದ್ರಾ ನದಿಗೆ 90 ಸಾವಿರ ಕ್ಯುಸೆಕ್ಸ್‌ ನೀರು ಬಿಟ್ಟಿರುವುದರಿಂದ ಕಂಪ್ಲಿ ಕೋಟೆ ಸೇತುವೆ ಮುಳುಗಡೆಗೆ ಕೇವಲ ಒಂದಡಿ ಬಾಕಿ ಉಳಿದಿದ್ದು, ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

2014ರಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕ ಮಳೆಯಾಗದಿರುವುದರಿಂದ ಜಲಾಶಯ ಭರ್ತಿಯಾಗಿರಲಿಲ್ಲ ಹಾಗೂ ನದಿಗೆ ನೀರು ಬಿಡದಿರುವುದರಿಂದ ಕಂಪ್ಲಿ ಭಾಗದಲ್ಲಿ ತುಂಗಭದ್ರಾ ನದಿ ತುಂಬಿ ಹರಿದಿರಲಿಲ್ಲ. ಆದರೆ ಈ ವರ್ಷ ಜಲಾಶಯದ ಮೇಲ್ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಅವಧಿಗೂ ಮುನ್ನ ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಈ ಹಿನ್ನೆಲೆಯಲ್ಲಿ ಜಲಾಶಯದಿಂದ ತುಂಗಭದ್ರಾ ನದಿಗೆ ಭಾರಿ ಪ್ರಮಾಣದಲ್ಲಿ 12 ದಿನಗಳ ಕಾಲ ನೀರು ಹರಿ ಬಿಡಲಾಗಿತ್ತು.

ಇದೀಗ ಪುನಃ ಜಲಾಶಯಕ್ಕೆ ಅಧಿಕ ಪ್ರಮಾಣದ ನೀರು ಬರುತ್ತಿರುವುದರಿಂದ ಇಂದು ಸುಮಾರು 90 ಸಾವಿರ ಕ್ಯುಸೆಕ್ಸ್‌ ನೀರು ನದಿಗೆ ಬಿಟ್ಟಿದ್ದು, ಕಂಪ್ಲಿ ಕೋಟೆ ಸಮೀಪ ನದಿಗೆ ನಿರ್ಮಿಸಿರುವ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದೆ. ನದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಮೂರ್‍ನಾಲ್ಕು ವರ್ಷಗಳ ನಂತರ ಬಿಟ್ಟಿರುವುದರಿಂದ ನದಿಯಲ್ಲಿದ್ದ ಗಿಡ ಗಂಟಿಗಳು ನೀರಿನೊಂದಿಗೆ ಹರಿದು ಬರುತ್ತಿರುವುದರಿಂದ ಕಸಕಡ್ಡಿಗಳು ಸೇತುವೆ ಮೇಲೆ ಬಂದಿದ್ದು, ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಇನ್ನು ಹತ್ತು ಸಾವಿರ ಕ್ಯುಸೆಕ್ಸ್‌ ನೀರು ಬಿಟ್ಟರೆ ಸೇತುವೆ ಮೇಲೆ ನೀರು ಹರಿಯಲಿದೆ. ಈ ಹಿನ್ನೆಲೆಯಲ್ಲಿ ಸೇತುವೆ ಹತ್ತಿರ ಕಟ್ಟೆಚ್ಚರ ವಹಿಸಲಾಗಿದೆ.

ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ 
ಮೂರ್‍ನಾಲ್ಕು ವರ್ಷಗಳ ನಂತರ ಕಂಪ್ಲಿ ಭಾಗದಲ್ಲಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದನ್ನು ನೋಡಲು ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಜನ ಆಗಮಿಸುತ್ತಿದ್ದು, ಸಾರ್ವಜನಿಕರು ಮತ್ತು ವಾಹನಗಳ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು ತುಂಗಭದ್ರಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ನದಿ ಪಾತ್ರದ ಜನತೆ ಜಾಗ್ರತೆಯಲ್ಲಿರುವಂತೆ ಸೂಚಿಸಿದ್ದಾರೆ. ನದಿ ಪಾತ್ರದಲ್ಲಿ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಜಲಾವೃತಗೊಂಡ ಜಮೀನುಗಳು
ತುಂಗಭದ್ರಾ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟಿರುವುದರಿಂದ ನದಿ ತೀರದ ಬ‌ಹುತೇಕ ಜಮೀನುಗಳು ಜಲಾವೃತಗೊಂಡಿವೆ. ಕೋಟೆ ಬಳಿಯಲ್ಲಿನ ಕಬ್ಬಿನ ಗದ್ದೆ, ಬಾಳೆ ತೋಟಗಳು ಜಾಲವೃತಗೊಂಡಿದ್ದು, ನದಿಯಲ್ಲಿ ನೀರಿನ ಪ್ರಮಾಣ ಇದೇ ರೀತಿ ಮುಂದುವರಿದರೆ ಬೆಳೆಗಳು ಹಾನಿಯಾಗಲಿವೆ ಎಂದು ರೈತರು ಆತಂಕಗೊಂಡಿದ್ದಾರೆ.

ಟಾಪ್ ನ್ಯೂಸ್

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.