ಗುತ್ತಿಗೆ ನೌಕರರಿಂದ ಮೊಂಬತ್ತಿ ಮೆರವಣಿಗ
Team Udayavani, Aug 16, 2018, 11:34 AM IST
ದಾವಣಗೆರೆ: ಕಾಯಮಾತಿಗೆ ಒತ್ತಾಯಿಸಿ ಸರ್ಕಾರಿ ಗುತ್ತಿಗೆ ನೌಕರರು ಬುಧವಾರ ಸಂಜೆ ಜಯದೇವ ವೃತ್ತದಲ್ಲಿ ಕ್ಯಾಂಡೆಲ್ ಲೈಟ್ ಮೆರವಣಿಗೆ ನಡೆಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಅನೇಕ ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವರು ಕೆಲಸದ ಭದ್ರತೆ ಇಲ್ಲದೆ ಅಕ್ಷರಶಃ ತ್ರಿಶಂಕು ಸ್ಥಿತಿಯಲ್ಲಿದ್ದಾರೆ. ಗುತ್ತಿಗೆ ಆಧಾರಿತ ನೌಕರರ ಕಾರಣಕ್ಕಾಗಿಯೇ ಸರ್ಕಾರದ ಆಡಳಿತ ಅತ್ಯಂತ ಸುಸೂತ್ರವಾಗಿ ನಡೆಯುತ್ತಿದೆ. ಆದರೆ, ಅದಕ್ಕೆ ಕಾರಣವಾಗುತ್ತಿರುವರ ಬದುಕು ಮಾತ್ರ ಸುಸೂತ್ರವಾಗಿಲ್ಲ ಎಂದು ಗುತ್ತಿಗೆ ಆಧಾರಿತ ನೌಕರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಗುತ್ತಿಗೆ ನೌಕರರ ಸಮಸ್ಯೆ ಹಲವಾರು ವರ್ಷಗಳಿಂದ ಜೀವಂತವಾಗಿವೆ. ಈ ಕ್ಷಣಕ್ಕೂ ಸಮಸ್ಯೆಗೆ ಪರಿಹಾರ ಎಂಬುದು ದೊರೆತಿಲ್ಲ. ಸದಾ ಅಭದ್ರ ಸ್ಥಿತಿಯಲ್ಲೇ ಜೀವನ ನಿರ್ವಹಣೆ ಮಾಡಬೇಕಿದೆ. ದೇಶ 72ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದೆ. ಸರ್ಕಾರಿ ಗುತ್ತಿಗೆ ನೌಕರರಿಗೆ ಆಧುನಿಕ ಜೀತಪದ್ಧತಿಯಿಂದ ಸ್ವಾತಂತ್ರ್ಯ ದೊರೆತಿಲ್ಲ ಮಾತ್ರವಲ್ಲ ದೊರೆಯುವ ಲಕ್ಷಣವೂ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇವೆ ಕಾಯಂಗೆ ಒತ್ತಾಯಿಸಿ ಸ್ವಾತಂತ್ರ್ಯ ದಿನಾಚರಣೆಯಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳಾಗಿವೆ ನಮ್ಮನ್ನೇಕೆ ಜೀತಪದ್ಧತಿಗೆ ದೂಡುತ್ತಿದ್ದೀರಿ… ಎಂಬ ಘೋಷವಾಕ್ಯದೊಂದಿಗೆ ಒತ್ತಾಯಿಸುತ್ತಿದ್ದೇವೆ. ಸರ್ಕಾರ ಈಗಲಾದರೂ ಕಣ್ಣು ತೆರೆದು, ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು. ಆದಿಲ್ಖಾನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್