ಪಟ್ಟಣಕ್ಕೊಂದೇ ಗಣಪ ಪ್ರತಿಷ್ಠಾಪಿಸಿದರೆ ಒಗ್ಗಟ್ಟು: ಮೇಘರಾಜ್‌


Team Udayavani, Aug 23, 2018, 3:35 PM IST

dvg-3.jpg

ಮಲೇಬೆನ್ನೂರು: ಪಟ್ಟಣದಲ್ಲಿ ಐಕ್ಯತೆ ಭಾವನೆ ಮೂಡಿಸುವ ಸಲುವಾಗಿ ಒಂದೇ ಗಣಪನನ್ನು ಪ್ರತಿಷ್ಠಾಪಿಸಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬೇಕೆಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನಡೆದ ಸಭೆಯಲ್ಲಿ ಪಿಎಸ್‌ಐ ಮೇಘರಾಜ್‌ ಅಭಿಪ್ರಾಯ ವ್ಯಕ್ತಪಡಿಸಿದರು.

 ಹಲವಾರು ಗಣಪತಿಗಳನ್ನು ಪ್ರತಿಷ್ಠಾಪಿಸುವುದರ ಬದಲಾಗಿ ಒಂದೇ ಗಣಪತಿಯನ್ನು ಪ್ರತಿಷ್ಠಾಪಿಸಿದಾಗ ಪ್ರತಿಯೊಬ್ಬರೂ ಒಂದೆಡೆ ಸೇರುವುದರಿಂದ ಒಗ್ಗಟ್ಟು ಇರುತ್ತದೆ ಎಂದರು. ಪಟ್ಟಣದ ಪ್ರತಿಭೆಗಳಿಗೆ ಕಲೆ ಅನಾವರಣಕ್ಕೆ ಉತ್ತಮ ವೇದಿಕೆ ದೊರಕುತ್ತದೆ. ಎಷ್ಟೇ ದಿನ ಗಣಪನನ್ನು ಪ್ರತಿಷ್ಠಾಪಿಸಿದರೂ ನಾವು ಭದ್ರತೆ ನೀಡಲು ಸಿದ್ಧ ಎಂದು ಪಿಎಸ್‌ಐ ಮೇಘರಾಜ್‌ ಸಭೆಯಲ್ಲಿ ತಿಳಿಸಿದರು.
 
ಈಗಾಗಲೇ ಗಣಪತಿ ತಯಾರಕರಿಗೆ ಮುಂಗಡ ಹಣ ನೀಡಲಾಗಿದ್ದು, ಒಂದೇ ಗಣಪ ಪ್ರತಿಷ್ಠಾಪಿಸಲು ಹೇಗೆ ಸಾಧ್ಯ ಎಂದು ಗಣೇಶೋತ್ಸವ ಮಂಡಳಿ ಪದಾಧಿಕಾರಿಗಳು ತಮ್ಮ ಸಮಸ್ಯೆ ಹೇಳಿದಾಗ, ಹಾಗಿದ್ದಲ್ಲಿ ಈ ಬಾರಿ ಗಣಪನನ್ನು ಪ್ರತಿಷ್ಠಾಪಿಸಿರಿ. ಊರೊಟ್ಟಿನಿಂದ ಒಂದು ಗಣಪ ಇಡೋಣ. ಗಣಪನ ವಿಸರ್ಜನೆ ಮೆರವಣಿಗೆ ಮಾತ್ರ ಎಲ್ಲರೂ ಒಂದೇ ದಿನ ನೆರವೇರಿಸಬೇಕು. ಬೇರೆ ದಿನ ವಿಸರ್ಜಿಸುವವರು ಯಾವುದೇ ರೀತಿಯ ಆಡಂಬರದ ಮೆರವಣಿಗೆ ಮಾಡದೆ ಸರಳವಾಗಿ ವಿಸರ್ಜಿಸಬೇಕು ಎಂದು ಪಿಎಸ್‌ಐ ಸಲಹೆ ನೀಡಿದರು.

ಈಗಾಗಲೇ ಚನ್ನಗಿರಿಯಲ್ಲಿ ಒಂದೇ ಗಣಪ ಪ್ರತಿಷ್ಠಾಪಿಸುವ ಪದ್ಧತಿ ಪ್ರಾರಂಭಿಸಿ ಯಶಸ್ವಿಯೂ ಆಗಿದ್ದಾರೆ. ಇಲ್ಲೂ ಒಂದೇ ಗಣಪ ಪ್ರತಿಷ್ಠಾಪಿಸುವ ಮೂಲಕ ಪೊಲೀಸ್‌ ಕರೆಗೆ ಕೈ ಜೋಡಿಸಿ ಎಂದು ವಿನಂತಿಸಿದರು. ಸಭೆಯಲ್ಲಿ ಪಟ್ಟಣದ ಎಲ್ಲ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ತಮ್ಮ ಅಭಿಪ್ರಾಯ ತಿಳಿಸಿ ಪೊಲೀಸರ ಕರೆಗೆ ಸಮ್ಮತಿಸಿದರು. ಒಂದೇ ಗಣಪತಿ ಪ್ರತಿಷ್ಠಾಪಿಸಲು ಕಮಿಟಿ ರಚಿಸಬೇಕು. ಕಮಿಟಿ ರಚಿಸುವ ಬಗ್ಗೆ ಚರ್ಚಿಸಲು ಶುಕ್ರವಾರ ಸಭೆ ಸೇರಲು ತೀರ್ಮಾನಿಸಲಾಯಿತು. 

ಸಭೆಯಲ್ಲಿ ಧರ್ಮಣ್ಣ, ಮಂಜಣ್ಣ, ಎಳೇಹೊಳೆ ಕುಮಾರ, ಬೆನಕೊಂಡಿ ರಾಜೇಶ್‌, ಭಾನುವಳ್ಳಿ ಸುರೇಶ್‌, ಹಿಟ್ಟಿನ ಗಿರಣಿ ಶಾಂತ್‌ರಾಜ್‌, ರಂಗನಾಥಾಚಾರ್‌, ಮಹೇಶ್‌, ಸುಬ್ಬಿರಾಜಪ್ಪ, ಎ.ಕೆ. ರಂಗನಾಥ್‌, ನವೀನ, ಲೊಕೇಶ್‌, ದೊರೆಸ್ವಾಮಿ, ಮಹಲಿಂಗಪ್ಪ, ಬೆಸ್ಕಾಂ, ಪುರಸಭೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.