ಜನಸ್ನೇಹಿ ಪೊಲೀಸ್‌ ಆ್ಯಪ್‌ ಲಭ್ಯ


Team Udayavani, Aug 24, 2018, 5:27 PM IST

dvg-1.jpg

ದಾವಣಗೆರೆ: ಸಮೀಪದ ಪೊಲೀಸ್‌ ಠಾಣೆ, ದೂರವಾಣಿ, ಇ-ಮೇಲ್‌ ಮಾಹಿತಿ, ಸಲ್ಲಿಸಿರುವ ದೂರಿನ ಸ್ಥಿತಿಗತಿ…, ಕಾಣೆಯಾದವರ ಮಾಹಿತಿ…, ಹಳೆಯ ವಾಹನ ಖರೀದಿಸುವಾಗ ವಾಹನಗಳ ಮೂಲ ಮಾಲೀಕರ ವಿವರ… ಮುಂತಾದ ಸಮಗ್ರ ಮಾಹಿತಿ ನೀಡುವ ಜನಸ್ನೇಹಿ ಕರ್ನಾಟಕ ಪೊಲೀಸ್‌ ಮೊಬೈಲ್‌ ಆ್ಯಪ್‌ ಸೇವೆ ಈಗ ದಾವಣಗೆರೆ ಜಿಲ್ಲೆಯಲ್ಲಿ ಲಭ್ಯ. ಈ ಹಿಂದೆ ಆಯಾಯ ಜಿಲ್ಲೆಗೆ
ಸಂಬಂಧಿಸಿದಂತೆ ಮಾತ್ರ ಆ್ಯಪ್‌ ಇತ್ತು. ಅದರಿಂದ ಆಯಾಯ ಜಿಲ್ಲೆಯ ಮಾಹಿತಿ ಮಾತ್ರವೇ ದೊರೆಯುತ್ತಿತ್ತು.

ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಪೊಲೀಸ್‌ ಠಾಣೆ, ಅಧಿಕಾರಿಗಳ ದೂರವಾಣಿ, ಇ-ಮೇಲ್‌ ವಿಳಾಸ, ಆಕಸ್ಮಿಕವಾಗಿ ತೊಂದರೆಯಲ್ಲಿ ಸಿಕ್ಕಿಕೊಂಡಾಗ ಐವರು ಆಪ್ತರಿಗೆ ಕ್ಷಣಾರ್ಧದಲ್ಲಿ ಸಂದೇಶ ಕಳುಹಿಸುವ ವ್ಯವಸ್ಥೆಯ ಜನಸ್ನೇಹಿ ಕರ್ನಾಟಕ ಪೊಲೀಸ್‌ ಮೊಬೈಲ್‌ ಆ್ಯಪ್‌ ಸೇವೆ ದಾವಣಗೆರೆ ಜಿಲ್ಲೆಯಲ್ಲಿ ದೊರೆಯಲಿದೆ ಎಂದು ಜಿಲ್ಲಾ  ರಕ್ಷಣಾಧಿಕಾರಿ ಆರ್‌.ಚೇತನ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜನಸ್ನೇಹಿ ಕರ್ನಾಟಕ ಪೊಲೀಸ್‌ ಮೊಬೈಲ್‌ ಆ್ಯಪ್‌ ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಲಭ್ಯ ಇದೆ. ಸಾರ್ವಜನಿಕರು ತಮ್ಮ ಆ್ಯಂಡ್ರಾಯ್ಡ ಅಥವಾ ಐ-ಫೋನ್‌ನಿಂದ ಆ್ಯಪ್‌ ಡೌನಲೋಡ್‌ ಮಾಡಿಕೊಳ್ಳಬೇಕು. ಆ್ಯಪ್‌ನಲ್ಲಿ 8 ರೀತಿಯ ವಿವಿಧ ಸೇವೆ ದೊರೆಯಲಿದೆ. ಸಮೀಪದ ಪೊಲೀಸ್‌ ಠಾಣೆ, ವ್ಯಾಪ್ತಿ, ದೂರಿನ ಸ್ಥಿತಿಗತಿ, ತುರ್ತಾಗಿ ಸಂಪರ್ಕಿಸಬೇಕಾದವರ ಮಾಹಿತಿ, ಕಾಣೆಯಾದವರ ಬಗ್ಗೆ ಮಾಹಿತಿ ಅಥವಾ ಯಾವುದಾದರೂ ವಾಹನ ಖರೀದಿಸುವ ಮುನ್ನ ಆವಾಹನದ ಮೂಲ ಮಾಲೀಕರ ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಇಲಾಖೆ ಸಾರ್ವಜನಿಕರಿಗೆ ಹತ್ತಿರವಾಗಬೇಕು. ಅಗತ್ಯ ಮಾಹಿತಿ ಹಾಗೂ ತಕ್ಷಣದಲ್ಲಿ ತುರ್ತು ಸೇವೆ ದೊರೆಯುವಂತಾಗಬೇಕು ಎಂಬ ಉದ್ದೇಶದಿಂದ, ಪೊಲೀಸ್‌ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಜನಸ್ನೇಹಿಯಾಗಿ ಸಂಪರ್ಕ ಕಲ್ಪಿಸಲು ಮೊಬೈಲ್‌ ಆ್ಯಪ್‌ ಸಿದ್ಧಪಡಿಸಲಾಗಿದೆ. ರಾಜ್ಯಾದ್ಯಂತ 1 ಲಕ್ಷಕ್ಕೂ ಹೆಚ್ಚು ಜನರು ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರಿಗೆ ಯಾವುದೇ ತೊಂದರೆಯಾದಲ್ಲಿ ಯಾವ ಪೊಲೀಸ್‌ ಠಾಣೆಗೆ ದೂರು ನೀಡಬೇಕು ಅಥವಾ ತಕ್ಷಣದ ಅವಶ್ಯಕತೆಗೆ ಹತ್ತಿರ ಯಾವ ಪೊಲೀಸ್‌ ಠಾಣೆ ಇದೆ ಎಂಬ ಮಾಹಿತಿ ದೊರೆಯುತ್ತದೆ. ರಾಜ್ಯದ ಎಲ್ಲಾ ಸ್ಟೇಷನ್‌ಗಳ ಫೋನ್‌ ನಂಬರ್‌, ಇ-ಮೇಲ್‌ ವಿಳಾಸ ಲಭ್ಯವಾಗಲಿದೆ. ಎಸ್‌.ಒ.ಎಸ್‌ ಮೂಲಕ ತಕ್ಷಣ ಕಂಟ್ರೋಲ್‌ ರೂಂ  ಸಂಪರ್ಕಿಸಬಹುದು. ಇಲಾಖೆಗೆ ಯಾವ ಮಾಹಿತಿ ನೀಡಬೇಕು. ಅಲ್ಲದೆ ಪ್ರತಿಯೊಬ್ಬರ ಆಪ್ತರ 5 ಸಂಖ್ಯೆಗಳಿಗೆ ತಕ್ಷಣ ಕರೆ ಅಥವಾ ಸಂದೇಶ ಹೋಗುವುದರಿಂದ ಅವರು ತೊಂದರೆಯಲ್ಲಿದ್ದವರನ್ನು ಸಂಪರ್ಕಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಯಾವುದಾದರೂ ಅಪಘಾತ ವಾಗಿದ್ದರೆ ಪೋಟೋ ತೆಗೆದು ಈ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಿದಲ್ಲಿ ಪೊಲೀಸ್‌ ಸಿಬ್ಬಂದಿ ನೆರವಿಗೆ ಬರಲು ಅನುಕೂಲ ಆಗಲಿದೆ. ಅಪಘಾತದ ಬಗ್ಗೆ ಮಾಹಿತಿ ಬರೆಯಬಹುದು. ಯಾವುದಾದರೂ ಮನೆಯಲ್ಲಿ ಕಳ್ಳತನವಾಗಿದ್ದರೆ ಆ ಮನೆಯ ಪೋಟೋ ಹಾಕಿದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ನೆರವಾಗುತ್ತದೆ ಎಂದು ತಿಳಿಸಿದರು.

ಸರಗಳ್ಳರು ಮುಂತಾದವರ ಬಗ್ಗೆ ಮಾಹಿತಿ ನೀಡಬಹುದು. ಯಾರಾದರೂ ಮಹಿಳೆಯನ್ನು ಹಿಂಬಾಲಿಸುತ್ತಿದ್ದರೆ ಅಥವಾ ಮಾನವ ಕಳ್ಳಸಾಗಣೆ, ಬೆಂಕಿ ಅವಘಡ, ರ್ಯಾಗಿಂಗ್‌, ಟ್ರಾಫಿಕ್‌ ಜಾಮ್‌ ಮುಂತಾದ ಮಾಹಿತಿ ಸಹ ಕಳುಹಿಸಬಹುದು. ಆ ಮಾಹಿತಿ ತಕ್ಷಣ ಕಂಟ್ರೋಲ್‌ ರೂಂಗೆ ಬರುತ್ತದೆ. ಜಿ.ಪಿ.ಎಸ್‌ ಮುಖಾಂತರ ಸ್ಥಳ ತಿಳಿದುಕೊಂಡು ಹೋಗಲು ಅನುಕೂಲವಾಗುತ್ತದೆ. ಗಣ್ಯರು ಆಗಮಿಸಿದಾಗ, ಯಾವುದಾದರೂ ರಸ್ತೆ ಬಂದ್‌ ಆಗಿದ್ದರೆ, ಬೇರೆ ಯಾವ ದಾರಿ ಉಪಯೋಗಿಸಬೇಕು ಎಂಬ ಮಾಹಿತಿಯೂ ಲಭ್ಯವಾಗಲಿದೆ. ಶಾಲಾ ಕಾಲೇಜುಗಳಲ್ಲಿ ಆ್ಯಪ್‌ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಟಿ.ಜೆ. ಉದೇಶ್‌ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.