ಸ್ವತ್ಛತೆ ಜಾಗೃತಿಗೆ ಬೈಕ್ ರ್ಯಾಲಿ
Team Udayavani, Aug 26, 2018, 4:48 PM IST
ಹೊನ್ನಾಳಿ: ಸ್ವತ್ಛತೆ ವೈಯಕ್ತಿಕ ಆರೋಗ್ಯವಲ್ಲದೇ ಸಮುದಾಯದ ಆರೋಗ್ಯವನ್ನೂ ಕಾಪಾಡುತ್ತದೆ ಎಂದು ತಾ.ಪಂ ಇಒ ಕೆ.ಸಿ. ಮಲ್ಲಿಕಾರ್ಜುನ ಹೇಳಿದರು. ಸ್ವತ್ಛ ಸರ್ವೇಕ್ಷಣ ಗ್ರಾಮೀಣ-2018 ಅಡಿಯಲ್ಲಿ ರಾಜ್ಯ ಸರ್ಕಾರ, ಜಿ.ಪಂ ಮತ್ತು ತಾ.ಪಂ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸ್ವತ್ಛ ಅಭಿಯಾನ ಬೈಕ್ ರ್ಯಾಲಿ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಕುಟುಂಬ ವೈಯಕ್ತಿಕ ಶೌಚಾಲಯ ಬಳಕೆ ಮಾಡಬೇಕು. ಇದರಿಂದ ಕುಟುಂಬದ ಆರೋಗ್ಯ ವೃದ್ಧಿಸಿ ಸಮಾಜದ ಸ್ವಾಸ್ಥ್ಯಾ ಕಾಪಾಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ನೇಮಿಸಿರುವ ಖಾಸಗಿ ಸಂಸ್ಥೆಗಳು ಮತ್ತು ಪ್ರಾಯೋಜಕತ್ವ ಸಂಸ್ಥೆಗಳು ಸ್ವತ್ಛತೆ ಸರ್ವೇಕ್ಷಣೆಗೆ ಗ್ರಾಮಗಳಿಗೆ ಆಗಮಿಸಿ ಮುಖ್ಯವಾಗಿ ಕಸ ವಿಲೇವಾರಿ, ವೈಯಕ್ತಿಕ ಶೌಚಾಲಯ ಬಳಕೆ, ಶಾಲೆ-ಅಂಗನವಾಡಿ ಶೌಚಾಲಯ ಬಳಕೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವತ್ಛತೆ ಪರಿಶೀಲಿಸಲಿದ್ದಾರೆ. ಈ ಕುರಿತು ಧನಾತ್ಮಕವಾಗಿ ಚಿಂತಿಸಿ ಕೆಲಸ ಮಾಡಬೇಕು ಎಂದು ಹೇಳಿದರು.
ಬೈಕ್ ರ್ಯಾಲಿ ಪ.ಪಂ ಸಾಮರ್ಥ್ಯಸೌಧ ದಿಂದ ಆರಂಭಗೊಂಡು ಸಂಗೊಳ್ಳಿ ರಾಯಣ್ಣ ವೃತ್ತ, ಕುರಿ ಸಂತೆ, ಹಳದಮ್ಮ ದೇವಸ್ಥಾನ, ಕ್ಯಾನರಾ ಬ್ಯಾಂಕ್ ರಸ್ತೆ ಮೂಲಕ ಪುನಃ ತಾ.ಪಂ ಕಚೇರಿಗೆ ಆಗಮಿಸಿತು. ಸಹಾಯಕ ಅಧಿಕಾರಿ ರಾಘವೇಂದ್ರ, ಪಿಡಿಒಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು