ಸೈಬರ್‌ ಅಪರಾಧದ ಮೊದಲ ಪ್ರಕರಣ ಪತ್ತೆ


Team Udayavani, Aug 28, 2018, 5:48 PM IST

dvg-2.jpg

ದಾವಣಗೆರೆ: ವೈಯಕ್ತಿಕ ದ್ವೇಷದ ಕಾರಣಕ್ಕೆ ಮಹಿಳೆ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು, ಚಾರಿತ್ರ್ಯವಧೆ ಮಾಡಿದವನನ್ನು ಸಿಇಎನ್‌ (Cyber Economics and Noretic controle crime) ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಾಷಾನಗರ ಮುಖ್ಯ ರಸ್ತೆಯ ಫ್ರೆಂಡ್ಸ್‌ ಕಮ್ಯೂನಿಕೇಶನ್‌ನ ತನ್ವೀರ್‌ ಅಹ್ಮದ್‌ ತಬೇರಿಜ್‌ ಬಂಧಿತ ಆರೋಪಿ.
ತನ್ವೀರ್‌ ಅಹ್ಮದ್‌ ತಬೇರಿಜ್‌ಗೆ ಸಹೋದರಿಯ ಮೂಲಕ ದಾವಣಗೆರೆಯ ಕೆಟಿಜೆ ನಗರದ ಮಹಿಳೆ ಪರಿಚಯವಾಗಿದ್ದರು. ಕೆಲ ಕಾಲದ ನಂತರ ಆ ಮಹಿಳೆ ಮತ್ತು ತನ್ವೀರ್‌ ಅಹ್ಮದ್‌ ತಬೇರಿಜ್‌ ನಡುವೆ ದ್ವೇಷ ಉಂಟಾಗಿತ್ತು. ಆ ಮಹಿಳೆ ಮೇಲೆ ಸೇಡು ತೀರಿಸಿಕೊಳ್ಳುವುದಕ್ಕಾಗಿ ಆತ ಈ ಕೆಲಸ ಮಾಡಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಾರೋ ಅಪರಿಚಿತರು ತನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ತನ್ನ ಅಶ್ಲೀಲ ಫೋಟೋ ಅಪ್‌ಲೋಡ್‌ ಮಾಡಿ, ´ಪೋನ್‌ ನಂಬರ್‌ ಹಾಕಿ, ಅಶ್ಲೀಲವಾಗಿ ಕಾಮೆಂಟ್‌ ಮಾಡಿರುವ ಸಂಬಂಧ ಆ ಮಹಿಳೆ ಸಲ್ಲಿಸಿದ ದೂರಿನ ಆಧಾರದಲ್ಲಿ ಸಿಇಎನ್‌ ಠಾಣಾ ಪೊಲೀಸರು ಕೂಲಂಕುಷ ತನಿಖೆ ನಡೆಸಿದಾಗ ಆರೋಪಿ ತನ್ವೀರ್‌ ಅಹ್ಮದ್‌ ತಬೇರಿಜ್‌ ಸಿಕ್ಕಿ ಬಿದ್ದಿದ್ದಾನೆ. ವಿಚಾರಣೆ ವೇಳೆ ತಾನೇ ಆ ಕೃತ್ಯ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅದರಲ್ಲಿ ಅಶ್ಲೀಲ ಫೋಟೋ ಅಪ್‌ಲೋಡ್‌ ಮಾಡಿ ಕಾಮೆಂಟ್‌ ಮಾಡಿದವರ ಪತ್ತೆಗಾಗಿ ಫೇಸ್‌ಬುಕ್‌ ಖಾತೆಯ ಯು.ಅರ್‌.ಎಲ್‌ (URL) ಮತ್ತು ಸ್ಕ್ರೀನ್‌ಶಾಟ್‌ ತೆಗೆದು, ಅಮೆರಿಕಾದಲ್ಲಿರುವ ಫೇಸ್‌
ಬುಕ್‌ ಕಂಪನಿಗೆ ಕಳಿಸಿಕೊಡಲಾಗಿತ್ತು. ಫೇಸ್‌ಬುಕ್‌ ಕಂಪನಿಯವರು ನಕಲಿ ಫೇಸ್‌ಬುಕ್‌ ಖಾತೆ ತೆರೆದ ವ್ಯಕ್ತಿಗೆ ಸಂಬಂಧಿಸಿದಂತೆ ಐ.ಪಿ. (ಐಕ) ವಿಳಾಸ ನೀಡಿದ್ದರು.

ಐ.ಪಿ. ವಿಳಾಸದ ಆಧಾರದಲ್ಲಿ ಫೇಸ್‌ಬುಕ್‌ ಖಾತೆಗೆ ಸಂಬಂಧಿಸಿದಂತೆ ಸಿ.ಡಿ.ಅರ್‌.ಕಾಲ್‌ಡಿಟೈಲ್‌ ಮಾಹಿತಿ
ಮತ್ತು ಸಿಎಎಫ್‌ ಮಾಹಿತಿ ಪಡೆದು, ತನ್ವೀರ್‌ ಅಹ್ಮದ್‌ ತಬೇರಿಜ್‌ನನ್ನು ಬಂಧಿಸಲಾಯಿತು. ಕೃತ್ಯಕ್ಕೆ ಬಳಸಿದ
ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಸೈಬರ್‌ ಅಪರಾಧಕ್ಕೆ ಸಂಬಂಧಿಸಿದಂತೆ ಮೊದಲ ಪ್ರಕರಣ ಪತ್ತೆ ಹಚ್ಚಿ, ಆರೋಪಿ ಬಂಧಿಸಲಾಗಿದೆ. ಅನೇಕ ಮಹಿಳೆಯರು, ಯುವತಿಯರ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು, ಚಾರಿತ್ರ್ಯವಧೆ ಮಾಡುವಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಬೇಕು. ಅನೇಕರು ತಮ್ಮ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದರೂ ಭಯ ಮತ್ತು ಮತ್ತಿತರ ಕಾರಣಕ್ಕೆ ದೂರು ಸಲ್ಲಿಸಲು ಮುಂದೆ ಬರುವುದೇ ಇಲ್ಲ. ನಕಲಿ ಖಾತೆಯ
ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಇಎನ್‌(ವಿದ್ಯಾನಗರ ಪೊಲೀಸ್‌ ಠಾಣೆ, ಮೇಲ್ಭಾಗ) ಠಾಣೆಯಲ್ಲಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.

ಈಚೆಗೆ ಸೈಬರ್‌ ಅಪರಾಧ ಹೆಚ್ಚಾಗುತ್ತಿವೆ. ವಿಶೇಷವಾಗಿ ಬ್ಯಾಂಕ್‌ ಆನ್‌ಲೈನ್‌ ಖಾತೆಗೆ ಸಂಬಂಧಿಸಿದಂತೆ ಪಿನ್‌ ನಂಬರ್‌ ಪಡೆದು, ಹಣ ಡ್ರಾ ಮಾಡಿಕೊಳ್ಳುವ ಬಗ್ಗೆ ದೂರು ಬರುತ್ತಿವೆ. ಸುಶಿಕ್ಷಿತರೇ ಹೆಚ್ಚಾಗಿ ಇಂತಹ ವಂಚನೆಗೆ ಒಳಗಾಗುತ್ತಿದ್ದಾರೆ.

ಕೆಲವಾರು ಕಾರಣಕ್ಕೆ ದೂರು ನೀಡಲು ಮುಂದೆ ಬರುವುದೇ ಇಲ್ಲ. ಸೈಬರ್‌ ಅಪರಾಧಗಳ ಬಗ್ಗೆಯೂ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು. ಸಿ.ಇ.ಎನ್‌.ಪೊಲೀಸ್‌ ಠಾಣೆ ವೃತ್ತ ನಿರೀಕ್ಷಕ ಟಿ.ಎನ್‌. ದೇವರಾಜ್‌, ಸಿಬ್ಬಂದಿ ರಾಮಚಂದ್ರ ಜಾಧವ್‌, ಪ್ರಕಾಶ್‌ರಾವ್‌, ರವಿ, ಸುರೇಶ್‌, ಸಚಿನ್‌, ಲೋಹಿತ್‌, ಪ್ರಕಾಶ್‌, ವೀರಭದ್ರಪ್ಪ, ರಮೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.