ಸೈಬರ್‌ ಅಪರಾಧದ ಮೊದಲ ಪ್ರಕರಣ ಪತ್ತೆ


Team Udayavani, Aug 28, 2018, 5:48 PM IST

dvg-2.jpg

ದಾವಣಗೆರೆ: ವೈಯಕ್ತಿಕ ದ್ವೇಷದ ಕಾರಣಕ್ಕೆ ಮಹಿಳೆ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು, ಚಾರಿತ್ರ್ಯವಧೆ ಮಾಡಿದವನನ್ನು ಸಿಇಎನ್‌ (Cyber Economics and Noretic controle crime) ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಾಷಾನಗರ ಮುಖ್ಯ ರಸ್ತೆಯ ಫ್ರೆಂಡ್ಸ್‌ ಕಮ್ಯೂನಿಕೇಶನ್‌ನ ತನ್ವೀರ್‌ ಅಹ್ಮದ್‌ ತಬೇರಿಜ್‌ ಬಂಧಿತ ಆರೋಪಿ.
ತನ್ವೀರ್‌ ಅಹ್ಮದ್‌ ತಬೇರಿಜ್‌ಗೆ ಸಹೋದರಿಯ ಮೂಲಕ ದಾವಣಗೆರೆಯ ಕೆಟಿಜೆ ನಗರದ ಮಹಿಳೆ ಪರಿಚಯವಾಗಿದ್ದರು. ಕೆಲ ಕಾಲದ ನಂತರ ಆ ಮಹಿಳೆ ಮತ್ತು ತನ್ವೀರ್‌ ಅಹ್ಮದ್‌ ತಬೇರಿಜ್‌ ನಡುವೆ ದ್ವೇಷ ಉಂಟಾಗಿತ್ತು. ಆ ಮಹಿಳೆ ಮೇಲೆ ಸೇಡು ತೀರಿಸಿಕೊಳ್ಳುವುದಕ್ಕಾಗಿ ಆತ ಈ ಕೆಲಸ ಮಾಡಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಾರೋ ಅಪರಿಚಿತರು ತನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ತನ್ನ ಅಶ್ಲೀಲ ಫೋಟೋ ಅಪ್‌ಲೋಡ್‌ ಮಾಡಿ, ´ಪೋನ್‌ ನಂಬರ್‌ ಹಾಕಿ, ಅಶ್ಲೀಲವಾಗಿ ಕಾಮೆಂಟ್‌ ಮಾಡಿರುವ ಸಂಬಂಧ ಆ ಮಹಿಳೆ ಸಲ್ಲಿಸಿದ ದೂರಿನ ಆಧಾರದಲ್ಲಿ ಸಿಇಎನ್‌ ಠಾಣಾ ಪೊಲೀಸರು ಕೂಲಂಕುಷ ತನಿಖೆ ನಡೆಸಿದಾಗ ಆರೋಪಿ ತನ್ವೀರ್‌ ಅಹ್ಮದ್‌ ತಬೇರಿಜ್‌ ಸಿಕ್ಕಿ ಬಿದ್ದಿದ್ದಾನೆ. ವಿಚಾರಣೆ ವೇಳೆ ತಾನೇ ಆ ಕೃತ್ಯ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅದರಲ್ಲಿ ಅಶ್ಲೀಲ ಫೋಟೋ ಅಪ್‌ಲೋಡ್‌ ಮಾಡಿ ಕಾಮೆಂಟ್‌ ಮಾಡಿದವರ ಪತ್ತೆಗಾಗಿ ಫೇಸ್‌ಬುಕ್‌ ಖಾತೆಯ ಯು.ಅರ್‌.ಎಲ್‌ (URL) ಮತ್ತು ಸ್ಕ್ರೀನ್‌ಶಾಟ್‌ ತೆಗೆದು, ಅಮೆರಿಕಾದಲ್ಲಿರುವ ಫೇಸ್‌
ಬುಕ್‌ ಕಂಪನಿಗೆ ಕಳಿಸಿಕೊಡಲಾಗಿತ್ತು. ಫೇಸ್‌ಬುಕ್‌ ಕಂಪನಿಯವರು ನಕಲಿ ಫೇಸ್‌ಬುಕ್‌ ಖಾತೆ ತೆರೆದ ವ್ಯಕ್ತಿಗೆ ಸಂಬಂಧಿಸಿದಂತೆ ಐ.ಪಿ. (ಐಕ) ವಿಳಾಸ ನೀಡಿದ್ದರು.

ಐ.ಪಿ. ವಿಳಾಸದ ಆಧಾರದಲ್ಲಿ ಫೇಸ್‌ಬುಕ್‌ ಖಾತೆಗೆ ಸಂಬಂಧಿಸಿದಂತೆ ಸಿ.ಡಿ.ಅರ್‌.ಕಾಲ್‌ಡಿಟೈಲ್‌ ಮಾಹಿತಿ
ಮತ್ತು ಸಿಎಎಫ್‌ ಮಾಹಿತಿ ಪಡೆದು, ತನ್ವೀರ್‌ ಅಹ್ಮದ್‌ ತಬೇರಿಜ್‌ನನ್ನು ಬಂಧಿಸಲಾಯಿತು. ಕೃತ್ಯಕ್ಕೆ ಬಳಸಿದ
ಮೊಬೈಲ್‌ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಸೈಬರ್‌ ಅಪರಾಧಕ್ಕೆ ಸಂಬಂಧಿಸಿದಂತೆ ಮೊದಲ ಪ್ರಕರಣ ಪತ್ತೆ ಹಚ್ಚಿ, ಆರೋಪಿ ಬಂಧಿಸಲಾಗಿದೆ. ಅನೇಕ ಮಹಿಳೆಯರು, ಯುವತಿಯರ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು, ಚಾರಿತ್ರ್ಯವಧೆ ಮಾಡುವಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಬೇಕು. ಅನೇಕರು ತಮ್ಮ ಹೆಸರಲ್ಲಿ ನಕಲಿ ಖಾತೆ ತೆರೆದಿದ್ದರೂ ಭಯ ಮತ್ತು ಮತ್ತಿತರ ಕಾರಣಕ್ಕೆ ದೂರು ಸಲ್ಲಿಸಲು ಮುಂದೆ ಬರುವುದೇ ಇಲ್ಲ. ನಕಲಿ ಖಾತೆಯ
ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಇಎನ್‌(ವಿದ್ಯಾನಗರ ಪೊಲೀಸ್‌ ಠಾಣೆ, ಮೇಲ್ಭಾಗ) ಠಾಣೆಯಲ್ಲಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.

ಈಚೆಗೆ ಸೈಬರ್‌ ಅಪರಾಧ ಹೆಚ್ಚಾಗುತ್ತಿವೆ. ವಿಶೇಷವಾಗಿ ಬ್ಯಾಂಕ್‌ ಆನ್‌ಲೈನ್‌ ಖಾತೆಗೆ ಸಂಬಂಧಿಸಿದಂತೆ ಪಿನ್‌ ನಂಬರ್‌ ಪಡೆದು, ಹಣ ಡ್ರಾ ಮಾಡಿಕೊಳ್ಳುವ ಬಗ್ಗೆ ದೂರು ಬರುತ್ತಿವೆ. ಸುಶಿಕ್ಷಿತರೇ ಹೆಚ್ಚಾಗಿ ಇಂತಹ ವಂಚನೆಗೆ ಒಳಗಾಗುತ್ತಿದ್ದಾರೆ.

ಕೆಲವಾರು ಕಾರಣಕ್ಕೆ ದೂರು ನೀಡಲು ಮುಂದೆ ಬರುವುದೇ ಇಲ್ಲ. ಸೈಬರ್‌ ಅಪರಾಧಗಳ ಬಗ್ಗೆಯೂ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು. ಸಿ.ಇ.ಎನ್‌.ಪೊಲೀಸ್‌ ಠಾಣೆ ವೃತ್ತ ನಿರೀಕ್ಷಕ ಟಿ.ಎನ್‌. ದೇವರಾಜ್‌, ಸಿಬ್ಬಂದಿ ರಾಮಚಂದ್ರ ಜಾಧವ್‌, ಪ್ರಕಾಶ್‌ರಾವ್‌, ರವಿ, ಸುರೇಶ್‌, ಸಚಿನ್‌, ಲೋಹಿತ್‌, ಪ್ರಕಾಶ್‌, ವೀರಭದ್ರಪ್ಪ, ರಮೇಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.