ಎಪಿಎಂಸಿಯಲ್ಲಿ ಎತ್ತುಗಳ ಸಂತೆ ಆರಂಭಿಸಿ


Team Udayavani, Aug 30, 2018, 2:09 PM IST

dvg-4.jpg

ಹರಪನಹಳ್ಳಿ: ಎತ್ತುಗಳ ಸಂತೆ ಜಿಲ್ಲಾ ಕೇಂದ್ರ ದಾವಣಗೆರೆ ಹೊರತುಪಡಿಸಿದರೆ ಯಾವ ತಾಲೂಕು ಕೇಂದ್ರದಲ್ಲಿಯೂ ಇಲ್ಲ. ಹಾಗಾಗಿ ಪಟ್ಟಣದಲ್ಲಿ ಎತ್ತುಗಳ ಸಂತೆ ಆರಂಭಿಸುವಂತೆ ಜಿ.ಪಂ ಸದಸ್ಯ ಎಚ್‌.ಬಿ. ಪರಶುರಾಮಪ್ಪ ಎಪಿಎಂಸಿ ಆಡಳಿತ ಮಂಡಳಿಗೆ ಸಲಹೆ ನೀಡಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ 2017-18ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ಸಮಿತಿ ಆಡಳಿತ ಕಚೇರಿಗೆ 1ನೇ ಮಹಡಿ ನಿರ್ಮಾಣ ಕಾಮಗಾರಿಗೆ ಹಾಗೂ 2015-16ನೇ ಸಾಲಿನ ಆರ್‌ಕೆವಿವೈ ಯೋಜನೆಯಲ್ಲಿ ನಿರ್ಮಿಸಲಾದ ಕುರಿ ಮತ್ತು ಮೇಕೆ ಮಾರುಕಟ್ಟೆ ಉದ್ಘಾಟನೆ ನೆರವೇರಿಸಿ ಅವರು
ಮಾತನಾಡಿದರು.

ಪಟ್ಟಣದಲ್ಲಿ ಕುರಿ ಸಂತೆ ಇರಲಿಲ್ಲ, ಹರಿಹರ, ಹಗರಿಬೊಮ್ಮನಹಳ್ಳಿಗೆ ಹೋದರೆ ಹೆದರಿಸಿ ವ್ಯವಹಾರದಲ್ಲಿ ಅನ್ಯಾಯ ಮಾಡುತ್ತಿದ್ದರು. ಕುರಿ ಮಾರಾಟಗಾರರ ಸಂಘ ರಚಿಸಿಕೊಂಡು ಮಾಜಿ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಅವಧಿಯಲ್ಲಿ ಪುರಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿದಾಗ ಹಿಂದಿನ ಶಾಸಕ ಪರಮೇಶ್ವರನಾಯ್ಕ ಸಹಕಾರದಿಂದ ಎಪಿಎಂಸಿ
ಆವರಣದಲ್ಲಿ ಪ್ರತಿ ಸೋಮವಾರ ಕುರಿ ಸಂತೆ ನಡೆಸುವಂತೆ ಅನುಮತಿ ನೀಡಲಾಗಿತ್ತು. ನಂತರ ಎಂ.ಪಿ.ರವೀಂದ್ರ ಅವರು 50 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕುರಿ ಸಂತೆ ಮಾರುಕಟ್ಟೆ ನಿರ್ಮಾಣ ಮಾಡಿದ್ದಾರೆ ಎಂದು ತಿಳಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ಎಪಿಎಂಸಿಯಲ್ಲಿನ ಸೌಲಭ್ಯಗಳನ್ನು ರೈತರು ಸದುಪಯೋಗ ಪಡೆಸಿಕೊಳ್ಳಬೇಕು ಎಂದರು.
 
ಕಾಂಗ್ರೆಸ್‌ ಹಿರಿಯ ಮುಖಂಡ ಟಿ.ಎಚ್‌.ಎಂ. ವಿರುಪಾಕ್ಷಯ್ಯ ಮಾತನಾಡಿ, ಎಂ.ಪಿ. ಪ್ರಕಾಶ್‌ ಅವರು ಹರಪನಹಳ್ಳಿಗೆ ಮಾರುಕಟ್ಟೆ ಮಂಜೂರು ಮಾಡಿದ್ದರು. ನಂತರ ಎಂ.ಪಿ.ರವೀಂದ್ರ ಅವರು ಎಪಿಎಂಸಿಯಲ್ಲಿ 20 ಸಾವಿರ ಮೆಟ್ರಿಕ್‌ ಟನ್‌ ಮೆಕ್ಕೆಜೋಳ ಶೇಖರಣೆ ಗೋದಾಮು, ಪ್ರಾಂಗಣದಲ್ಲಿ ಕಾಂಕ್ರಿಟ್‌ ರಸ್ತೆ, ಬಾಡಿಗೆ ಮಳಿಗೆಗಳು, ಕಾಂಪೌಂಡ್‌ ವಾಲ್‌, ಕುರಿ ಸಂತೆ ಸೇರಿದಂತೆ ಅಭಿವೃದ್ಧಿ ಮಾಡಿದರು ಎಂದು ಸ್ಮರಿಸಿದರು. ನಿರ್ದೇಶಕ ಬಿ.ಎನ್‌. ಉಮೇಶ್‌ ಪ್ರಸ್ತಾವಿಕ ಮಾತನಾಡಿದರು. ಮಾಜಿ ಅಧ್ಯಕ್ಷ ಕೆ.ಎಂ. ಬಸವರಾಜಯ್ಯ, ಎಪಿಎಂಸಿ ಅಧ್ಯಕ್ಷ ಡಿ.ಜಂಬಣ್ಣ, ಉಪಾಧ್ಯಕ್ಷ ಬೆನಕಶೆಟ್ಟಿ ಅಜ್ಜಪ್ಪ, ನಿರ್ದೇಶಕರಾದ ಪಿ.ಸುರೇಶ್‌, ಎಚ್‌.ಅಶೋಕಗೌಡ, ಎಚ್‌.ಭೀರಪ್ಪ, ಬಿ.ಆರ್‌. ನಳಿನಿ ರಾಮನಗೌಡ, ಎಂ.ಎ.ಅನ್ನಪೂರ್ಣಮ್ಮ, ಕೆ.ಬಸವರಾಜರೆಡ್ಡಿ, ತಾವರ್ಯನಾಯ್ಕ, ಬಿ. ಚಂದ್ರಶೇಖರ್‌, ಎಂ. ಗುರುನಾಥ್‌, ಬಿ.ರಾಮಪ್ಪ, ಪಿ. ಮಂಜುಳಾದೇವಿ, ಕಾರ್ಯದರ್ಶಿ ಕೆ.ಶಿಲ್ಪಶ್ರೀ, ತಾ.ಪಂ ಸದಸ್ಯ ನಾಗರಾಜ್‌, ಹಿರಿಯ ವರ್ತಕ ಧನರಾಜ್‌, ಎಇಇ ಎಂ.ಬಿ. ರವಿ, ಮುಖಂಡರಾದ ಅಬ್ದುಲ್‌ ರಹಿಮಾನಸಾಬ್‌, ಗೊಂಗಡಿ ನಾಗರಾಜ್‌, ಬೆನ್ನೂರು ಶಶಿಧರ್‌ ಮತ್ತಿತರಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.