ದೇವರು-ಧರ್ಮದ ಹೆಸರಿನಲ್ಲಿ ವಂಚನೆ: ಶ್ರೀ


Team Udayavani, Aug 31, 2018, 4:58 PM IST

dvg-3.jpg

ಹರಪನಹಳ್ಳಿ: ಅನೇಕ ಸ್ವಾಮಿಗಳು ಲಾಂಛನಧಾರಿಗಳಾಗಿ, ದೇವರು, ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ. ಸೊಳ್ಳೆಗೆ ಹೆದರಿ ಸೊಳ್ಳೆ ಪರದೆ ಒಳಗೆ ಮಲಗುವ ಸ್ವಾಮಿಗಳಿಗೆ ಶಾಪ ಕೊಡುವ ಅಥವಾ ವರ ಕೊಡುವ ಶಕ್ತಿಗಳು ಇರುವುದಿಲ್ಲ. ಅಂಥವರ ಮೋಸಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸಬೇಕು. ದುಶ್ಚಟಗಳಿಂದ ಮುಕ್ತರಾದರೆ ನಾವೂ ಶರಣರಂತೆ ಲೋಕದೃಷ್ಟಿಯನ್ನು ಗಳಿಸಿಕೊಳ್ಳಲು ಸಾಧ್ಯ ಎಂದು ಸಾಣೇಹಳ್ಳಿ ಮಠದ ಪೀಠಾಧ್ಯಕ್ಷ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ನಾಗರಕೊಂಡ ಗ್ರಾಮದಲ್ಲಿ ಗುರುವಾರ ಸಾಣೇಹಳ್ಳಿ ಶಿವಾನುಭವ ಸಮಿತಿ ಹಮ್ಮಿಕೊಂಡಿದ್ದ ವಚನಕಾರರ ತಾತ್ವಿಕ ಚಿಂತನಾಗೋಷ್ಠಿಯ ಶ್ರಾವಣ ಸಂಜೆ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಆಶೀವರ್ಚನ ನೀಡಿದರು. 

ಶರಣರ ಲೋಕದೃಷ್ಟಿ ಅತ್ಯಂತ ವಿಶಾಲವಾದುದು. ಅವರು ಈ ಲೋಕದಲ್ಲಿಯೇ ಸ್ವರ್ಗ-ನರಕಗಳನ್ನು ಕಂಡವರು. ಸತ್ತ ಮೇಲೆ ಕಾಣುವವರಲ್ಲ. “ಎಲವೋ ಎಂದರೆ ನರಕ, ಅಯ್ನಾ ಎಂದರೆ ಸ್ವರ್ಗ’ ಎಂದವರು. ಶರಣರ ದೃಷ್ಟಿಯಲ್ಲಿ ಈ ಜಗತ್ತು ಸತ್ಯ; ಮಿಥ್ಯವಲ್ಲ. “ಕೈಲಾಸವೆಂಬುದೊಂದು ಹಾಳು ಬೆಟ್ಟ..’ ಎನ್ನುವ ಮೂಲಕ “ಇಲ್ಲಿರುವುದೇ ನಮ್ಮನೆ ಅಲ್ಲಿರುವುದು ಸುಮ್ಮನೆ’ ಎಂದರು. ಶರಣರದು ಅತ್ಯಂತ ವಾಸ್ತವ ಮತ್ತು ವೈಚಾರಿಕ ದೃಷ್ಟಿಕೋನ. ಶರಣರು ದೇಹವನ್ನೇ ದೇವಾಲಯವಾಗಿಸಿಕೊಂಡು ದೇಹಕ್ಕೆ ಅತ್ಯಂತ ಮಹತ್ವ ಕೊಟ್ಟರು ಎಂದರು.

ವ್ಯಕ್ತಿಗೆ ದೈಹಿಕ ವಯಸ್ಸು ಮುಖ್ಯವಲ್ಲ. ಮಾನಸಿಕ ಪ್ರಬುದ್ಧತೆ ಬಹಳ ಮುಖ್ಯ. ಆ ಮಾನಸಿಕ ಪ್ರಬುದ್ಧತೆ ಸಮಾಜಸೇವೆಯಲ್ಲಿ ಪ್ರಕಟಗೊಳ್ಳಬೇಕು. ಕಾಮ, ಕ್ರೋಧ, ಮೋಹ, ಮದ, ಮತ್ಸರಗಳೆಂಬ ಅರಿಷಡ್ವರ್ಗಗಳಿಂದಾಗಿ ನಾವು ನಮ್ಮ ತನವನ್ನು ಕಳೆದುಕೊಂಡು ಮೃಗದಂತಾಗಿದ್ದೇವೆ. ಹಣದ ದಾಹ ಅತಿಯಾಗಿ ಸಂಪದ್ಭರಿತ ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಇಂದು ತಂತ್ರಜ್ಞಾನ ಹೆಚ್ಚಾಗಿ ಜೀವನಕ್ಕೆ ಬೇಕಾದ ಆಧುನಿಕ ಸೌಲಭ್ಯಗಳು ಇದ್ದರೂ ನೆಮ್ಮದಿಯಿಲ್ಲವಾಗಿದೆ. ಮನೆಯಲ್ಲಿನ ಅಣ್ಣ, ತಮ್ಮ, ಅಕ್ಕ, ಮಾವ, ತಂದೆ, ತಾಯಿ ಮುಂತಾದ ಮಾನವೀಯ ಬಂಧುತ್ವ ಮರೆಯಾಗಿದೆ. ಇಂದು ನಮ್ಮ ದೃಷ್ಟಿಕೋನ ಸ್ವಾರ್ಥ, ಹಿಂಸೆ, ದುರಾಸೆಯಿಂದಾಗಿ ಸಂಕುಚಿತಗೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಶರಣರ ಲೋಕದೃಷ್ಟಿ ವಿಷಯ ಕುರಿತು ಉಪನ್ಯಾಸ ನೀಡಿದ ತರೀಕೆರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಸಬಿತಾ ಬನ್ನಾಡಿ ಮಾತನಾಡಿ, ವಚನಗಳು ನನ್ನನ್ನು ಪ್ರಭಾವಿಸಿರುವುದಷ್ಟೇ ಅಲ್ಲ, ಹೊಸ ದೃಷ್ಟಿಯನ್ನು
ನೀಡಿವೆ. ಅಹಂಕಾರ ಎನ್ನುವ ಕತ್ತಲು ಓಡಿಸಲು ಬೆಳಕಿನ ದೀವಿಗೆಯಾಗಿ ವಚನಗಳಿವೆ. ವಚನಗಳು ಜಗತ್ತಿನ ಕಣ್ಣುಗಳು. ಈ ಕಣ್ಣುಗಳ ಮೇಲೆ ಕಾಲಕಾಲಕ್ಕೆ ಮುಸುಕು ಮುಚ್ಚಿರುತ್ತದೆ. ಇಂಥ ಸಂದರ್ಭದಲ್ಲಿ ಮುಸುಕು ತೆಗೆಯುವ ಕೆಲಸ ಶ್ರಾವಣ ಸಂಜೆಯಂತಹ ಚಿಂತನಾಗೋಷ್ಠಿಗಳ ಮೂಲಕ ನಡೆಯುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದರು.

ವಿಕೃತಿಗಳು ಜನರ ನಡುವೆ ಸುಲಭವಾಗಿ ಸೇರಲು ಸಾಮಾಜಿಕ ಜಾಲತಾಣಗಳು ಕಾರಣವಾಗಿವೆ. ಭೋಗಗಳಲ್ಲಿ ಮುಳುಗಿದ ನಮಗೆ ನಮ್ಮ ಮಕ್ಕಳ ಮದುವೆಯೂ ಮಾರಾಟದ ಸರಕಾಗಿರುವುದು ವಿಪರ್ಯಾಸದ ಸಂಗತಿ.
ನಡೆ-ನುಡಿಯ ಶುದ್ಧತೆಯಿಂದ ನಾವು ನೆಮ್ಮದಿಯ ಬದುಕು ಕಾಣಲು ಸಾಧ್ಯ. ಶರಣರು ಜಾತಿ, ಮತಗಳನ್ನು ಎಣಿಸದೆ ಎಲ್ಲರನ್ನೂ “ಅಯ್ಯ, ಅಣ್ಣ, ಅಕ್ಕ’ ಎನ್ನುವ ಮೂಲಕ “ಬಾ ಬಂಧು’ ಎಂದು ಅಪ್ಪಿಕೊಂಡರು. ಆದರೆ ಇಂದು “ಬಡಿ, ಹೊಡಿ’
ಎನ್ನುವ ಶಬ್ದಗಳು ವಿಜೃಂಭಿಸುತ್ತಿವೆ. ಜಗತ್ತಿನಲ್ಲಿಯೇ ಅತ್ಯಂತ ತಳಸಮುದಾಯದ, ಸಾಮಾನ್ಯರಲ್ಲಿ ಸಾಮಾನ್ಯ ಜನರಲ್ಲಿ ಆತ್ಮವಿಶ್ವಾಸ ಮೂಡಿಸಿದ ಚಳುವಳಿ ಶರಣ ಚಳುವಳಿ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಗ್ರಾಮದಲ್ಲಿ ಪಂಡಿತಾರಾಧ್ಯ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು. ಸಾಧು ಲಿಂಗಾಯಿತ ಸಮಾಜದ ಅಧ್ಯಕ್ಷ ಮಂಜುನಾಥ ಗುಂಡಗತ್ತಿ, ಜಿ. ನಂಜನಗೌಡ, ಸಾಸ್ವಿಹಳ್ಳಿ ಚನ್ನಬಸವನಗೌಡ, ಸಿದ್ದೇಶಪ್ಪ, ಪಿಎಸ್‌ಐ ರಮೇಶ್‌, ಬಣಕಾರ್‌ ಕೊಟ್ರೇಶ್‌, ಗೋವಿಂದಶೆಟ್ರಾ, ಶಾಂತಕುಮಾರ, ಎಂ.ಟಿ. ಕೊಟ್ರೇಶ್‌, ಜಿ.ಕೊಟ್ರೇಶ್‌, ಎಚ್‌.ಎಸ್‌.ದ್ಯಾಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.