ದುಶ್ಚಟಗಳಿಗೆ ಬಲಿಯಾಗದಿರಿ: ಲಿಂಗಣ್ಣ
Team Udayavani, Sep 1, 2018, 5:45 PM IST
ಮಾಯಕೊಂಡ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣ ಪಡೆಯಬೇಕು ಎಂದು ಶಾಸಕ ಪ್ರೊ| ಲಿಂಗಣ್ಣ ಕರೆ ನೀಡಿದರು. ಗ್ರಾಮದ ಬಸವೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ ಹಾಗೂ ರೋವರ್ಮತ್ತು ರೇಂಜರ್ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ವಿದ್ಯಾವಂತರಿಗೆ ನೌಕರಿ ದೊರಕುವುದು ಕಷ್ಟಕರವಾಗಿದೆ.
ಜೀವನದಲ್ಲಿ ಪ್ರತಿಭಾವಂತರಿಗೆ ಅವಕಾಶಗಳು ಸಿಗುತ್ತವೆ. ಕೀಳರಿಮೆ ತೊರೆದು, ಉತ್ತಮ ವಿದ್ಯಾಭ್ಯಾಸ ಮಾಡಿ, ಸರ್ಕಾರದ ಸೌಲಭ್ಯಗಳನ್ನು ಪಡೆದು ತಂದೆ-ತಾಯಿ ಹಾಗೂ ಸಮಾಜಕ್ಕೆ ಹೆಸರು ತರುವಂತೆ ಉತ್ತಮರಾಗಬೇಕು ಎಂದರು.
ದಾವಣಗೆರೆ ದವನ್ ಕಾಲೇಜು ಪ್ರಾಚಾರ್ಯ ಪ್ರೊ| ಬಾತಿ ಬಸವರಾಜು ಮಾತನಾಡಿ. ಕನ್ನಡ ಭಾಷೆಯ ಜತೆಗೆ ಪ್ರಮುಖವಾಗಿ ಇಂಗ್ಲಿಷ್ ಭಾಷೆ ಕಲಿಯಬೇಕು. ಹಾಗೂ ಎಂದೂ ಪಲಾಯನವಾದ ವ್ಯಕ್ತಿತ್ವ ಬೇಡ ಎಂದರು. ಪ್ರಾಚಾರ್ಯ ಪಾಲಾಕ್ಷಿನಾಯ್ಕ, ಆಂಗ್ಲ ಪ್ರಾಧ್ಯಾಪಕ ಡಾ| ಚಂದ್ರಶೇಖರಪ್ಪ ಮಾತನಾಡಿದರು.
ಗ್ರಾಪಂ ಸದಸ್ಯ ಸಂಡೂರ್ ರಾಜಶೇಖರ್, ಡಾ| ಸುಪ್ರಿಯಾ ಆರ್, ರಾಘವೇಂದ್ರರಾವ್, ಮಂಜುನಾಥ, ಪ್ರಸನ್ನ, ನಟರಾಜು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಶೋಕ, ಮುಖಂಡರಾದ ನೀಲಪ್ಪ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಉಷಾ, ಪೂಜಾ, ಸಿಂಧು ಸಂಗಡಿಗರು ಪ್ರಾರ್ಥಿಸಿದರು.
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ದ್ವಿತೀಯ ದರ್ಜೆ ಸಹಾಯಕ ಎಚ್.ಎಸ್. ತಿಲಕ್ ನಗದು ಬಹುಮಾನ ನೀಡಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ