ನಾವೆಲ್ಲರೂ ಒಂದೇ ಎಂಬುದನ್ನು ತೋರಿಸಿ


Team Udayavani, Sep 3, 2018, 3:47 PM IST

dvg-1.jpg

ದಾವಣಗೆರೆ: ಬಣಜಿಗರ ಸಮುದಾಯ ಬಾಂಧವರು ಒಗ್ಗಟ್ಟು, ಸಂಘಟಿತರಾಗುವ ಮೂಲಕ ವೀರಶೈವ-ಲಿಂಗಾಯತ ಸಮಾಜವನ್ನು ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಜಗದೀಶ್‌ ಶೆಟ್ಟರ್‌ ಹೇಳಿದರು. ಪಿ.ಬಿ.ರಸ್ತೆಯ ಅಭಿನವ ರೇಣುಕ ಮಂದಿರದಲ್ಲಿ ಭಾನುವಾರ ಬಣಜಿಗರ ಜಿಲ್ಲಾ ಸಮಾವೇಶ ಮತ್ತು ವಿಶ್ವಸ್ಥ ಮಂಡಳಿ ಸದಸ್ಯರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬಣಜಿಗ, ಸಾಧು, ಶಿವಸಿಂಪಿ ಒಳಗೊಂಡಂತೆ ಎಲ್ಲವೂ ವೀರಶೈವ-ಲಿಂಗಾಯತ ಸಮಾಜದ ಅಂಶಗಳು. ಬಣಜಿಗ ಸಮುದಾಯ ಬಾಂಧವರು ಸಂಘಟಿತರಾಗುವ ಮುಖೇನ ವೀರಶೈವ-ಲಿಂಗಾಯತ ಸಮಾಜ ಬಲಪಡಿಸಿ, ನಾವೆಲ್ಲರೂ ಒಂದು ಎಂಬುದನ್ನು ತೋರಿಸಬೇಕು ಎಂದರು.
 
ಕೆಲ ದಿನಗಳ ಹಿಂದೆ ರಾಜಕಾರಣಕ್ಕಾಗಿ ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸ ನಡೆಯಿತು. ಯಾವುದೇ ಸಮಾಜವೇ ಆಗಲಿ ಸರ್ಕಾರದಿಂದ ದೊರೆಯುವ ಸೌಲಭ್ಯ, ಹಕ್ಕುಗಳನ್ನು ಕಾನೂನು, ಹೋರಾಟದ ಮೂಲಕವೇ ಪಡೆಯಬೇಕು. ಸೌಲಭ್ಯ, ಹಕ್ಕಿಗಾಗಿ ಸಮುದಾಯವನ್ನೇ ಒಡೆಯಬಾರದು.

ವೀರಶೈವ-ಲಿಂಗಾಯತ ಸಮುದಾಯವನ್ನು ಒಡೆಯುವ ಕೆಲಸದ ಸಂದರ್ಭದಲ್ಲಿ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ವೀರಶೈವ-ಲಿಂಗಾಯತ ಒಂದೇ ಎಂಬ ನಿಲುವಿಗೆ ಗಟ್ಟಿಯಾಗಿ ನಿಂತ ಪರಿಣಾಮ ಸಮುದಾಯ ಒಡೆಯುವ ಪ್ರಯತ್ನ ನಿಂತಿತು ಎಂದು ತಿಳಿಸಿದರು.

ಮಹಾನ್‌ ದಾರ್ಶನಿಕ ಆಣ್ಣ ಬಸವಣ್ಣನವರು ನೀಡಿರುವ ಆದರ್ಶ, ವಚನಗಳ ತಿರುಳನ್ನು ಅರ್ಥ ಮಾಡಿಕೊಂಡು ನಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು. ಆ ಮೂಲಕ ಸಮಾಜದ ಬದಲಾವಣೆ, ಜಾಗೃತಿ ಮಾಡಬೇಕು. ಬಣಜಿಗ
ಸಮಾಜದ ಸಂಘಟಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದರು. 

ಬಣಜಿಗ ಸಮಾಜದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಸಮಾಜದಲ್ಲಿನ ಆರ್ಥಿಕ ದುರ್ಬಲರು, ಓದಲಿಕ್ಕೆ ಕಷ್ಟದ ಸ್ಥಿತಿಯಲ್ಲಿರುವ ರನಉ ಗುರುತಿಸಿ, ಅಂತಹ ಕುಟುಂಬ ಮತ್ತು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಿವ ಕೆಲಸಕ್ಕೆ ಸಮಾಜದ ಮುಖಂಡರು ಮುಂದಾಗಬೇಕು ಎಂದು ಮನವಿ ಮಾಡಿದರು.

ಅಖೀಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ
ಮಾತನಾಡಿ, ಬಸವಣ್ಣ-ರೇಣುಕರು ಬಣಜಿಗರು, ಪಂಚಾಚಾರ್ಯರು, ಸಾದರು, ಶಿವಸಿಂಪಿಗರು ಬೇರೆ ಬೇರೆ ಎಂದು ಹೇಳಿಯೇ ಇಲ್ಲ, ಕೆಲಸದ ಆಧಾರದ ಮೇಲೆ ವ್ಯಾಪಾರ ಮಾಡುವರು ಬಣಜಿಗರು, ಎಣ್ಣೆ ತಯಾರಿಸುವರು ಗಾಣಿಗರು, ಬಟ್ಟೆ ಹೊಲೆಯುವವರು ಸಿಂಪಿಗರು ಎಂದು ಕರೆಯಲಾಗುತ್ತದೆ. ಬಸವಣ್ಣನವರು ಹೇಳಿದ್ದೇ ಒಂದು ಆಗುತ್ತಿರುವುದು ಇನ್ನೊಂದು ಎನ್ನುವಂತಾಗುತ್ತಿದೆ ಎಂದರು.

ಬಣಜಿಗರು, ಪಂಚಾಚಾರ್ಯರು, ಸಾದರು, ಶಿವಸಿಂಪಿಗರು ಏನೇ ಆಗಲಿ ನಾವೆಲ್ಲರೂ ವೀರಶೈವ-ಲಿಂಗಾಯತರು ಒಂದೇ ಎಂದು ಹೊಂದಾಣಿಕೆಯಿಂದ ಇದ್ದಾಗ ಮಾತ್ರ ನಮ್ಮ ಉದ್ಧಾರ ಸಾಧ್ಯ ಆಗುತ್ತದೆ. ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಲಿಕ್ಕೆ ಆಗುತ್ತದೆ. ಅದನ್ನು ಬಿಟ್ಟು ನಾವು ನಾವೇ ಕೈ ಕೈ ಮಿಲಾಯಿಸಿ ಹೊಡೆದಾಡುವುದರಿಂದ ನಮ್ಮ ಉದ್ಧಾರ ಆಗುವುದೇ ಇಲ್ಲ ಎಂದು ಎಚ್ಚರಿಸಿದರು. 

ರಾಜಕಾರಣಿಗಳು ವೀರಶೈವ-ಲಿಂಗಾಯತರನ್ನು ಒಡೆಯುವ ಕೆಲಸ ಮಾಡಿದ್ದನ್ನು ನೋಡಿದ್ದೇವೆ. ನಾವು ಒಂದಾಗದೇ ಇದ್ದ ಕಾರಣಕ್ಕೆ 1.5 ಕೋಟಿಯಷ್ಟು ಇದ್ದ ಜನಸಂಖ್ಯೆಯನ್ನು 70-80 ಲಕ್ಷಕ್ಕೆ ತರುವ ಕೆಲಸ ಮಾಡಿದ್ದಾರೆ. ವೀರಶೈವ-ಲಿಂಗಾಯತರು ಒಂದೇ ಎಂದು ಹೊರಟರೆ ರಾಜ್ಯವನ್ನ ಹಿಡಿತಕ್ಕೆ ತೆಗೆದುಕೊಳ್ಳಬಹುದು ಎಂದು ತಿಳಿಸಿದರು.

ಶಾಸಕ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಬಹಳ ಬುದ್ಧಿವಂತರಾದ ಬಣಜಿಗ ಸಮಾಜ ಸದಾ ಬಿಜೆಪಿಯನ್ನು ಬೆಂಬಲಿಸುತ್ತಾ ಬರುತ್ತಿದೆ. ನಾವು ಸಮಾಜದ ಋಣ ತೀರಿಸುತ್ತೇವೆ ಎಂದು ತಿಳಿಸಿದರು. 

ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಆರ್‌. ಸಿದ್ದಲಿಂಗೇಶ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಸಿ.ಎಂ. ಉದಾಸಿ, ಕೈಗಾರಿಕೋದ್ಯಮಿ ಅಥಣಿ ಎಸ್‌. ವೀರಣ್ಣ, ಭರಮಸಾಗರ ಜಿಪಂ ಸದಸ್ಯ ಡಿ.ವಿ. ಶರಣಪ್ಪ, ಬಣಜಿಗ ಸಮಾಜದ ರಾಜ್ಯ ಅಧ್ಯಕ್ಷ ಡಾ| ಶಿವಬಸಪ್ಪ ಹೆಸರೂರು, ಮಹಿಳಾ ಘಟಕದ ಅಧ್ಯಕ್ಷೆ ಸರಳ ಹೇರೆಕರ, ಬಿ.
ಚಿದಾನಂದಪ್ಪ, ದೇವರಮನಿ ಶಿವಕುಮಾರ್‌, ಜಿ. ವೇದಮೂರ್ತಿ, ಎಂ.ವಿ. ಗೊಂಗಡಿಶೆಟ್ರಾ, ಕೋಗುಂಡಿ ಬಕ್ಕೇಶಪ್ಪ, ಟಿ.ಎಸ್‌. ಜಯರುದ್ರೇಶ್‌, ಅಜ್ಜಂಪುರ ವಿಜಯ್‌ಕುಮಾರ್‌, ಹಾಸಭಾವಿ ಕರಿಬಸಪ್ಪ ಇತರರು ಇದ್ದರು. ಅಪರ್ಣ ನಿರೂಪಿಸಿದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.