ಐವರು ದರೋಡೆಕೋರರ ಬಂಧನ: 30 ಲಕ್ಷದ ಚಿನ್ನಾಭರಣ ವಶ


Team Udayavani, Sep 3, 2018, 4:16 PM IST

dvg-3.jpg

ದಾವಣಗೆರೆ: ಬೆಳ್ಳಿ ಬಂಗಾರದ ಆಭರಣಗಳ ಪಾಲಿಶ್‌ ಮಾಡಿಕೊಡುವ ನೆಪದಲ್ಲಿ ಮಾಂಗಲ್ಯ ಸರ ಅಪಹರಿಸುತ್ತಿದ್ದ ಐವರು ಅಂತಾರಾಜ್ಯ ದರೋಡೆಕೋರರನ್ನು ದಾವಣಗೆರೆ ಗ್ರಾಮಾಂತರ ವಿಭಾಗದ ಹೊನ್ನಾಳಿ, ಹರಿಹರ ಪೊಲೀಸರು ಬಂಧಿಸಿ 30 ಲಕ್ಷ ರೂ. ಮೌಲ್ಯದ 1 ಕೆಜಿ ಬಂಗಾರದ ಆಭರಣ ವಶಪಡಿಸಿಕೊಂಡಿದ್ದಾರೆ.

ಬಿಹಾರ್‌ನ ಗೋವಿಂದಪುರದ ಸುಮೀತ್‌ ಕುಮಾರ್‌(24), ನಿರಂಜನ್‌ ಕುಮಾರ್‌ ಅಲಿಯಾಸ್‌ ನಿರಂಜನ್‌ ಗುಪ್ತ (22), ಭಜ್ರಾಹ ಬಜಾರ್‌ ಗ್ರಾಮದ ಮುಖೇಶ್‌ ಕುಮಾರ್‌, ಮಧುರಪುರ ಗ್ರಾಮದ ರಾಕೇಶ್‌(39), ಪರ್ವತಪುರ ಗ್ರಾಮದ ಸಂತೋಷ್‌ ಕುಮಾರ್‌ (29) ಬಂಧಿತರು.

ಈ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಆರೋಪಿಗಳ ವಿರುದ್ಧ ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ 24 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿಗಳಿಂದ 30 ಲಕ್ಷ ಬೆಲೆ ಬಾಳುವ ಒಟ್ಟು 1,006 ಗ್ರಾಂ (1.6 ಕೆಜಿ) ತೂಕದ ಬಂಗಾರದ ಆಭರಣ ಹಾಗೂ 2 ಪಲ್ಸರ್‌ ಬೈಕ್‌ ವಶಪಡಿಸಿಕೊಳ್ಳಲಾಗಿದೆ ಎಂದರು.

ಕಳೆದ ಆ.25 ರಂದು ರಾತ್ರಿ ಹೊನ್ನಾಳಿ ತಾಲೂಕು ಕಮ್ಮಾರಗಟ್ಟೆ ಗ್ರಾಮದ ಹೊರವಲಯದ ಒಂಟಿ ಮನೆಗೆ 4 ರಿಂದ 5 ಜನರಿರುವ ದರೋಡೆಕೋರರ ತಂಡ ನುಗ್ಗಿತ್ತು. ಈ ಸಮಯದಲ್ಲಿ ಎಚ್ಚರಗೊಂಡ ಮನೆ ಮಾಲಿಕ ಗಂಗಾಧರಪ್ಪ ಕೊರಳಲಿದ್ದ ಬಂಗಾರದ ಚೈನ್‌ ಕಿತ್ತುಕೊಂಡು ಅವರನ್ನು ದೂಡಾಡಿ ಹೊಡೆಯುತ್ತಿರುವಾಗ ಮನೆಯಲ್ಲಿ ಮಲಗಿದ್ದ ಇನ್ನಿಬ್ಬರು ಕೆಲಸಗಾರರು ಗಂಗಾಧರಪ್ಪನ ಸಹಾಯಕ್ಕೆ ಓಡಿ ಬಂದರು. ಇದನ್ನು ಕಂಡ ನಾಲ್ಕು ಜನ ಡಕಾಯಿತರು ತಪ್ಪಿಸಿಕೊಂಡು ಬೈಕ್‌ಗಳಲ್ಲಿ ಪರಾರಿಯಾಗಿದ್ದರು. ಆದರೆ, ಒಬ್ಬ ಆರೋಪಿ ಸುಮೀತ್‌ಕುಮಾರ್‌ನನ್ನು ಹಿಡಿದು, ಹೊನ್ನಾಳಿ ಪೊಲೀಸರಿಗೆ ಒಪ್ಪಿಸಿದ್ದರು.

ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅಂದೇ ಉಳಿದ ನಾಲ್ಕು ಜನ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ನಡೆಸಿದಾಗ ಹೊನ್ನಾಳಿ, ನ್ಯಾಮತಿ, ಹರಿಹರ, ಹರಪನಹಳ್ಳಿ, ಅರಸಿಕೆರೆ, ಜಗಳೂರು, ದಾವಣಗೆರೆ ನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ, ಚೇಳೂರು ಹಾಗೂ ವಿವಿಧ ಕಡೆಗಳಲ್ಲಿ ಬೆಳ್ಳಿ ಬಂಗಾರದ ಆಭರಣಗಳ ಪಾಲಿಶ್‌ ಮಾಡಿಕೊಡುವ ನೆಪದಲ್ಲಿ ಅಭರಣ ದೋಚಿರುವುದು, ಮಾಂಗಲ್ಯಸರ ಕಿತ್ತುಕೊಂಡು
ಪರಾರಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದರು.

ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಗ್ರಾಮಾಂತರ ವಿಭಾಗದ ಉಪಾಧೀಕ್ಷಕ ಎಂ.ಕೆ. ಗಂಗಲ್‌, ಹೊನ್ನಾಳಿ ವೃತ್ತ ನಿರೀಕ್ಷಕ ಜೆ. ರಮೇಶ್‌, ಹರಿಹರ ವೃತ್ತ ನಿರೀಕ್ಷಕ ಲಕ್ಷ್ಮಣನಾಯ್ಕ, ಪಿಎಸ್‌ ಐಗಳಾದ ಎಚ್‌.ಎಂ. ಸಿದ್ದೇಗೌಡ, ಎನ್‌.ಸಿ. ಕಾಡದೇವರ ಹನುಮಂತಪ್ಪ ಶಿರೆಹಳ್ಳಿ, ಸಿಬ್ಬಂದಿ ರಾಘವೇಂದ್ರ, ಮಜೀದ್‌, ರಮೇಶ್‌ನಾಯ್ಕ, ಶಾಚಿತರಾಜ್‌, ಮಹಮದ್‌ ಇಲಿಯಾಸ್‌, ರಾಮಚಂದ್ರ ಜಾಧವ್‌, ಫೈರೋಜ್‌ ಖಾನ್‌, ವೆಂಕಟರಮಣ, ಸೈಯದ್‌ ಗಫಾರ್‌, ಗಿರೀಶ್‌ ನಾಯ್ಕ, ಕೃಷ್ಣ, ವೆಂಕಟೇಶ್‌, ದೇವರಾಜ, ಮಂಜು, ನಾಗನಗೌಡ, ಕುಮಾರನಾಯ್ಕ, ಮಹೇಶ್‌ ಕುಮಾರ್‌ಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.