ಸೂರಿಗಾಗಿ ಹೆಸರು ಸೇರ್ಪಡೆಗೆ ಹಣ ಕೇಳದಿರಿ: ಜಯಶೀಲ


Team Udayavani, Sep 4, 2018, 3:35 PM IST

dvg-2.jpg

ದಾವಣಗೆರೆ: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರಿ ಯೋಜನೆಯಡಿ ಮನೆ ಮಂಜೂರಾತಿ ಮಾಡಲು ಯಾರಿಂದಲೂ ಹಣ ಪಡೆಯದಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಕೆ.ಆರ್‌. ಜಯಶೀಲ ಮನವಿ ಮಾಡಿದ್ದಾರೆ.

ಸೋಮವಾರ, ಡಾನ್‌ಬಾಸ್ಕೋ ಶಾಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಗೆ ಏರ್ಪಡಿಸಿದ್ದ ಗ್ರಾಮ ಪಂಚಾಯತಿ ಬಲವರ್ಧನೆ ಮತ್ತು ಮಕ್ಕಳ ರಕ್ಷಣೆ ವಿಚಾರವಾಗಿ ಜಿಲ್ಲಾ ಮಟ್ಟದ ಸಮಾಲೋಚನಾ ಕಾರ್ಯಗಾರ ಉದ್ಘಾಟಿಸಿ,
ಮಾತನಾಡಿದ ಅವರು, ಕೆಲವು ಗ್ರಾಮ ಪಂಚಾಯತಿಯಲ್ಲಿ ಮನೆ ಸಂಬಂಧ (ಫಲಾನುಭವಿ ಪಟ್ಟಿಯಲ್ಲಿ ಹೆಸರು ಸೇರಿಸಲು) 20-30 ಸಾವಿರ ರೂಪಾಯಿ ಕೇಳಲಾಗುತ್ತಿದೆ ಎಂಬ ಬಗ್ಗೆ ಸಾಕಷ್ಟು ದೂರು ಬಂದಿವೆ.

20-30 ಸಾವಿರ ರೂಪಾಯಿ ಕೊಡುವಂತಹ ಶಕ್ತಿ ಇದ್ದಂತಹವರು ಗುಡಿಸಲಲ್ಲಿ ಏಕೆ ಇದ್ದಾರೆ ಎಂದು ಪ್ರಶ್ನೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಹಣ ಪಡೆಯಬಾರದು ಎಂದರು.
 
ಗ್ರಾಮದಲ್ಲಿ ಯಾರಿಗೆ ಮನೆ ಇಲ್ಲ. ಎಲ್ಲಿ, ಯಾವ ಪರಿಸ್ಥಿತಿಯಲ್ಲಿ ಇದ್ದಾರೆ ಎಂಬುದರ ಬಗ್ಗೆ ಗಾಪಂ ಸದಸ್ಯರಿಗೆ ಚೆನ್ನಾಗಿ ಗೊತ್ತಿರುತ್ತದೆ. ಸೂರೇ ಇಲ್ಲದವರಿಗೆ ಒಂದು ಸೂರು ಕಲ್ಪಿಸುವ ಅಧಿಕಾರ ಮತ್ತು ಅವಕಾಶ ಅವರಿಗೆ ಇದೆ. ಅಂತಹ ಅಧಿಕಾರ ಮತ್ತು ಅವಕಾಶವನ್ನು ನ್ಯಾಯ, ಧರ್ಮದ ಆಧಾರದಲ್ಲಿ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತ್‌ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್‌ಗೆ ಅತಿ ಹೆಚ್ಚಿನ ಅಧಿಕಾರ, ಆದ್ಯತೆ ನೀಡಲಾಗುತ್ತಿದೆ. ಸದಸ್ಯರು ಗ್ರಾಮ ಪಂಚಾಯತ್‌ಗಳ ಬಲವರ್ಧನೆಗೆ ಹೆಚ್ಚು ಗಮನ ನೀಡಬೇಕು.

ನಮ್ಮ ಗ್ರಾಮ, ನಮ್ಮ ಯೋಜನೆಯಡಿ ಸ್ವತ್ಛತೆ, ಮಕ್ಕಳ ಶಿಕ್ಷಣಕ್ಕೆ ಒತ್ತು, ಕುಡಿಯುವ ನೀರು ಇತರೆ ಸೌಲಭ್ಯ ಒದಗಿಸುವ ಜೊತೆಗೆ ಗ್ರಾಮಗಳಲ್ಲಿನ ವಿದ್ಯಾವಂತ ನಿರುದ್ಯೋಗಿಗಳು ಸ್ವಾವಲಂಬನೆ ಜೀವನ ರೂಪಿಸಿಕೊಳ್ಳಲು ತರಬೇತಿ ವ್ಯವಸ್ಥೆ ಮಾಡುವಂತಾಗಬೇಕು. ಗ್ರಾಮ ಪಂಚಾಯತಿ ಸದಸ್ಯರು ಒಗ್ಗೂಡಿ ಕೆಲಸ ಮಾಡುವ ಮೂಲಕ ಮಾದರಿ ಗ್ರಾಮ ಪಂಚಾಯತಿಯನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕ ಮಾತುಗಳಾಡಿದ ಸಿಡಬ್ಲೂಸಿ ಸಂಸ್ಥೆಯ ಶ್ರೀನಿವಾಸ ಗಾಣಿಗ, ಸ್ವರಾಜ್‌ ಗ್ರಾಮ ಪಂಚಾಯತ್‌ ರಾಜ್‌-1993 ಕಾಯ್ದೆಯ ಅಧಿನಿಯಮ 44ರ ಪ್ರಕಾರ ದುರ್ಬಲ, ಅಸುರಕ್ಷಿತ ವಾತಾವರಣದಲ್ಲಿರುವ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವುದು ಪ್ರತಿ ಗ್ರಾಮ ಪಂಚಾಯತಿ ಸದಸ್ಯರ ಆದ್ಯ ಜವಾಬ್ದಾರಿ ಮಾತ್ರವಲ್ಲ, ಕರ್ತವ್ಯವೂ ಹೌದು. 

ಹಾಗಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಂತಹ ಮಕ್ಕಳನ್ನ ಗುರುತಿಸಿ, ಸಂರಕ್ಷಣೆ ಮಾಡಬೇಕು. ಮಹಿಳೆಯರ ಸಂರಕ್ಷಣೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು. ರಾಜ್ಯದ 6,022 ಗ್ರಾಮ ಪಂಚಾಯತಿಯಲ್ಲಿ
1.5 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಎಲ್ಲಾ ಸದಸ್ಯರು ಮಹಾತ್ಮ ಗಾಂಧೀಜಿಯವರ ಕನಸು ಸಾಕಾರಕ್ಕೆ ಶ್ರಮಿಸಬೇಕು. ಸ್ಥಳೀಯ ಸರ್ಕಾರ ಬಲಪಡಿಸುವ ಮಹತ್ತರ ಉದ್ದೇಶದಿಂದಾಗಿಯೇ ಸ್ವರಾಜ್‌ ಗ್ರಾಮ ಪಂಚಾಯತ್‌ ರಾಜ್‌-1993 ಕಾಯ್ದೆ ಜಾರಿಗೆ ತರಲಾಗಿದೆ. 29 ಅಂಶಗಳ ಅನುಷ್ಠಾನದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರಿಗೆ ಅಧಿಕಾರ ಮತ್ತು ಅವಕಾಶ ಇದೆ. 5 ವರ್ಷಗಳಲ್ಲಿ ನಮ್ಮ ಗ್ರಾಮ, ನಮ್ಮ ಯೋಜನೆಯನ್ನು ಅತಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಗ್ರಾಮ ಮತ್ತು ಗ್ರಾಮ ಪಂಚಾಯತ್‌ ಬಲವರ್ಧನೆ, ಮಕ್ಕಳು ಮತ್ತು ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕಿದೆ ಎಂದು ಹೇಳಿದರು.

ಗ್ರಾಮ ಪಂಚಾಯತ್‌ ಸದಸ್ಯರ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿ.ಸಿ. ವಿಶ್ವನಾಥ್‌, ಡಾನ್‌ಬಾಸ್ಕೋ ಸಂಸ್ಥೆ ಉಪ ನಿರ್ದೇಶಕ ಫಾ| ಜೋಸ್‌ ಜೋಸೆಫ್‌, ಸಿಡಬ್ಲ್ಯೂಸಿ ಸಂಸ್ಥೆಯ ಕೃಪಾ, ಶಿವಮೂರ್ತಿ ಇತರರು ಇದ್ದರು. ಬಿ.
ಮಂಜಪ್ಪ ನಿರೂಪಿಸಿದರು. ಆರ್‌. ದುರುಗಪ್ಪ ವಂದಿಸಿದರು.

ಪಿಡಿಒಗಳಿಂದ ಹುನ್ನಾರ…
ಕೆಲವೆಡೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರು, ಸದಸ್ಯರಿಗೆ ಯಾವುದೇ ಮಾಹಿತಿ ನೀಡದೇ ಇರುವುದು, ಅವರು ಹೇಳಿದ ಕಡೆ ಸಹಿ ಮಾಡಲು ಒತ್ತಾಯ ಒಳಗೊಂಡಂತೆ ಇತರೆ ವಿಧಾನಗಳ ಮೂಲಕ ಗ್ರಾಮ ಪಂಚಾಯತಿ ಸದಸ್ಯರನ್ನ ನಿಷ್ಕಿÅಯಗೊಳಿಸುವ ವ್ಯವಸ್ಥಿತ
ಹುನ್ನಾರ ನಡೆಯುತ್ತಿದೆ. ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಏನಾದರೂ ಮಾಹಿತಿ ಕೇಳಿದರೆ ಕೊಡುವುದೇ ಇಲ್ಲ. ತೀರಾ ಒತ್ತಾಯಿಸಿದರೆ ಏನಾದರೂ ಒಂದು ಹೇಳುತ್ತಾರೆ. ಸಣ್ಣ ಪುಟ್ಟದಕ್ಕೂ ಪ್ರತಿಭಟನೆಗಿಳಿಯುವ ಮೂಲಕ ಇಡೀ ಜಿಲ್ಲೆಯ ಗ್ರಾಮ ಪಂಚಾಯತ್‌ ಆಡಳಿತವನ್ನೇ ನಿಷ್ಕಿÅಯಗೊಳಿಸುವ, ಸ್ಥಗಿತಗೊಳಿಸುವ ಕೆಲಸ ಮಾಡುತ್ತಾರೆ. ಗ್ರಾಮ ಪಂಚಾಯತ್‌ ಸದಸ್ಯರು ಒಮ್ಮೆಯೂ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿಲ್ಲ.

ಗ್ರಾಮ ಪಂಚಾಯತ್‌ ಸದಸ್ಯರಿಗೆ ಪರಮಾಧಿಕಾರ ಇದೆ ಎಂದು ಹೇಳುತ್ತಾರೆ. ಆದರೆ, ಕೆಲ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ನಡೆದುಕೊಳ್ಳುವುದು ನೋಡಿದರೆ ಯಾವ ಪಾಪ ಮಾಡಿದ್ದಕ್ಕೆ ಗ್ರಾಮ ಪಂಚಾಯತ್‌ ಸದಸ್ಯರಾಗಿದ್ದೇವೆ… ಎಂದೆನಿಸುತ್ತದೆ. ಗ್ರಾಮ ಪಂಚಾಯತಿ ಸದಸ್ಯರಿಗೆ ಏನಾದರೂ ಸಮಸ್ಯೆಯಾದರೆ ತಾಲೂಕು, ಜಿಲ್ಲಾ, ರಾಜ್ಯ ಗ್ರಾಮ ಪಂಚಾಯತ್‌ ಸದಸ್ಯರ ಒಕ್ಕೂಟ ಸದಸ್ಯರ ಬೆನ್ನಿಗೆ ಇದೆ. ಯಾವುದೇ ಸಮಸ್ಯೆ ಆದಲ್ಲಿ ಒಕ್ಕೂಟದ ಗಮನಕ್ಕೆ ತರಬೇಕು ಎಂದು ಗ್ರಾಮ ಪಂಚಾಯತ್‌ ಸದಸ್ಯರ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿ.ಸಿ. ವಿಶ್ವನಾಥ್‌ ಮನವಿ ಮಾಡಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.