ಬಲವಂತದ ಸಾಲ ವಸೂಲಿ ಬೇಡ
Team Udayavani, Sep 7, 2018, 4:10 PM IST
ಜಗಳೂರು: ಬ್ಯಾಂಕ್ ಅಧಿಕಾರಿಗಳು ರೈತರಿಂದ ಬಲವಂತವಾಗಿ ಸಾಲ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಿ ರೈತ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಇಲ್ಲಿನ ಪ್ರವಾಸಿ ಮಂದಿರದಿಂದ ಎಸ್ಬಿಎಂ ಬ್ಯಾಂಕ್ವರೆಗೆ ತಾಲೂಕು ರೈತರ ಸಂಘ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ನೇತೃತ್ವದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಅಧಿಕಾರಿಗಳ ವಿರುದ್ಧ ಆಕ್ರೋಶ
ವ್ಯಕ್ತಪಡಿಸಿದರು.
ಪಟ್ಟಣದ ಎಸ್ಬಿಐ ಬ್ಯಾಂಕ್ಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ರೈತರು ಅಡವಿಟ್ಟ ಬಂಗಾರದ ಒಡವೆ ಮತ್ತು ವಾಹನಗಳನ್ನು ಜಪ್ತಿ ಮಾಡುತ್ತಿರುವುದನ್ನು ನಿಲ್ಲಿಸಬೇಕೆಂದು ಬ್ಯಾಂಕ್ ಅಧಿಕಾರಿಗಳನ್ನು ಒತ್ತಾಯಿಸಿ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ ಮಾತನಾಡಿ, ತಾಲೂಕಿನ ವಿವಿಧ ಬ್ಯಾಂಕ್ಗಳು ಬಲವಂತದ ಸಾಲ ವಸೂಲಿ ಮಾಡುವ ಉದ್ದೇಶದಿಂದ ರೈತರಿಗೆ ನೋಟಿಸ್ ಜಾರಿ ಮಾಡುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗಾಗಿ
ಒತ್ತೆ ಇಟ್ಟ ಒಡವೆಗಳನ್ನು ಹರಾಜು ಹಾಕಲು ಸೆ. 12 ರಂದು ದಿನಾಂಕ ನಿಗದಿಯಾಗಿದೆ. ಇದು ರೈತರ ವಿರೋಧಿ ನೀತಿಯಾಗಿದೆ ಎಂದು ದೂರಿದರು. ಹಲವೆಡೆ ಟ್ರಾಕ್ಟರ್ಗಳನ್ನು ಜಪ್ತಿ ಮಾಡಿದ್ದಾರೆ.
ಬಲವಂತ ಸಾಲ ವಸೂಲಿಯನ್ನು ಶೀಘ್ರವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಹಸಿರು ಸೇನೆಯ ಅಧ್ಯಕ್ಷ ಗಡಿಮಾಕುಂಟೆ ಬಸವರಾಜಪ್ಪ, ಮುಖಂಡರಾದ ರಾಜಪ್ಪ, ಚೌಡಪ್ಪ, ದುರುಗಪ್ಪ, ಬಾಲರಾಜ್, ಗುರುಸಿದ್ದಪ್ಪ, ಹಾಲೇಶ್, ಮಹಾತ್ಮ, ಬಸಣ್ಣ, ಲೋಕೇಶ್, ತಿಮ್ಮಾರೆಡ್ಡಿ, ತಿಪ್ಪೇಸ್ವಾಮಿ, ಮಂಜಣ್ಣ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್