ಅನ್ಯಾಯ ಖಂಡಿಸಿ ಡಿಸಿ ಅಣುಕು ಶವಯಾತ್ರೆ


Team Udayavani, Oct 5, 2018, 3:26 PM IST

dvg-1.jpg

ದಾವಣಗೆರೆ: ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಬಗರ್‌ ಹುಕುಂ ಸಾಗುವಳಿ ಭೂಮಿಯನ್ನು ಗಣಿಗಾರಿಕೆಗೆ ನೀಡಿರುವುದನ್ನು ವಿರೋಧಿಸಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಆಂಬೇಡ್ಕರ್‌ ವಾದಿ)
ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಹರಪನಹಳ್ಳಿ ಹಿಂದಿನ ತಹಶೀಲ್ದಾರ್‌ ಅಣುಕು ಶವಯಾತ್ರೆ, ಅಂತ್ಯಕ್ರಿಯೆ ನಡೆಸಿ, ಪ್ರತಿಭಟಿಸಿದ್ದಾರೆ.

ಪಿ.ಬಿ. ರಸ್ತೆಯ ಪಂಚಮಹಾ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಹಾಗೂ ಈ ಹಿಂದಿನ ಹರಪನಹಳ್ಳಿ ತಹಶೀಲ್ದಾರ್‌ ಅವರ ಅಣುಕು ಶವಯಾತ್ರೆ ಆರಂಭಿಸಿದ ದಸಂಸ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಬಳಿ ಮುಂಭಾಗದ ಅಣುಕು ಶವವಿಟ್ಟು ಪ್ರತಿಭಟಿಸಿದರು.

ಉಚ್ಚಂಗಿದುರ್ಗ ಗ್ರಾಮದ ರಿ.ಸ.ನಂ. 441/2ರ 19.42 ಎಕರೆ ಸರ್ಕಾರಿ ಭೂಮಿಯಲ್ಲಿ ಅದೇ ಗ್ರಾಮದ ರೈತ ದುಗ್ಗತ್ತಿ ಉಚ್ಚೆಂಗಪ್ಪ ಹಲವಾರು ವರ್ಷಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡಿಕೊಂಡಿದ್ದು, ಭೂ ಮಾಲಿಕತ್ವಕ್ಕಾಗಿ ಅರ್ಜಿ ಕೂಡ ಸಲ್ಲಿಸಿದ್ದರು. ಈ ಮಧ್ಯೆ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ವೇಳೆ ಸಿಡಿಮದ್ದು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 2000ನೇ ಇಸವಿ ಜ.18ರಲ್ಲಿ ಜಿಲ್ಲಾ ಸೇಷನ್‌ ಜಡ್ಜ್ ನ್ಯಾಯಾಲಯವು ಉಚ್ಚೆಂಗಪ್ಪಗೆ ಕಾರಾಗೃಹ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಅನುಭವಿಸಿ ಬಂದ ರೈತ ಉಚ್ಚೆಂಗಪ್ಪನಿಗೆ ಬಗರ್‌ ಹುಕುಂ ಸಾಗುವಳಿ ಮಾಡುವಂತಿಲ್ಲ ಎಂಬುದಾಗಿ ಬಗರ್‌ಹುಕುಂ ಸಕ್ರಮೀಕರಣ ಸಾಗುವಳಿ ಸಮಿತಿ ಆತ ಸಲ್ಲಿಸಿದ್ದ ಫಾರಂ ನಂ.53ರ ಅರ್ಜಿ ವಜಾಗೊಳಿಸಿದೆ.

ಆ ನಂತರ ಜಿಲ್ಲಾಧಿಕಾರಿ ಹಾಗೂ ಹಿಂದಿನ ಹರಪನಹಳ್ಳಿ ತಹಶೀಲ್ದಾರ್‌ ಗುರುಬಸವರಾಜ್‌ ಅವರಿಗೆ ಸಂಕಷ್ಟದಲ್ಲಿದ್ದ ಉಚ್ಚಂಗಪ್ಪಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಇದುವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರು ಆಕ್ರೋಶ ವ್ಯಕ್ತಪಡಿಸಿದರು. 

ಉಚ್ಚೆಂಗಪ್ಪನ ಸ್ವಾಧಿಧೀನದಲ್ಲಿದ್ದ 7.20 ಎಕರೆ ಭೂಮಿಯನ್ನು ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಎಲ್ಲಾ ಸಾಕ್ಷಿ ಆಧಾರ ನೀಡಿದರೂ ಸಹ ಅಧಿಕಾರಿಗಳು ಮೌನ ವಹಿಸಿದ್ದಾರೆ. ಹರಪನಹಳ್ಳಿ ಹಿಂದಿನ ತಹಶೀಲ್ದಾರ್‌ ಗುರುಬಸವರಾಜ್‌ ಹಾಗೂ ಜಿಲ್ಲಾಧಿಕಾರಿ ನ್ಯಾಯಾಲಯದ ತೀರ್ಪು ಉಲ್ಲಂಘಿಸಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ್ದ ಆದೇಶ ಹಿಂಪಡೆದು, ಉಚ್ಚೆಂಗಪ್ಪಗೆ ಪರ್ಯಾಯ ಭೂ ಮಂಜೂರು ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಆಂಬೇಡ್ಕರ್‌ ವಾದಿ)ಹಾಗೂ ಸಾಮಾಜಿಕ ಸಂಘರ್ಷ ಸಮಿತಿ ನೇತೃತ್ವದಲ್ಲಿ 340 ದಿನಗಳ ಕಾಲ ಪ್ರತಿಭಟಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಅ. 10ರಂದು ಜಿಲ್ಲಾಧಿಕಾರಿ ಮನೆ ಮುಂದೆ ಪ್ರತಿಭಟಿಸಲಾಗುವುದು ಎಂದು ಪ್ರತಿಭಟನಾಕಾರರು ಗಡುವು ನೀಡಿ, ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪಗೆ ಅವರಿಗೆ ಮನವಿ ಸಲ್ಲಿಸಿದರು.

ಸಾಮಾಜಿಕ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಪ್ರೊ| ಸಿ.ಕೆ. ಮಹೇಶ್ವರಯ್ಯ, ದಸಂಸ ರಾಜ್ಯ ಸಂಚಾಲಕ ಎಚ್‌.ಮಲ್ಲೇಶ್‌, ಜಿಲ್ಲಾ ಸಂಚಾಲಕ ಡಿ. ಹನುಮಂತಪ್ಪ, ಬಿ.ಎನ್‌. ನಾಗೇಶ್‌, ಪಿ. ತಿಪ್ಪೇರುದ್ರಪ್ಪ, ಎಚ್‌.ಸಿ. ಮಲ್ಲಪ್ಪ, ಜಿ.ಎಸ್‌. ಲೋಕೇಶ್‌, ಅಂಜಿನಪ್ಪ ನೀಲಗುಂದ, ಎಂ. ಚಂದ್ರಪ್ಪ, ಎಚ್‌. ನಾಗರಾಜ್‌, ನಾರಾಯಣಪ್ಪ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.