ಕಬ್ಬು ಬೆಳೆಯುವ ತಾಂತ್ರಿಕತೆ ಮಾಹಿತಿ ನೀಡಿ


Team Udayavani, Oct 5, 2018, 3:44 PM IST

dvg-3.jpg

ದಾವಣಗೆರೆ: ಕೃಷಿ ಇಲಾಖೆಯಿಂದ ಕಬ್ಬು ಬೇಸಾಯದ ಬಗ್ಗೆ ತಾಂತ್ರಿಕ ಮಾಹಿತಿ ಅವಶ್ಯಕತೆ ಇದೆ. ಹಾಗಾಗಿ ಬೆಳಗಾವಿ ಮಾದರಿಯಲ್ಲಿ ರೈತರಿಗೆ ಕಬ್ಬು ಬೆಳೆಯುವ ತಾಂತ್ರಿಕತೆ ತಿಳಿಸಿಕೊಡಬೇಕಿದೆ ಎಂದು ಲೋಕಿಕೆರೆ ಜಿಲ್ಲಾ ಪಂಚಾಯತ್‌ ಸದಸ್ಯ ಕೆ.ಎಚ್‌. ಓಬಳಪ್ಪ ಹೇಳಿದ್ದಾರೆ.

ದಾವಣಗೆರೆ ತಾಲೂಕಿನ ಕನಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳೇನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡ 2018-19ಸಾಲಿನ ಆತ್ಮ… ಯೋಜನೆಯಡಿ ಕಬ್ಬು ಬೆಳೆಯುವ ರೈತರಿಗೆ ಕಿಸಾನ್‌ ಗೋಷ್ಠಿ ಹಾಗೂ ಮಣ್ಣು ಆರೋಗ್ಯ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಾವಣಗೆರೆ ಭಾಗದ ರೈತರು ಕಬ್ಬಿನ
ಇಳುವರಿ ಎಕರೆಗೆ 100 ಟನ್‌ ಬೆಳೆದು ಹಾಗೂ ಹೆಚ್ಚು ಲಾಭ ಪಡೆಯಬೇಕಿದೆ ಎಂದು ಆಶಿಸಿದರು.

ನೂತನ ತಾಂತ್ರಿಕತೆಗಳಾದ ಒಂದುಗಣ್ಣು ನಾಟಿ, ಕಬ್ಬಿನ ಸಸಿ ತಯಾರಿಕೆ, ಅಂಗಾಂಶ ಕೃಷಿ ಮಾದರಿಯಲ್ಲಿ ಸಸಿ ಪಡೆದುಕೊಂಡು ಹಾಗೂ ಸ್ವಂತ ಬೀಜ ಹೊಲದಲ್ಲೆ ಬೆಳೆದು ನಾಟಿ ಮಾಡುವುದರಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂದು ತಿಳಿಸಿದರು.

ಕೃಷಿ ಇಲಾಖೆ ಉಪ ನಿರ್ದೇಶಕಿ ಡಾ| ಹಂಸವೇಣಿ ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತೆ ಯೋಜನೆಯಡಿ ಕಬ್ಬು ಉತ್ಪಾದನೆ ಹೆಚ್ಚಿಸಲು ಈ ಗ್ರಾಮದಲ್ಲಿ ಪ್ರಾತ್ಯಕ್ಷತೆ ಕೈಗೊಳ್ಳಲಾಗಿದೆ. ಉಚಿತವಾಗಿ ಸಾವಯವ ಗೊಬ್ಬರ, ಜಿಂಕ್‌, ಲಘು ಪೋಷಕಾಂಶ ಹಾಗೂ ಅಂತರಬೆಳೆ ಹಲಸಂದಿ ಬೀಜ ವಿತರಿಲಾಗಿದೆ. ಸಾವಯವ ಗೊಬ್ಬರ, ಜಿಂಕ್‌, ಲಘು ಪೋಷಕಾಂಶ ಬಳಸುವುದರಿಂದ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು. 

ಕೃಷಿ ಇಲಾಖೆಯಿಂದ ಕೆ-ಕಿಸಾನ್‌ ಕಾರ್ಯಕ್ರಮ ಪ್ರಾರಂಭವಾಗಿದೆ. ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಸಂಖ್ಯೆ, ಪಹಣಿ, ಜಾತಿ ಪ್ರಮಾಣಪತ್ರ ಹಾಗೂ ಅಂಗವಿಕಲ ಪ್ರಮಾಣ ಪತ್ರವನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಿ ನೋಂದಣಿ ಮಾಡಿಸಿದ ಎಲ್ಲಾ ರೈತರು ಕೆ-ಕಿಸಾನ್‌ಕಾರ್ಡ್‌ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಆತ್ಮ ಉಪ ಯೋಜನೆಯ ನಿರ್ದೇಶಕ ಎಸ್‌.ಬಿ. ರಾಜಶೇಖರಪ್ಪ ಮಾತನಾಡಿ, ಕಬ್ಬಿನಲ್ಲಿ ಹೆಚ್ಚು ರಾಸಾಯನಿಕ ಗೊಬ್ಬರ ಬಳಸುವುದರಿಂದ ಹೆಚ್ಚು ಇಳುವರಿ ಪಡೆಯುವುದು ಸಾಧ್ಯವಿಲ್ಲ. ಸಾವಯವ ಗೊಬ್ಬರದಿಂದ ಅಧಿಕ ಇಳುವರಿ ಸಿಗಲಿದೆ. ಕಬ್ಬಿನಲ್ಲಿ ಇತ್ತೀಚಿನ ದಿನದಲ್ಲಿ ಗೊಣ್ಣೆಗಳ ಬಾಧೆ ಹೆಚ್ಚಾಗಿದೆ. ಮೇಟರೈಜಿಯಮ್‌ ಬಳಸುವುದರಿಂದ ಹತೋಟಿ ಆಗಲಿದೆ ಎಂದು ತಿಳಿಸಿದರು. 

ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ, ರೈತರಿಗೆ ಇಲಾಖೆಯಲ್ಲಿ ದೊರೆಯುವ ಸಬ್ಸಿಡಿ ಹಾಗೂ ಪರಿಕರಗಳು, ಕೀಟನಾಶಕ, ತುಂತುರು ನೀರಾವರಿ ಘಟಕದ ಬಗ್ಗೆ ವಿವರಿಸಿ, ಇಲಾಖೆಯ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ಸಕಾಲದಲ್ಲಿ
ತಲುಪಿಸುವುದಾಗಿ ತಿಳಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಸಹಾಯಕ ಕೃಷಿ ಅಧಿಕಾರಿ ದುರುಗಪ್ಪ ಇತರರು ಇದ್ದರು. ಒಂದುಗಣ್ಣು ಪದ್ಧತಿಯಲ್ಲಿ ಹೆಚ್ಚು ಇಳುವರಿ ಪಡೆದ ರೈತ ಎನ್‌. ಹನುಮಂತಪ್ಪರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ರೈತರಿಗೆ ಎನ್‌ ಎಫ್‌ಎಸ್‌ಎಂ ಪರಿಕರ ವಿತರಿಸಲಾಯಿತು. 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.