ಮನವಿಗೆ ಮಣಿಯದ ಕಿರಿಯ ವೈದ್ಯರು


Team Udayavani, Oct 25, 2018, 2:33 PM IST

dvg-1.jpg

ದಾವಣಗೆರೆ: ಶಿಷ್ಯವೇತನಕ್ಕಾಗಿ ಕಿರಿಯ ವೈದ್ಯರು ಜಿಲ್ಲಾಸ್ಪತ್ರೆ ಆವರಣದಲ್ಲಿ ಸೋಮವಾರದಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಮುಂದುವರಿದಿದೆ.

ಕಳೆದ ಫೆಬ್ರವರಿಯಿಂದ ಬಾಕಿ ಇರುವ ಶಿಷ್ಯವೇತನ ಬಿಡುಗಡೆ ಸಂಬಂಧ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಖುದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಶ್ರೀನಿವಾಸ್‌(ವಾಸು) ಭರವಸೆ ನೀಡಿದರೂ ಅವರ ಮಾತಿಗೆ ಮಣಿಯದ ಕಿರಿಯ ವೈದ್ಯರು ಧರಣಿ ಮುಂದುವರೆಸಲು ನಿರ್ಧರಿಸಿದ್ದಾರೆ.

ಬುಧವಾರ ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡ ನಂತರ ಜಿಲ್ಲಾ ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ಕಿರಿಯ ವೈದ್ಯರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಶ್ರೀನಿವಾಸ್‌, ಅವರ ಬೇಡಿಕೆ ಆಲಿಸಿದರು. ಬಾಕಿ ಇರುವ ಶಿಷ್ಯವೇತನ ಬಿಡುಗಡೆಗೆ ಒತ್ತಾಯಿಸಿ ಕಿರಿಯ ವೈದ್ಯರು ಧರಣಿ ಆರಂಭಿಸಿರುವುದು ಗಮನಕ್ಕೆ ಬಂದ ತಕ್ಷಣ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್‌, ಇಲಾಖೆ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿದ್ದೇನೆ. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಖುದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ಕಿರಿಯ ವೈದ್ಯರ ಪ್ರತಿನಿಧಿಗಳು ನನ್ನೊಂದಿಗೆ ಬೇಡಿಕೆಯ ಬಗ್ಗೆ ಚರ್ಚಿಸಿದ್ದಾರೆ. ಗುರುವಾರ ಆ ಪ್ರತಿನಿಧಿಗಳನ್ನು ಸಹ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಚರ್ಚೆಗೆ ಕರೆದುಕೊಂಡು ಹೋಗುತ್ತೇನೆ. ಧರಣಿ ನಿರತರಲ್ಲಿ ಬಹುತೇಕರು ಶಿಷ್ಯವೇತನ ನೆಚ್ಚಿಕೊಂಡೇ ಓದುತ್ತಿದ್ದಾರೆ ಎಂಬುದು ಗೊತ್ತಿದೆ. 

ನೀವು ಸರ್ಕಾರದ ಗಮನ ಸೆಳೆದಿದ್ದೀರಿ. ಸಮಸ್ಯೆ ಬಗೆಹರಿಸುತ್ತೇನೆ. ರೋಗಿಗಳ ಹಿತದೃಷ್ಟಿಯಿಂದ ಹೋರಾಟ ನಿಲ್ಲಿಸಿ, ಸೇವೆಗೆ ಹಿಂತಿರುಗಿ ಎಂಬುದಾಗಿ ಸಚಿವರು ಮನವಿ ಮಾಡಿದರು. ಆದರೆ, ಕಿರಿಯ ವೈದ್ಯರು ಲಿಖೀತ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದರು.

ಸರ್ಕಾರ ದಾವಣಗೆರೆ ಮತ್ತು ಮಂಗಳೂರು ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಸರ್ಕಾರಿ ಕೋಟಾದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುತ್ತಿದೆ. ಆ ಬಗ್ಗೆ ಈಗ ಆಡಿಟ್‌ ಅಬೆಕ್ಷನ್‌ ಆಗಿದೆ. ದಾವಣಗೆರೆ ಆಸ್ಪತ್ರೆಯಿಂದ ವರ್ಷಕ್ಕೆ 75 ಲಕ್ಷದಿಂದ 1.25 ಕೋಟಿವರೆಗೆ ಆದಾಯ ಬರುತ್ತಿದೆ. ವರ್ಷಕ್ಕೆ 8-10 ಕೋಟಿಯಷ್ಟು ಶಿಷ್ಯವೇತನ ನೀಡಲಾಗುತ್ತಿದೆ ಎಂದು ಆಡಿಟ್‌ ಅಬೆಕ್ಷನ್‌ ಆಗಿರುವುದು ನಿಮಗೆ ಗೊತ್ತೇ ಇದೆ. ದಾವಣಗೆರೆ ಆಸ್ಪತ್ರೆಯಿಂದ
ಬರುವ ಆದಾಯದ ಬಗ್ಗೆ ಆದಷ್ಟು ಬೇಗ ವರದಿ ನೀಡಲು ಸಂಬಂಧಿತರಿಗೆ ಸೂಚನೆ ನೀಡಿದ್ದೇನೆ. 

ಈವರೆಗೆ ಶಿಷ್ಯವೇತನ ನೀಡುತ್ತಿರುವಂತೆ ಈಗಲೂ ನೀಡಬೇಕು ಎಂಬುದು ಸರ್ಕಾರದ ಬಯಕೆ. ಹಾಗಾಗಿಯೇ ನಾನು ಕ್ಯಾಬಿನೆಟ್‌ ಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಹೋರಾಟ ಕೈ ಬಿಡಿ ಎಂದು ಧರಣಿನಿರತ ಕಿರಿಯ ವೈದ್ಯರನ್ನು ಮತ್ತೆ ವಿನಂತಿಸಿದರು.

ಆದರೂ, ಧರಣಿ ನಿರತರು ಒಪ್ಪಲೇ ಇಲ್ಲ. ನೀವು ಹೀಗೆ ಹೋದರೆ ನಷ್ಟವಾಗುವುದು ನಿಮಗೆ. ನಿಮ್ಮ ಸೇವೆ ನಮಗೆ ಬೇಡ. ನೀವು ಯಾವ ಕಾಲೇಜಿನಲ್ಲಿ ಓದುತ್ತಿರುವಿರೋ ಅಲ್ಲೇ ಆಸ್ಪತ್ರೆ ಮಾಡಿಕೊಂಡು, ಹೌಸ್‌ ಸರ್ಜನ್‌ ಆಗಿ ಕೆಲಸ ಮಾಡಿ ಎಂಬುದಾಗಿ ಹೇಳಿದರೆ ನಷ್ಟವಾಗುವುದು ನಿಮಗೆ. ನಿಮ್ಮಂತೆಯೇ ಹೋದರೆ ಕೆಲಸ ಆಗೊಲ್ಲ. ಹಾಗಾಗಿ ಹೋರಾಟ ಕೈ ಬಿಡಿ ಎಂದರು. ಆದರೂ, ಧರಣಿ ನಿರತರು ಪಟ್ಟು ಸಡಿಸಲಿಲ್ಲ. ಧರಣಿ ಮುಂದುವರೆಸುತ್ತೇವೆ ಎಂದು ಸಚಿವರಿಗೆ ತಿಳಿಸಿ, ಧರಣಿ ಮುಂದುವರೆಸಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.