ಮನುಕುಲದ ಒಳಿತಿಗೆ ಅರಣ್ಯ ಸಂರಕ್ಷಿಸಿ


Team Udayavani, Oct 26, 2018, 4:56 PM IST

davangere.jpg

ದಾವಣಗೆರೆ: ಪ್ರಸ್ತುತ ನಾಗರಿಕತೆ-ಅಭಿವೃದ್ಧಿ ಸೋಗಲ್ಲಿ ಅರಣ್ಯ ಹಾಗೂ ಘಟ್ಟಪ್ರದೇಶಗಳನ್ನು ನಾಶ ಮಾಡುತ್ತಿದ್ದು, ಮನುಕುಲದ ಒಳಿತಿಗಾಗಿ ಅವುಗಳ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕಿದೆ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಗುರುವಾರ, ನಗರದ ಹದಡಿ ರಸ್ತೆಯಲ್ಲಿರುವ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಪಾರಂಪರಿಕ ವೈದ್ಯ ಪರಿಷತ್‌, ನವದೆಹಲಿಯ ರಾಷ್ಟ್ರೀಯ ಔಷಧಿ ಸಸ್ಯಗಳ ಪ್ರಾಧಿಕಾರ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಹಾಗೂ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನ ಮತ್ತು ಮೂಲಿಕಾ ಉತ್ಸವ-2018ರ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಕೈಗಾರಿಕೆ, ನಾಗರಿಕತೆ, ಅಭಿವೃದ್ಧಿ ಹೆಸರಲ್ಲಿ ಇಂದು ಅರಣ್ಯ ಮತ್ತು ಅಪರೂಪದ ಔಷಧಿ ಸಸ್ಯ ಬೆಳೆಯುವ ಪ್ರರ್ವತ ಶ್ರೇಣಿಗಳ ನಾಶ ಮಾಡಲಾಗುತ್ತಿದ್ದು, ಇದು ಆತಂಕಕಾರಿ ಸಂಗತಿ ಎಂದರು.

ತುಂಬಾ ಗಂಭೀರವಾದ ಆರೋಗ್ಯ ಸಮಸ್ಯೆಯನ್ನೂ ಸಹ ಭಾರತೀಯ ಪ್ರಾಚೀನ ವೈದ್ಯಪದ್ಧತಿಯಿಂದ ಗುಣಪಡಿಸಲಾಗಿದೆ. ಈ ವೈದ್ಯಪದ್ಧತಿಗೆ ಬಳಸುವ ಗಿಡಮೂಲಿಕೆ, ಔಷಧಿ ಸಸ್ಯಗಳು ದೊರೆಯುವುದು ಅರಣ್ಯ ಹಾಗೂ ಪಶ್ಚಿಮಘಟ್ಟ, ಇತರೆ ಪರ್ವತ ಶ್ರೇಣಿಗಳಲ್ಲಿ. ಆದರೆ, ನಾವು ಅಭಿವೃದ್ಧಿ ಸೋಗಲ್ಲಿ ಇವುಗಳನ್ನು ನಾಶಮಾಡುತ್ತಿದ್ದೇವೆ. ಅದಕ್ಕೆ ಡಾ| ಕಸ್ತೂರಿರಂಗನ್‌ ವರದಿ ಜಾರಿಗೆ ತರುವ ಮೂಲಕ ಪಶ್ಚಿಮಘಟ್ಟ ಉಳಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಹೇಳಿದರು.

ಹಳ್ಳಿಗಳಲ್ಲಿ ಈ ಹಿಂದೆ ಯಾವುದೇ ಪ್ರತಿಫಲ ಆಪೇಕ್ಷಿಸದೇ ನಾಟಿವೈದ್ಯರು ಔಷಧಿ ನೀಡುತ್ತಿದ್ದರು. ಸಣ್ಣ-ಪುಟ್ಟ ಆರೋಗ್ಯದ ಸಮಸ್ಯೆಗಳಿಗೆ ಜನರು ಆಸ್ಪತ್ರೆಗೆ ಬರುತ್ತಿರಲಿಲ್ಲ. ಕಾಲಕ್ರಮೇಣ ಆ ವೈದ್ಯರ ಸಂಖ್ಯೆ ಕಡಿಮೆಯಾಗಿರುವುದು ಸಹ ಆತಂಕದ ವಿಷಯ ಎಂದ ಅವರು, ಪ್ರಸ್ತುತ ಭಾರತೀಯರು ವಿದೇಶಿ ಚಿಕಿತ್ಸಾ ಪದ್ಧತಿಗೆ ಮಾರುಹೋಗಿದ್ದಾರೆ. ಆದರೆ, ವಿದೇಶಿಯರು ಭಾರತೀಯ ಪ್ರಾಚೀನ ವೈದ್ಯಪದ್ಧತಿ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಹಾಗಾಗಿ ಪ್ರಾಚೀನ ವೈದ್ಯಪದ್ಧತಿ ಉಳಿಸಿ, ಬೆಳೆಸಲು ಸರ್ಕಾರದ ಜತೆಗೆ ಸಮುದಾಯದ ಪ್ರೋತ್ಸಾಹವೂ ಬೇಕಿದೆ ಎಂದು ತಿಳಿಸಿದರು. 

ಭಾರತೀಯ ಯೋಗ ಪದ್ಧತಿ ಈಗ ವಿಶ್ವಮಾನ್ಯತೆ ಪಡೆದಿದ್ದು, ಮುಂದೆ ಪಾರಂಪರಿಕ ವೈದ್ಯಪದ್ಧತಿ ಸಹ ವಿಶ್ವಮಾನ್ಯತೆ ಪಡೆಯಲಿದೆ. ಕರ್ನಾಟಕದ ಮಧ್ಯದಲ್ಲಿರುವ ದಾವಣಗೆರೆಯಲ್ಲಿ ಪರಂಪರಿಕ ವೈದ್ಯಪದ್ಧತಿ ಕೇಂದ್ರ ಸ್ಥಾಪಿಸಿದಲ್ಲಿ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ಆಶಿಸಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ.ರವೀಂದ್ರನಾಥ್‌ ಮಾತನಾಡಿ, ಈಗಿನ ಪರಿಸ್ಥಿತಿಯಲ್ಲಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗೂ ದೊಡ್ಡ ಆಸ್ಪತ್ರೆಗೆ ಹೋಗಬೇಕಿದೆ. ಇನ್ನು ಗಂಭೀರ ಕಾಯಿಲೆಯ ಚಿಕಿತ್ಸೆಗೆ 10-15 ಲಕ್ಷ ರೂ. ವೆಚ್ಚವಾಗಲಿದೆ. ಬಡವರಿಗೆ ಇಷ್ಟೊಂದು ಹಣ ಕೊಡಲು ಆಗುವುದಿಲ್ಲ. ಹಿಂದೆಲ್ಲಾ ಹಾವು-ಚೇಳು ಕಡಿತಕ್ಕೆ ಹಳ್ಳಿಗಳಲ್ಲೇ ಔಷಧಿ ಕೊಡುತ್ತಿದ್ದರು. ಬಲು ದುಬಾರಿಯಾದ ಈ ಕಾಲದಲ್ಲಿ ಸಾಮಾನ್ಯ ಜನರಿಗೂ ಚಿಕಿತ್ಸೆ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಪಾರಂಪರಿಕ ವೈದ್ಯರು ಚಿಂತಿಸಬೇಕು ಎಂದರು.

ಪಾರಂಪರಿಕ ವೈದ್ಯಪದ್ಧತಿ ಉಳಿಸಿ, ಬೆಳಸಲು ಮಧ್ಯ ಕರ್ನಾಟಕದ ದಾವಣಗೆರೆ ಬಳಿ 10 ಎಕರೆ ಜಾಗದ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ದಾವಣಗೆರೆ ನಗರದ ಅಕ್ಕ ಪಕ್ಕ ಒಂದು ಎಕರೆ ಸಿಗುವುದು ಸಹ ಕಷ್ಟ. ಜಾಗದ ಬೆಲೆ ಅಷ್ಟೊಂದು ಏರಿದೆ. ನಿಮಗೆ ಸಹಾಯ ಮಾಡಲು ನನ್ನಿಂದ ಆಗುತ್ತೂ ಇಲ್ಲವೋ ಗೊತ್ತಿಲ್ಲ. ಆದರೂ ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.

ಆದಿಚುಂಚನಗರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಸ್ವಾಮೀಜಿ, ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಹೆಬ್ಟಾಳು ವಿರಕ್ತಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ, ಪಾರಿಂಪರಿಕ ವೈದ್ಯ ಪರಿಷತ್‌ ಸಂಸ್ಥಾಪಕ ಪ್ರೊ. ಹರಿರಾಮಮೂರ್ತಿ, ಡಾ.ಸತ್ಯನಾರಾಯಣಭಟ್‌, ಟ್ರಾನ್ಸ್‌ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಪ್ರದ್ಮಶ್ರೀ ಡಾ| ದರ್ಶನ್‌ ಶಂಕರ್‌, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಕೆ.ಆರ್‌.ಜಯಶೀಲ, ಜಾರ್ಖಂಡ್‌ನ‌ ಪ್ರಪುಲ್ಲಕುಮಾರ್‌ ಇತರರು ವೇದಿಕೆಯಲ್ಲಿದ್ದರು.

ಪಾರಿಂಪರಿಕ ವೈದ್ಯ ಪರಿಷತ್‌ನ ರಾಜ್ಯಾಧ್ಯಕ್ಷ ನೇರ್ಲಿಗೆ ಗುರುಸಿದ್ದಪ್ಪ ಸ್ವಾಗತಿಸಿ, ಪಾರಿಂಪರಿಕ ವೈದ್ಯ ಪರಿಷತ್‌ ಬೆಳೆದು ಬಂದ ಬಗೆ ಕುರಿತು ಮಾಹಿತಿ ನೀಡಿದರು. ಸುದೀರ್ಘ‌ ಕಾಲ ಪಾರಂಪರಿಕ ವೈದ್ಯ ಪದ್ಧತಿಯಿಂದ ಜನಸೇವೆಗೈದ ಗದಗ ಜಿಲ್ಲೆ ಬಸವರಾಜಪ್ಪ ಎಂ ಕೊಂಚಿಗೇರಿ, ಹಾಸನದ ಸತ್ಯನಾರಾಯಣ ಶೆಟ್ಟಿ ಹಾಗೂ ಶಿವಮೊಗ್ಗ ಜಿಲ್ಲೆ ಗೌತಮಪುರದ ಕೆ.ಟಿ.ದೇವಪ್ಪ ಇವರಿಗೆ ಪಾರಂಪರಿಕ ವೈದ್ಯರತ್ನ ಪ್ರಶಸ್ತಿ ಪ್ರದಾನ ಮಾಡಿ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಇಡೀ ಜಗತ್ತೇ ತಿರುಗಿ ನೋಡಂಗೆ ಮಾಡ್ತೀವಿ ಶ್ರೀಮಂತ ಆರೋಗ್ಯ ಪರಂಪರೆ ಬೆಳೆಸಲು ಪಾರಂಪರಿಕ ವೈದ್ಯಪದ್ಧತಿ ಸಹಕಾರಿ. ಆಲೋಪಥಿ ವೈದ್ಯ ಪದ್ಧತಿಯಿಂದ ಶೀಘ್ರ ಗುಣಪಡಿಸಲಾಗದ ಎಷ್ಟೋ ಆರೋಗ್ಯ ಸಮಸ್ಯೆಗಳನ್ನು ಪಾರಂಪರಿಕ ವೈದ್ಯ ಪದ್ಧತಿಯಿಂದ ಗುಣಪಡಿಸಲಾಗಿದೆ. ದಾವಣಗೆರೆ ಸಮೀಪದಲ್ಲೇ ಸರ್ಕಾರ ಪಾರಂಪರಿಕ ವೈದ್ಯ ಪರಿಷತ್‌ಗೆ 10 ಎಕರೆ ಜಾಗ ಕೊಟ್ಟಲ್ಲಿ ಇಡೀ ಜಗತ್ತೇ ಈ ನಗರದತ್ತ ತಿರುಗಿ ನೋಡುವಂತೆ ಪಾರಂಪರಿಕ ವೈದ್ಯಪದ್ಧತಿ ಅಭಿವೃದ್ಧಿ ಪಡಿಸುತ್ತೇವೆ. 

ಗಿಡಮೂಲಿಕೆ-ಔಷಧೀಯ ಸಸ್ಯ ಬೆಳೆಸಲು ಸರ್ಕಾರ ಜಾಗ ಮಂಜೂರು ಮಾಡಬೇಕಿದೆ. ಈ ಪ್ರದೇಶದಲ್ಲಿ ಪಾರಂಪರಿಕ ವೈದ್ಯಪದ್ಧತಿ ಇನ್ನಷ್ಟು ಬೆಳೆದರೆ ಬಡಜನರಿಗೂ ಅನುಕೂಲವಾಗಲಿದೆ.  ನೇರ್ಲಿಗೆ ಗುರುಸಿದ್ದಪ್ಪ, ಪಾರಂಪರಿಕ ವೈದ್ಯ ಪರಿಷತ್‌ ರಾಜ್ಯಾಧ್ಯಕ್ಷ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.