ರಸ್ತೆಗಳ ದುರಸ್ತಿಗೆ ಡಿಸಿ ಆದೇಶ


Team Udayavani, Oct 27, 2018, 3:49 PM IST

dvg-2.jpg

ದಾವಣಗೆರೆ: ಸುಗಮ ಸಂಚಾರಕ್ಕಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ದುರಸ್ತಿಗೊಳಿಸಲು ಕ್ರಮ ವಹಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಸೂಚಿಸಿದ್ದಾರೆ.

ಶುಕ್ರವಾರ, ತಮ್ಮ ಕಚೇರಿಯಲ್ಲಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದಾವಣಗೆರೆಯಲ್ಲಿ ಸಾಕಷ್ಟು ರಸ್ತೆಗಳು ಹದಗೆಟ್ಟಿರುವುದರಿಂದ ಸಾರ್ವಜನಿಕರು, ವಾಹನ ಸವಾರರು, ಪಾದಚಾರಿಗಳಿಗೆ ತೀವ್ರ ತೊಂದರೆ ಆಗುತ್ತಿದೆ. ಕೂಡಲೇ ಈ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದರು. 

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಕುಮಾರ್‌ ಮಾತನಾಡಿ, ನಗರದಲ್ಲಿ ಶೇ. 40ರಷ್ಟು ಬೀದಿ ದೀಪಗಳು ಸರಿಯಿಲ್ಲ. ಇದರಿಂದ ಅಪಘಾತದ ಸಂಖ್ಯೆ ಹೆಚ್ಚಾಗುತ್ತಿವೆ. ಪಾಲಿಕೆಯು ರಸ್ತೆ ಅಭಿವೃದ್ಧಿ ಜೊತೆಗೆ ಸಿಗ್ನಲ್‌ಗಳಲ್ಲಿ ಪೇಂಟ್‌ ಮಾಡಿಸಬೇಕು ಎಂದರು.

ಆಗ ಪಾಲಿಕೆ ಅಧಿಕಾರಿ, ವಿದ್ಯುತ್‌ ದೀಪಗಳಿಗೆ ಸಂಬಂಧಿಸಿದಂತೆ ಕಂಟ್ರಾಕ್ಟರ್‌ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂದು ಉತ್ತರಿಸಿದರು. ಆಗ ಜಿಲ್ಲಾಧಿಕಾರಿ, ಅವರಿಗೆ ದಂಡಹಾಕಿ ಇಲ್ಲವೇ ಅವರನ್ನು ಬ್ಲಾಕ್‌ ಲೀಸ್ಟ್‌ಗೆ ಸೇರಿಸಿ ಎಂದು ಸೂಚಿಸಿದರಲ್ಲದೆ, ನವೆಂಬರ್‌ನಲ್ಲಿ ಅಧಿಕಾರಿಗಳೊಂದಿಗೆ ಸರ್ವೆ ಮಾಡಲಿದ್ದು ಅಷ್ಟರೊಳಗೆ ಎಲ್ಲಾ ಕೆಲಸ ಕಾರ್ಯಗಳು ಮುಗಿದಿರಬೇಕು ಎಂದು ಖಡಕ್‌ ಆಗಿ ಆದೇಶಿಸಿದರು.

ನಗರದ ಕೆಲವು ಕಡೆ ಬೆಸ್ಕಾಂನಿಂದ ಭೂಗತ ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿದ್ದು, ಕಂಟ್ರಾಕ್ಟರ್‌ಗೆ ನೀಡಿದ ಬಳಿಕ ನಿಮ್ಮ ಕೆಲಸ ಮುಗಿಯುವುದಿಲ್ಲ. ಈ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವುದಕ್ಕೆ ಮುಂದಾಗಬೇಕು ಎಂದು ಬೆಸ್ಕಾಂ ಅಧಿಕಾರಿಗೆ ಜಿಲ್ಲಾಧಿಕಾರಿ ತಿಳಿಸಿದರು.
 
ತ್ರಿಚಕ್ರ ಮತ್ತು ನಾಲ್ಕು ಚಕ್ರ ವಾಹನ ಮಾಲೀಕರ ಸಂಘದ ಫಳನೀಸ್ವಾಮಿ ಮಾತನಾಡಿ, ನಗರದಲ್ಲಿ ಎಲ್ಲಿಯೂ ಗೂಡ್ಸ್‌ ವಾಹನ ನಿಲುಗಡೆಗೆ ಜಾಗವಿಲ್ಲ. ಈಗ ಕೆ.ಆರ್‌ ಮಾರುಕಟ್ಟೆ ಬಳಿ ವಾಹನ ನಿಲ್ಲಿಸಿಕೊಳ್ಳುತ್ತಿದ್ದು, ಅದರ ಬದಲಾಗಿ ಕೆಎಸ್‌ಆರ್‌ಟಿಸಿ, ಹಳೇ ಬಸ್‌ ನಿಲ್ದಾಣ ಹೀಗೆ ಐದು ಕಡೆ ನಿಲ್ದಾಣಕ್ಕೆ ಜಾಗಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಮನವಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚೇತನ್‌, ಕನಿಷ್ಠ ಐದರಿಂದ ಹತ್ತು ಗಾಡಿ ನಿಲ್ಲುವುದಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗ್ರಾಮಾಂತರ ಡಿವೈಎಸ್‌ಪಿ ಮಂಜುನಾಥ್‌ ಗಂಗಲ್‌ ಮಾತನಾಡಿ, ಚನ್ನಗಿರಿ ಅಜ್ಜಿಹಳ್ಳಿ ಸರ್ಕಲ್‌, ಹೊನ್ನಾಳಿ ಐಬಿ ಸರ್ಕಲ್‌, ಹರಿಹರ ಎಂ.ಜಿ ವೃತ್ತ, ಬೋಂಗಾಳಿ ವೃತ್ತಗಳಲ್ಲಿ ಸಿಗ್ನಲ್‌ ವ್ಯವಸ್ಥೆ ಬಗ್ಗೆ ಸಭೆ ಗಮನ ಸೆಳೆದರು. ನಗರ ಸಾರಿಗೆ ಬಸ್‌ಗಳಿಗೆ ಪ್ರತ್ಯೇಕ ಬಸ್‌ ನಿಲ್ದಾಣದ ಬಗ್ಗೆ ಪ್ರಸ್ತಾಪಕ್ಕೆ ಎಸ್ಪಿ ಚೇತನ್‌ ಪ್ರತಿಕ್ರಿಯಿಸಿ, 54 ನಗರ ಸಾರಿಗೆ ಬಸ್‌ಗಳು ಸಂಚರಿಸುತ್ತಿದ್ದು, ಸುರಕ್ಷತಾ ಕ್ರಮದಿಂದ ಎಲ್ಲಾ ಬಸ್‌ಗಳು ಡೋರ್‌ಗಳನ್ನು ಕ್ಲೋಸ್‌ ಮಾಡಿಕೊಂಡು ಸಂಚರಿಸಬೇಕು ಎಂದು ತಿಳಿಸಿದರು.

ಅಶೋಕ ಚಿತ್ರಮಂದಿರ, ಅರುಣ ಚಿತ್ರಮಂದಿರ ಎದುರಿನ ರೈಲ್ವೇ ಗೇಟ್‌ ಹತ್ತಿರ ಮೇಲ್ಸೇತುವೆ ಕುರಿತು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಇದೇ ವೇಳೆ ಒತ್ತಾಯಿಸಿದರು. ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀನಿವಾಸಯ್ಯ, ಪಾಲಿಕೆ ಉಪ ಆಯುಕ್ತ ರವೀಂದ್ರ ಮಲ್ಲಾಪುರ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.