ಬ್ರಿಟಿಷರಿಗೆ ಸವಾಲಾದ ಪ್ರಥಮ ದೊರೆ
Team Udayavani, Nov 11, 2018, 5:38 PM IST
ಹರಿಹರ: ಸತತ ಮೂರು ಯುದ್ಧಗಳನ್ನು ಗೆಲ್ಲುವ ಮೂಲಕ ಬ್ರಿಟಿಷರಿಗೆ ಸವಾಲಾದ ಮೊದಲ ಭಾರತೀಯ ದೊರೆ ಟಿಪ್ಪು ಸುಲ್ತಾನ್ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು. ನಗರದ ಗುರುಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಉದ್ಘಾಟಿಸಿ, ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಹದಿಮೂರು ವರ್ಷದ ಬಾಲಕನಾಗಿದ್ದಾಗಲೇ ತಂದೆಯೊಂದಿಗೆ ಹೋರಾಡಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ. ಆದರೆ ನಾಲ್ಕನೆ ಯುದ್ದದಲ್ಲಿ ಮೋಸದಿಂದ ಅವನನ್ನು ಮಣಿಸಲಾಯಿತು ಎಂದರು.
ಟಿಪ್ಪು ಜಯಂತಿಯನ್ನು ನಾಲ್ಕು ಗೋಡೆಗಳ ಮಧ್ಯೆ, ಪೊಲೀಸ್ ಬಂದೋಬಸ್ತ್ನಲ್ಲಿ ಆಚರಿಸುತ್ತಿರುವುದು ನೋವಿನ ಸಂಗತಿ. ಟಿಪ್ಪು ಕರೆ-ಕಟ್ಟೆ ನಿರ್ಮಿಸಿ, ನಾಡಿನ ಅಭಿವೃದ್ಧಿಗೆ ಶ್ರಮವಹಿಸಿದ್ದನ್ನೆಲ್ಲಾ ಬದಿಗಿಟ್ಟು ಇಲ್ಲಸಲ್ಲದ ಆರೋಪ ಮಾಡಿ ಕೋಮುವಾದಿಗಳು ಜನರನ್ನು ವಿಭಜಿಸುತ್ತಿರುವುದು ದುರದೃಷ್ಟಕರ ಎಂದರು.
ಹಂಪಿ ಕನ್ನಡ ವಿವಿಯ ಡಾ|ಅರುಣ್ ಉಪನ್ಯಾಸ ನೀಡಿದರು. ತಾಪಂ ಉಪಾಧ್ಯಕ್ಷೆ ಜಯಮ್ಮ ಬಸವನಗೌಡ, ತಹಶೀಲ್ದಾರ್ ಆರ್. ವೆಂಕಟಮ್ಮ, ನಗರಸಭೆ ಸದಸ್ಯರಾದ ಬಿ.ಕೆ. ಸೈಯದ್ ರೆಹಮಾನ್, ಎಜಾಜ್ ಅಹ್ಮದ್, ಕೆ.ಮರಿದೇವ, ವಸಂತ ಕುಮಾರ್, ಎಲ್.ಬಿ. ಹನುಮಂತಪ್ಪ, ಎಂ.ಎಸ್.ಬಾಬುಲಾಲ್, ಸನಾವುಲ್ಲಾ, ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಇಒ ಕೆ.ನೀಲಗಿರಿಯಪ್ಪ, ಬಿಇಒ ಡಿ.ನರಸಿಂಹಪ್ಪ, ಸಿಪಿಐ ಐ.ಎಸ್. ಗುರುನಾಥ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್