ಕೇರಳದ ಲೇಬರ್‌ ಪಬ್ಲಿಕ್‌ ಶಾಲೆಗೆ ಸಮಗ್ರ ಪ್ರಶಸ್ತಿ ಗರಿ


Team Udayavani, Nov 17, 2018, 5:13 PM IST

dvg-2.jpg

ದಾವಣಗೆರೆ: ತೋಳಹುಣಸೆ (ದಾವಣಗೆರೆ ತಾಲೂಕು) ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಆಂಗ್ಲ ಮಾಧ್ಯಮ ವಸತಿಯುತ ಶಾಲಾ ಮೈದಾನದಲ್ಲಿ ಶುಕ್ರವಾರ ಮುಕ್ತಾಯ ಗೊಂಡ 23ನೇ ರಾಷ್ಟ್ರ ಮಟ್ಟದ ಸಿಬಿಎಸ್‌ಇ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಕೇರಳದ ಮುರುಗನಾಥಪಲ್ಲಿಯ ಲೇಬರ್‌ ಪಬ್ಲಿಕ್‌ ಶಾಲೆ ಒಟ್ಟಾರೆ 51 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಗಳಿಸಿದೆ. 

ಮೈಸೂರಿನ ಜೆ.ಎಸ್‌.ಎಸ್‌. ಪಬ್ಲಿಕ್‌ ಶಾಲೆಯ ಎಚ್‌.ಎಸ್‌. ಹರ್ಷಿತಾ 14 ವರ್ಷದೊಳಗಿನ ಬಾಲಕಿಯರ 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 100 ಮೀಟರ್‌ ವಿಭಾಗದಲ್ಲಿ ಹರ್ಷಿತಾ ತೃತೀಯ ಸ್ಥಾನ ಪಡೆದರು.
 
19 ವರ್ಷದ ಬಾಲಕಿಯರ ವಿಭಾಗದ ಶಾಟ್‌ ಪುಟ್‌ನಲ್ಲಿ ಜೆಮ್‌ಷೆಡ್‌ಪುರದ ಪಬ್ಲಿಕ್‌ ಶಾಲೆಯ ವಿ .ರಾವಲ್‌, 14 ವರ್ಷದ ಬಾಲಕರ ವಿಭಾಗ ಶಾಟ್‌ಪುಟ್‌ನಲ್ಲಿ ಸೋನಾಪತ್‌ನ ಪ್ರತಾಪ್‌ ಮೆಮೋರಿಯಲ್‌ ಶಾಲೆಯ ನಿಖೀಲೇಶ್‌, 17 ವರ್ಷದ ಬಾಲಕರ ವಿಭಾಗದಲ್ಲಿ ಯಮುನಾ ನಗರದ ಡಿ.ಎ.ವಿ. ಸಧುರಾ ಯಮುನಾ ನಗರ ಶಾಲೆಯ ಅರ್ಜುನ್‌ ಪ್ರಥಮ ಸ್ಥಾನ ಪಡೆದಿದ್ದಾರೆ.

19 ವರ್ಷದ ಬಾಲಕರ ವಿಭಾಗದ ಡಿಸ್ಕಸ್‌ ಥ್ರೋನಲ್ಲಿ ಶ್ರೀ ಗುರುಹರಿಕೃಷ್ಣನ್‌ ಪಬ್ಲಿಕ್‌ ಶಾಲೆಯ ಜೇಸ್‌ಕರಣ್‌ ಸುರತ್‌ಸಿಂಗ್‌ ಅತ್ಯುತ್ತಮ ಆಟಗಾರ ಪ್ರಶಸ್ತಿ ಪಡೆದರು. 14 ವರ್ಷದ ಬಾಲಕಿಯರ ವಿಭಾಗದಲ್ಲಿ ಚೈನ್ನೈನ ಪಿಎಸ್‌ಬಿಬಿ ಸೀನಿಯರ್‌ ಸೆಕೆಂಡರಿ ಸ್ಕೂಲ್‌ 24 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದಿದೆ. 17 ವರ್ಷದ ಬಾಲಕಿಯರ ವಿಭಾಗದಲ್ಲಿ ಕೇರಳದ ಭವಾನಸ್‌ ವಿದ್ಯಾಮಂದಿರ್‌(20 ಅಂಕ), 19 ವರ್ಷದ ಬಾಲಕಿಯರ ವಿಭಾಗದಲ್ಲಿ ರಾಜಸ್ಥಾನದ ಭಿವಾಂಡಿಯ ಮಾರ್ಡನ್‌ ಪಬ್ಲಿಕ್‌ ಶಾಲೆ (38 ಅಂಕ), 14 ವರ್ಷದ ಬಾಲಕರ ವಿಭಾಗದಲ್ಲಿ ಜಾರ್ಖಂಡ್‌ನ‌ ರಾಂಚಿಯ ಡಿ.ಎ.ವಿ. ನಂದರಾಜ ಪಬ್ಲಿಕ್‌ ಶಾಲೆ (21 ಅಂಕ), 17 ವರ್ಷದ ಬಾಲಕರ ವಿಭಾಗದಲ್ಲಿ ಉತ್ತರಖಾಂಡ್‌ನ‌ ಮೇರಿಪಿರಿ ಖಾಲ್ಸಾ ಎಸಿಎ ಸ್ಕೂಲ್‌ (16 ಅಂಕ), 19 ವರ್ಷದ ಬಾಲಕರ
ವಿಭಾಗದಲ್ಲಿ ಕೇರಳದ ಮುರುಗನಾಥಪಲ್ಲಿಯ ಲೇಬರ್‌ ಪಬ್ಲಿಕ್‌ ಶಾಲೆ (20 ಅಂಕ), 19 ವರ್ಷದ ಬಾಲಕಿಯರ ವಿಭಾಗದಲ್ಲಿ
ಪಂಜಾಬ್‌ನ ಖೈಲಾದ ಬಾಬಾಸಿಂಗ್‌ ಸ್ಕೂಲ್‌ 20 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದಿವೆ. 

ಸಮಾರೋಪದಲ್ಲಿ ಮಾತನಾಡಿದ ಶಾಲೆಯ ನಿರ್ದೇಶಕ ಕೆ. ಇಮಾಂ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಿ ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಕೈಗಾರಿಕೋದ್ಯಮಿ ಅಭಿಜಿತ್‌ ಗಣೇಶ್‌. ಸ್ವಾತಿ ಅಭಿಜಿತ್‌, ಕ್ರೀಡಾಕೂಟದ ವೀಕ್ಷಕ ಸಂಜಯ್‌ ಚೌವ್ಹಾಣ್‌, ಅಂತಾರಾಷ್ಟ್ರೀಯ ವೀಕ್ಷಕರಾದ ವಿಶ್ವನಾಥ್‌, ರುದ್ರಪ್ಪ ಇತರರು ಇದ್ದರು. ಮಂಜುನಾಥ ರಂಗರಾಜು ಸ್ವಾಗತಿಸಿದರು. ಶಾಲೆಯ ಪ್ರಾಚಾರ್ಯೆ ಜೆ. ಎಸ್‌. ವನಿತಾ ವಂದಿಸಿದರು. 

ಸಿಬಿಎಸ್‌ಇ ಶಾಲೆಗಳ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟ ಕರ್ನಾಟಕದಲ್ಲಿ ಮೊದಲ ಬಾರಿಗೆ, ದಕ್ಷಿಣ ಭಾರತದಲ್ಲಿ ಎರಡನೇ ಬಾರಿಗೆ ನಡೆದಿದೆ. ಕ್ರೀಡಾಕೂಟದಲ್ಲಿ ಭಾರತ ಸೇರಿದಂತೆ ಸಿ.ಬಿ.ಎಸ್‌.ಇ ಒಳಪಡುವ 7 ದೇಶಗಳ 4 ಸಾವಿರ ಕ್ರೀಡಾಪಟುಗಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.