ಮುಖ್ಯಮಂತ್ರಿಗೆ ಮನವಿಗಳ ಮಹಾಪೂರ-ಪರಿಹರಿಸುವ ಭರವಸೆ


Team Udayavani, Nov 18, 2018, 5:31 PM IST

dvg-1.jpg

ದಾವಣಗೆರೆ: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಎಸ್‌.ಎಸ್‌. ಕನ್ವೆನ್‌ಷನ್‌ ಹಾಲ್‌ನಲ್ಲಿ ಆಯೋಜಿರುವ 29ನೇ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯ ಮಟ್ಟದ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿಗಳ ಮಹಾಪೂರವೇ ಹರಿದು ಬಂದಿತು.

ಶನಿವಾರ ಬೆಳಗ್ಗೆ 10ಕ್ಕೆ ಬೆಂಗಳೂರಿನ ಎಚ್‌ .ಎ.ಎಲ್‌. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ನಲ್ಲಿ ಹೊರಟು 11ಕ್ಕೆ ದಾವಣಗೆರೆಯ ಸರ್ಕಾರಿ ಐಟಿಐ ಹೆಲಿಪ್ಯಾಡ್‌ಗೆ ಆಗಮಿಸುವರು ಎಂಬ ಸುದ್ದಿ ತಿಳಿದ ನೂರಾರು ಜನರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿಕ್ಕಾಗಿ ಬಂದಿದ್ದರು.

11 ಗಂಟೆಯ ವೇಳೆಗೆ ಬರಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಎರಡೂವರೆ ಗಂಟೆಯಷ್ಟು ಕಾಲ ತಡವಾಗಿ ಬಂದರೂ ಸಾರ್ವಜನಿಕರು, ವಿಕಲ ಚೇತನರು, ರೈತ ಸಂಘ, ದಲಿತ ಸಂಘರ್ಷ ಸಮಿತಿ, ಅತಿಥಿ ಉಪನ್ಯಾಸಕರು, ವಿವಿಧ ಕಾರ್ಮಿಕ ಸಂಘಟನೆಗಳವರು, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಕಾದಿದ್ದೂ ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು. ಹೆಲಿಪ್ಯಾಡ್‌ನಿಂದು ಇಳಿದು ಗೌರವ ರಕ್ಷೆ ಸ್ವೀಕರಿಸಿ, ಮುಖಂಡರೊಂದಿಗೆ ಕುಶಲೋಪರಿ ಮಾತುಕತೆಯ ನಂತರ ನೇರವಾಗಿ ಮನವಿ ಸ್ವೀಕರಿಸಲು ತೆರಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ನಾಮಕಾವಸ್ಥೆಗೆ ಮನವಿ ಸ್ವೀಕರಿಸದೇ ಸಮಾಧಾನದಿಂದ ಪ್ರತಿಯೊಬ್ಬರ ಆಹವಾಲು, ಸಮಸ್ಯೆ ಆಲಿಸಿದರು. ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಕೆಲವೊಂದಕ್ಕೆ ಷರಾ ಬರೆದು, ಸಂಬಂಧಿತ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಕ್ರಮದ ಬಗ್ಗೆ ಸೂಚನೆ ನೀಡಿದರು.

ದಾವಣಗೆರೆ ತಾಲೂಕಿನ ಎಲೇಬೇತೂರಿನಿಂದ ತಮ್ಮ ಚಿಕ್ಕಮ್ಮನೊಂದಿಗೆ ಬಂದಿದ್ದ ಇಬ್ಬರು ಅಂಧ ಸಹೋದರರಿಯರಾದ ಎಂ.ಎಸ್‌. ಸೌಮ್ಯ ಮತ್ತು ಎಂ.ಎಸ್‌. ನಾಗರತ್ನ ಅವರು, ಮೂವರು ಅಕ್ಕ-ತಂಗಿಯರು ಹುಟ್ಟು ಕುರುಡರು. ಅಂಧತ್ವದ ನಡುವೆಯೂ ಬಿಎ, ಬಿಬಿಎ ಪೂರೈಸಿದ್ದೇವೆ. ಸರ್ಕಾರಿ ಕೆಲಸ ಕೊಡಿಸುವ ಮೂಲಕ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂಬ ಮನವಿಗೆ ಕುಮಾರಸ್ವಾಮಿ ಸಕರಾತ್ಮಕವಾಗಿ ಸ್ಪಂದಿಸಿದರು.

ನಾಪತ್ತೆಯಾಗಿರುವ ಪತಿ ಹುಡುಕಿಕೊಡುವಂತೆ ಮಹಿಳೆಯೊಬ್ಬರು ಕಣೀರು ಹಾಕುತ್ತಾ ಮನವಿ ಮಾಡಿಕೊಂಡರು. ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚಿಸಿದರು. ಕೆಲಸ ಖಾಯಂಗೆ ಒತ್ತಾಯಿಸಿ ಗುತ್ತಿಗೆ ಆಧಾರಿತ ಮಹಿಳಾ ಪೌರ ಕಾರ್ಮಿಕರು ಕಣೀರು ಹಾಕಿದರು. ಸಂಬಂಧಿತರೊಡನೆ ಚರ್ಚೆ ನಡೆಸಿ, ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ರೈತರ ಸಾಲ ಮನ್ನಾದಂತೆ ಕೊಳವೆ ಬಾವಿ ಸಾಲ ಮನ್ನಾ ಮಾಡಬೇಕು ಎಂದು ಕೆಲ ರೈತರಿಂದ ಒತ್ತಾಯ ಕೇಳಿ ಬಂದಾಗ, ಆಯ್ತಣ್ಣ ನೋಡೊಣ… ಎಂದು ನಸು ನಗುತ್ತಾ ಮುನ್ನಡೆದರು. 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಡಾ| ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಹಳೇಚಿಕ್ಕನಹಳ್ಳಿ ಎರಗುಂಟೆ ಗ್ರಾಮದ ದಲಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ (ಪ್ರೊ| ಬಿ.ಕೃಷ್ಣಪ್ಪ) ಜಿಲ್ಲಾ ಸಮಿತಿ ಕಾರ್ಯಕರ್ತರು, ಹಾಸ್ಟೆಲ್‌ ಹೊರಸಂಪನ್ಮೂಲ ನೌಕರರಿಗೆ ನಿವೃತ್ತಿವರೆಗೆ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಕೇರಳ ಮಾದರಿಯಲ್ಲಿ ಮೆಕ್ಕೆಜೋಳ, ಭತ್ತಮ ಹತ್ತಿ, ಸೂರ್ಯಕಾಂತಿಗೆ ಬೋನಸ್‌ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದ ಕಾರ್ಯಕರ್ತರು, ಬೆಂಬಲ ಬೆಲೆಯ ಖರೀದಿ ಕೆಂದ್ರ, ರೈತರ ರಾಷ್ಟ್ರೀಕೃತ ಬ್ಯಾಂಕಿನ ಸಾಲಮನ್ನಾ, ದಲ್ಲಾಲರಿಂದ ವಂಚನೆಗೊಳಗಾದ ರೈತರಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು. 

ಬಾಪೂಜಿ ಆಸ್ಪತ್ರೆ ಮುಂಭಾಗದ ಸಿ.ಜೆ. ಆಸ್ಪತ್ರೆ ಕಾಂಪೌಂಡ್‌ಗೆ ಪುಟ್‌ಪಾತ್‌ಗಳಲ್ಲಿ ವ್ಯಾಪಾರ ಮಾಡಿಕೊಳ್ಳಲು ಮಳಿಗೆ ಕಟ್ಟಿಸಿಕೊಟ್ಟು ಶಾಶ್ವತ ಪರಿಹಾರ ದೊರಕಿಸಿಕೊಡುವಂತೆ ಒತ್ತಾಯಿಸಿ ಜಿಲ್ಲಾ ಫುಟ್‌ಪಾತ್‌ ವ್ಯಾಪಾರಿಗಳ ಸಂಘ, ನಿರ್ಗತಿಕ ಬಡ ಅಂಗವಿಕಲರಿಗೆ ಆಶ್ರಯ ಮನೆ ಕಲ್ಪಿಸಿಕೊಡುವಂತೆ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ, ಯುಬಿಡಿಟಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಒಂದು ವರ್ಷ ಗುತ್ತಿಗೆ ಆಧಾರದ ಮೇಲೆ ನಿಯೋಜಿಸಬೇಕು ಹಾಗೂ ಪ್ರತೀ ವರ್ಷ ಅರ್ಜಿ ಕರೆದು ಸಂದರ್ಶನ ಮಾಡದೇ, ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯಾನಿರ್ವಹಿಸಿದವರನ್ನೇ ಮುಂದುವರೆಸಿ ನಿಯೋಜಿಸುವಂತೆ ಯುಬಿಡಿಟಿ ಇಂಜಿನಿಯರಿಂಗ್‌ ಕಾಲೇಜು ಅತಿಥಿ ಉಪನ್ಯಾಸಕರು ಸಿಎಂಗೆ ಮನವಿ ಸಲ್ಲಿಸಿದರು.

ದಾವಣಗೆರೆಯಲ್ಲಿ ಕೈಗಾರಿಕೆಗಳನ್ನು ಹಾಕಬೇಕೆಂದು ಒತ್ತಾಯಿಸಿ ಆಲ್‌ ಇಂಡಿಯಾ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ ಜಿಲ್ಲಾ ಸಮಿತಿ, ಅಕ್ಷರ ದಾಸೋಹ ಬಿಸಿಯೂಟ ತಯಾರಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ರಾಜ್ಯ ಸಮಿತಿ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಹಾಗೂ ವೀರಶೈವ ಜಂಗಮರಿಗೆ ಬೇಡ ಜಂಗಮ ಎಂದು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಯುವಂತೆ ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಜಿಲ್ಲಾ ಸಮಿತಿ ಕಾರ್ಯಕರ್ತರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್‌ ಗೆ ಒಳಗಾಗಿರುವ ರೋಗಿಗಳಿಗೆ ಮಸಾಶನ ನೀಡುವಂತೆ ತುಮಕೂರು ಶ್ರೀ ಸಿದ್ಧಗಂಗಾಮಠದ ಅಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮಿ, ಉಪನ್ಯಾಸಕ ಹಾಗೂ ಪ್ರಾಂಶುಪಾಲರ ವೇತನಕ್ಕೆ ಸಂಬಂಧಿಸಿದಂತೆ ಕುಮಾರ್‌ ನಾಯಕ್‌ ವರದಿ ಶಿಫಾರಸು ಯಥಾವತ್ತಾಗಿ ಜಾರಿ ಮತ್ತು ಉಪನ್ಯಾಸಕರ ಹಾಗೂ ಪ್ರಾಂಶುಪಾಲರ ಕಾಲ್ಪನಿಕ ವೇತನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.