ಭ್ರಷ್ಟಾಚಾರ ಕಂಡರೆ ಶಿಸ್ತು ಕ್ರಮ
Team Udayavani, Nov 18, 2018, 5:38 PM IST
ಹೊನ್ನಾಳಿ: ಮನೆ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದರೆ ಸೂಕ್ತ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಪಿಡಿಒಗಳು ಹಾಗೂ ಕಾರ್ಯದರ್ಶಿಗಳಿಗೆ ಎಚ್ಚರಿಕೆ ನೀಡಿದರು.
ಪಟ್ಟಣದ ಸಾಮರ್ಥ್ಯಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆಗಳನ್ನು ಹಂಚುವ ವೇಳೆ ಕೆಲ ಪಿಡಿಒ ಹಾಗೂ ಕಾರ್ಯದರ್ಶಿಗಳು ಹಣ ಕೇಳುತ್ತಾರೆ ಎಂಬ ದೂರುಗಳು ಕೇಳಿಬಂದಿದ್ದು, ಇಂತಹ ದೂರುಗಳು ಮತ್ತೂಮ್ಮೆ ಬಂದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪಿಡಿಒ ಹಾಗೂ ಕಾರ್ಯದರ್ಶಿಗಳ ಮೊಬೈಲ್ ಗಳು ಚಾಲನೆಯಲ್ಲಿರಬೇಕು. ಗ್ರಾಮೀಣ ಪ್ರದೇಶದ ಜನತೆ ತಮ್ಮ ಕೆಲಸ ಕಾರ್ಯಗಳಿಗೆ ದೂರವಾಣಿ ಮಾಡಿದಾಗ ಸ್ವಿಚ್ಆಫ್ ಮಾಡಿರುವ ಪ್ರಸಂಗಗಳು ಕೇಳಿ ಬರುತ್ತಿವೆ. ಇದಾಗಬಾರದು ಎಂದರು.
ಗ್ರಾ.ಪಂಗಳಲ್ಲಿ ಈ ಸ್ವತ್ತು ನೋಂದಣಿಯನ್ನು ಶೀಘ್ರ ಮಾಡಿಕೊಡಬೇಕು. ಯಾರನ್ನೂ ಕಚೇರಿಗೆ ಅಲೆದಾಡುವಂತೆ ಮಾಡಬಾರದು ಎಂದ ಅವರು, ಒಂದು ವೇಳೆ ಸರ್ವೇಯರ್ಗಳು ಈ ಸ್ವತ್ತು ಮಾಡಿಕೊಡುವಲ್ಲಿ ವಿಳಂಬ ಮಾಡಿದರೆ ಇಓ ಅವರಿಗೆ ತಿಳಿಸಿ. ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ಸೂಚಿಸಿದರು.
ತಾಲೂಕಿನಾಧ್ಯಂತ ಮರಳಿನ ಸಮಸ್ಯೆಯಿಂದ 5300 ಆಶ್ರಯ ಮನೆಗಳ ನಿರ್ಮಾಣ ಸ್ಥಗಿತಗೊಂಡಿವೆ. ಪಿಡಿಒಗಳು ಅಂತಹ ಮನೆಗಳನ್ನು ಗುರ್ತಿಸಿ ಆ ಮನೆಗಳ ನಿರ್ಮಾಣಕ್ಕೆ ಮರಳನ್ನು ಕೊಡಿಸುವುದಕ್ಕೆ ಪತ್ರ ನೀಡಬೇಕು ಎಂದು ಸೂಚಿಸಿದರು. ಬೇಸಿಗೆ ಆರಂಭವಾಗುತ್ತಿರುವುದರಿಂದ ಕುಡಿಯುವ ನೀರು-ಜಾನುವಾರುಗಳಿಗೆ ಮೇವಿನ ಸಮಸ್ಯೆ ಬಾರದಂತೆ ನೊಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಎಲ್ಲಿದೆಯೋ ಅಂತಹ ಕಡೆ ಬೋರ್ ಕೊರೆಸುವುದಕ್ಕೆ ಈಗಲೇ ಕ್ರಿಯಾಯೋಜನೆ ತಯಾರಿಸಿ ಎಂದರು.
ತಾಪಂ ಇಒ ಕೆ.ಸಿ. ಮಲ್ಲಿಕಾರ್ಜುನ್ ಮಾತನಾಡಿ, ನರೇಗಾ ಯೋಜನೆಯ 422 ಕಾಮಗಾರಿಗಳಲ್ಲಿ ಬಹುತೇಕ ಮುಕ್ತಾಯ ಹಂತದಲ್ಲಿವೆ. ಈಗ ಜಿಲ್ಲೆಯಲ್ಲಿ ಜಗಳೂರು ಬಿಟ್ಟರೆ ಹೊನ್ನಾಳಿ ಎರಡನೇ ಸ್ಥಾನದಲ್ಲಿದ್ದು, ಬರುವ ದಿನಗಳಲ್ಲಿ ಹೊನ್ನಾಳಿ ತಾಲೂಕು ಪ್ರಥಮ ಸ್ಥಾನಕ್ಕೆ ಬರುವಂತೆ ಪಿಡಿಒಗಳು
ಕ್ರಿಯಾಶೀಲರಾಗಬೇಕು ಎಂದರು.
ಇದಕ್ಕೂ ಮೊದಲು ಜಿ.ಪಂ, ತಾ.ಪಂ. ಸದಸ್ಯರು ಪಿಡಿಒಗಳ ಮೇಲೆ ಆರೋಪಗಳ ಸುರಿಮಳೆಯನ್ನೇ ಮಾಡಿದರು. ತಾ.ಪಂ ಅಧ್ಯಕ್ಷೆ ಸುಲೋಚನಮ್ಮ, ಉಪಾಧ್ಯಕ್ಷ ಎಸ್ .ಪಿ. ರವಿಕುಮಾರ್, ಸಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಂಗನಾಥ್, ಜಿ.ಪಂ ಸದಸ್ಯರಾದ ಉಮಾರಮೇಶ್, ವೀರಶೇಖರಪ್ಪ, ಸುರೇಂದ್ರನಾಯ್ಕ, ತಾ.ಪಂ ಸದಸ್ಯರಾದ ಸಿ.ಆರ್.ಶಿವಾನಂದ್, ಸಿದ್ದಲಿಂಗಪ್ಪ, ತಿಪ್ಪೇಶ್, ರೇಖಾ ಉಮೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್