ನ್ಯಾಮತಿ ಬಂದ್‌ ಸಂಪೂರ್ಣ ಯಶಸ್ವಿ


Team Udayavani, Dec 2, 2018, 3:58 PM IST

dvg-4.jpg

ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡುವುದು, ಭತ್ತ- ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ, ರೈತರ ಸಂಪೂರ್ಣ ಸಾಲಮನ್ನಾ, ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮರಳು ವಿತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶಾಸಕ ರೇಣುಕಾಚಾರ್ಯ ನೇತೃತ್ವದಲ್ಲಿ ಶನಿವಾರ ನಡೆದ ನ್ಯಾಮತಿ ತಾಲೂಕು ಬಂದ್‌ ಸಂಪೂರ್ಣ ಯಶಸ್ವಿಯಾಯಿತು.

ನ್ಯಾಮತಿ ತಾಲೂಕು ಬಿಜೆಪಿ ವತಿಯಿಂದ ನೀಡಿದ್ದ ಬಂದ್‌ ಕರೆ ಹಿನ್ನೆಲೆಯಲ್ಲಿ ತಾಲೂಕಿನ ನ್ಯಾಮತಿ ಪಟ್ಟಣ, ಸುರಹೊನ್ನೆ, ಸವಳಂಗ, ಚಿಲೂರು ಗ್ರಾಮಗಳಲ್ಲಿ ಚಟುವಟಿಕೆಗಳು ಸ್ಥಗಿತವಾಗಿದ್ದವು. ನ್ಯಾಮತಿ ತಾಲ್ಲೂಕು ಕೇಂದ್ರವಾದ ನ್ಯಾಮತಿ ಪಟ್ಟಣ, ಸುರಹೊನ್ನೆ, ಸವಳಂಗ, ಚಿಲೂರು ಗ್ರಾಮಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ವರ್ತಕರು, ಹೋಟೆಲ್‌ ಮಾಲೀಕರು, ಸಣ್ಣಪುಟ್ಟ ವ್ಯಾಪಾರಸ್ಥರು ಜೊತೆಗೆ ಶಾಲಾ-ಕಾಲೇಜು, ಹಣಕಾಸು ಸಂಸ್ಥೆಗಳು ತಮ್ಮ ವಹಿವಾಟನ್ನು ಸ್ಥಗಿತಗೊಳಿಸಿ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ರೇಣುಕಾಚಾರ್ಯ, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಹಲವಾರು ಜ್ವಲಂತ ಸಮಸ್ಯೆಗಳ ಬಗ್ಗೆ ಕಳೆದ 5 ದಿನಗಳಿಂದ ತಾಲೂಕು ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ ನಮ್ಮ ಸಮಸ್ಯೆ ಆಲಿಸಲು ಈವರೆಗೆ ಜಿಲ್ಲಾಡಳಿತವಾಗಲಿ, ಸರ್ಕಾರದ ಉಸ್ತುವಾರಿ ಮಂತ್ರಿಯಾಗಲಿ ಆಗಮಿಸಲಿಲ್ಲ. ನಮ್ಮ ಜನರ ರಕ್ಷಣೆಗಾಗಿ ಅನಿವಾರ್ಯವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ನ್ಯಾಮತಿ ತಾಲೂಕನ್ನು ಸಂಪೂರ್ಣ ಬಂದ್‌ ಮಾಡಿ ಪ್ರತಿಭಟನೆ ನಡೆಸಿದೆವು ಎಂದರು.

ಹೊನ್ನಾಳಿ ತುಂಗಭದ್ರಾ ನದಿ ಪಾತ್ರದಲ್ಲಿ ಹೇರಳವಾಗಿ ಮರಳು ದೊರೆಯುತ್ತಿದ್ದರೂ ಜಿಲ್ಲಾಡಳಿತ ಮರಳಿನ ಕೃತಕ ಅಭಾವ ಸೃಷ್ಟಿಸಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದೆ. ಜನರಿಗೆ ಅನುಕೂಲ ಕಲ್ಪಿಸಲು ನದಿ ಪಾತ್ರದಿಂದ ನೇರವಾಗಿ ಜನಸಾಮಾನ್ಯರಿಗೆ ಮರಳು ನೀಡುವ ಪದ್ಧತಿ ಜಾರಿಗೆ ತರಬೇಕು ಎಂದರು.

ರಾಜ್ಯಸರ್ಕಾರ ತಮ್ಮ ಸರ್ಕಾರದ ಶಾಸಕರ ಕ್ಷೇತ್ರಗಳನ್ನು ಮಾತ್ರ ಬರಪೀಡಿತ ಪಟ್ಟಿಗೆ ಸೇರಿಸಿದೆ. ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಮುಖ್ಯಮಂತ್ರಿ, ಕಂದಾಯ ಸಚಿವರಿಗೆ ಹಲವಾರು ಬಾರಿ ಮನವಿ ಮಾಡಿದರೂ ಈವರೆಗೆ ಸಮಸ್ಯೆ ಆಲಿಸಿಲ್ಲ ಎಂದರು. 

ನ್ಯಾಮತಿ ಗ್ರಾ.ಪಂ ಅಧ್ಯಕ್ಷೆ ರೇಣುಕಮ್ಮ , ಸುರಹೊನ್ನೆ ಗ್ರಾ.ಪಂ ಉಪಾಧ್ಯಕ್ಷ ಸದಾಶಿವಪ್ಪ, ಜಿ.ಪಂ ಸದಸ್ಯೆ ಉಮಾರಮೇಶ್‌, ತಾ.ಪಂ ಉಪಾಧ್ಯಕ್ಷ ಎಸ್‌.ಪಿ. ರವಿಕುಮಾರ್‌, ತಾ.ಪಂ ಸದಸ್ಯರಾದ ಸಿದ್ದಲಿಂಗಪ್ಪ, ಹನುಮಂತಪ್ಪ ಸವಳಂಗ ಗ್ರಾ.ಪಂ ಅಧ್ಯಕ್ಷ ರಮೇಶ್‌ ನಾಯ್ಕ, ಎಪಿಎಂಸಿ ನಿರ್ದೇಶಕ ಗಣೇಶ್‌ ಇದ್ದರು. ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದ ಬಂದ್‌ನಿಂದ ಪಟ್ಟಣ ಬಿಕೋ ಎನ್ನುತ್ತಿತು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.