ಜಿಪಂ ಸಿಇಒ ವಿರುದ್ಧ ಎಸಿಬಿಗೆ ಅಧ್ಯಕ್ಷೆ ದೂರು


Team Udayavani, Dec 14, 2018, 2:51 PM IST

yad-2.jpg

ದಾವಣಗೆರೆ: ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆಯುವ ಭ್ರಷ್ಟಾಚಾರ, ಅವ್ಯವಹಾರ, ಸ್ವಜನ ಪಕ್ಷಪಾತ ವಿರುದ್ಧ ತನಿಖೆ ನಡೆಸುವ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ, ಉಪ ಕಾರ್ಯದರ್ಶಿ ವಿರುದ್ಧವೇ ತನಿಖೆಗೆ ಕೋರಿ ಖುದ್ದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಕೆ.ಆರ್‌. ಜಯಶೀಲಾ ಗುರುವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ಸಲ್ಲಿಸಿದ್ದಾರೆ. ತಾವು ಸದಸ್ಯೆಯಾದ ಕಳೆದ ಎರಡು ವರ್ಷ ಹಾಗೂ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ನಾಲ್ಕು ತಿಂಗಳಲ್ಲಿ ಜಿಲ್ಲಾ ಪಂಚಾಯತ್‌ಗೆ ಎಲ್ಲಾ ಲೆಕ್ಕ ಶೀರ್ಷಿಕೆಯಲ್ಲಿ ಬಿಡುಗಡೆ ಮತ್ತು ಖರ್ಚಾಗಿರುವ ಅನುದಾನದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಜಯಶೀಲಾ ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್ಪಿ ಎಚ್‌.ಎಸ್‌. ಪರಮೇಶ್ವರ್‌ಗೆ ದೂರು ಸಲ್ಲಿಸಿದರು.
 
ದೂರು ಸಲ್ಲಿಸಿದ ನಂತರ ಅಧ್ಯಕ್ಷೆ ಕೆ.ಆರ್‌. ಜಯಶೀಲಾ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್‌. ಅಶ್ವತಿ, ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ ಅವರು ಭ್ರಷ್ಟಾಚಾರ, ಅವ್ಯವಹಾರ ಮತ್ತು ಸ್ವಜನ ಪಕ್ಷಪಾತ ಎಸಗಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ನಾನು ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ನಂತರ ಗ್ರಾಮ ಪಂಚಾಯತ್‌, ಸಾರ್ವಜನಿಕರಿಂದ ಬಂದಿರುವ ಎಲ್ಲಾ ದೂರುಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದೇನೆ ಎಂದರು.

ಜಿಲ್ಲೆಯ 282 ಗ್ರಾಮ ಪಂಚಾಯತ್‌ಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ, 14ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕರು ತಮಗೆ ದೂರು ಸಲ್ಲಿಸಿದ್ದರು. ಅವುಗಳ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದೇನೆ. 10 ಲಕ್ಷ ರೂ. ಅವ್ಯವಹಾರ ಮಾಡಿದರೂ ಭ್ರಷ್ಟಾಚಾರವೇ. ಅದೇ ರೀತಿ 1 ರೂಪಾಯಿ ಅವ್ಯವಹಾರ ಮಾಡಿದರೂ ಅದೂ ಸಹ ಭ್ರಷ್ಟಾಚಾರ. ಏಕೆಂದರೆ ಅದು ಸಾರ್ವಜನಿಕರ ಸ್ವತ್ತು. ಹಾಗಾಗಿಯೇ ದೂರುಗಳ ಸತ್ಯಾಸತ್ಯತೆ ಹೊರಗೆ ಬರಲಿ ಎಂದು ತಿಳಿಸಿದರು.

ನನಗೆ ಬಂದಿದ್ದಂತಹ ದೂರು, ಅವುಗಳ ಜೊತೆಗೆ ಕೆಲವಾರು ಮಾಹಿತಿ, ದಾಖಲೆ ಸಲ್ಲಿಸಿದ್ದೇನೆ. ಸೂಕ್ತ ತನಿಖೆ ನಡೆದು, ಸತ್ಯಾಸತ್ಯತೆ ತಿಳಿಯಲಿ. ಒಂದೇ ಒಂದು ರೂಪಾಯಿಯ ಅವ್ಯವಹಾರವಾಗಿದ್ದರೂ ಅದು ಮತ್ತೆ ಖಜಾನೆಗೆ ಸೇರಲಿ. ಅಲ್ಲಿಂದ ಸಾರ್ವಜನಿಕರ ಉಪಯೋಗಕ್ಕೆ ಬಳಕೆಯಾಗಲಿ ಎಂದರು. 

ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ಸ್ವತ್ಛತೆ, ರಸ್ತೆ ಮುಂತಾದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ, ಉಪ ಕಾರ್ಯದರ್ಶಿ ಮನಸೋಇಚ್ಛೆ ವೆಚ್ಚ ಮಾಡಿದ್ದಾರೆ. ಜಿಲ್ಲಾ ಪಂಚಾಯತ್‌ನಲ್ಲಿ ಜನಪ್ರತಿನಿಧಿಗಳಿಗೆ ಅವಕಾಶವೇ ಇಲ್ಲದಂತೆ ಇಬ್ಬರೇ ಸರ್ವಾಧಿಕಾರ ನಡೆಸುತ್ತಿದ್ದಾರೆ. ಅವರನ್ನು ನೋಡದಂತೆ ಕೆಳಗಿನ ಅಧಿಕಾರಿಗಳು, ಸಿಬ್ಬಂದಿ ಮೂಕಪ್ರೇಕ್ಷಕರಂತೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಸಾಮಾನ್ಯರು ಭ್ರಷ್ಟಾಚಾರ ನಡೆಸಿದರೂ ಭ್ರಷ್ಟಾಚಾರವೇ. ದೊಡ್ಡವರು ಮಾಡಿದರೂ ಅದು ಸಹ ಭ್ರಷ್ಟಾಚಾರವೇ. ಯಾರೇ ಮಾಡಿದರೂ ಅದು ಭ್ರಷ್ಟಾಚಾರ. ಕಳೆದ 2 ವರ್ಷ ನಾಲ್ಕು ತಿಂಗಳ ಅವಧಿಯಲ್ಲಿ ಜಿಲ್ಲಾ ಪಂಚಾಯತ್‌ಗೆ ಎಲ್ಲಾ ಲೆಕ್ಕ ಶೀರ್ಷಿಕೆಯಲ್ಲಿ ಬಿಡುಗಡೆಯಾಗಿರುವ ಮತ್ತು ಖರ್ಚಾಗಿರುವ ಅನುದಾನದ ಬಗ್ಗೆ ಮಾತ್ರವಲ್ಲ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಭ್ರಷ್ಟಾಚಾರ ನಡೆದಿರುವ 282 ಗ್ರಾಮ ಪಂಚಾಯತಿಗಳ ಬಗ್ಗೆಯೂ ತನಿಖೆ ಆಗಲಿ. ಸತ್ಯಾಸತ್ಯತೆ ಹೊರ ಬರಲಿ ಎಂದು ಪುನರುಚ್ಚರಿಸಿದರು.

ಯಾರೂ ಹೇಳಿಕೊಳ್ಳಲಿಕ್ಕಾಗದ ಮಟ್ಟಿಗೆ ಜಿಲ್ಲಾ ಪಂಚಾಯತ್‌ ವ್ಯವಸ್ಥೆ ಹೋಗಿದೆ. ಗಾಂಧಿ ಪುರಸ್ಕಾರ ಪ್ರಶಸ್ತಿಗೂ ಸಹ ಹಣ ನೀಡಬೇಕಾಗಿದೆ ಎಂದು ಖುದ್ದಾಗಿ ಕೆಲ ಗ್ರಾಮ ಪಂಚಾಯತ್‌ ಸದಸ್ಯರೇ ತಮಗೆ ತಿಳಿಸಿದ್ದಾರೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.