ಈಗ ಜಿಪಂ ಅಧ್ಯಕ್ಷೆ ವಿರುದ್ಧ ಪ್ರತಿಭಟನೆ


Team Udayavani, Dec 15, 2018, 3:25 PM IST

dvg-2.jpg

ದಾವಣಗೆರೆ: ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಎಸ್‌. ಅಶ್ವತಿ, ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ ವಿರುದ್ಧ ಅಧ್ಯಕ್ಷೆ ಕೆ.ಆರ್‌. ಜಯಶೀಲಾ ಎಸಿಬಿಗೆ ನೀಡಿರುವ ದೂರು ಹಿಂಪಡೆಯುವ ಜೊತೆಗೆ ಬಹಿರಂಗ ಕ್ಷಮೆ ಕೋರಲು ಆಗ್ರಹಿಸಿ ವಿವಿಧ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕೂಲಿ ಕಾರ್ಮಿಕರು ಶುಕ್ರವಾರ ಜಿಲ್ಲಾ ಪಂಚಾಯತ್‌ ಎದುರು ದಿಢೀರ್‌ ಪ್ರತಿಭಟಿಸಿದರು.

ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದವರು ಜಿಲ್ಲಾ ಪಂಚಾಯತ್‌ ಅಧ್ಯಕ್ಷರ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ದೂರು ಹಿಂಪಡೆದು, ಕೂಲಿಕಾರರಿಗೆ ಆಗುವ ಸಮಸ್ಯೆ ತಪ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬೆಂಗಳೂರಿಗೆ ತೆರಳಿರುವ ಜಿಲ್ಲಾ ಪಂಚಾಯತ್‌ ಅಧ್ಯಕ್ಷರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಎಸಿಬಿಗೆ ನೀಡಿರುವ ದೂರು ಹಿಂಪಡೆಯುವ ಜೊತೆಗೆ ಬಹಿರಂಗ ಕ್ಷಮೆ ಕೋರುವ ತನಕ ಜಿಲ್ಲಾ ಪಂಚಾಯತ್‌ ಎದುರು ಹೋರಾಟ ಮುಂದುವರೆಸುವುದಾಗಿ ಕೆಲವರು ಎಚ್ಚರಿಸಿದರು. ಇನ್ನು ಕೆಲವರು ಶನಿವಾರ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್‌ ಕಚೇರಿಗಳಿಗೆ ಬೀಗ ಜಡಿದು, ಹೋರಾಟ ನಡೆಸಲಾಗುವುದು ಎಂದರು.

ಜಿಪಂ ಅಧ್ಯಕ್ಷರು ಎರಡು ದಿನ ದಾವಣಗೆರೆಗೆ ಬರುವುದಿಲ್ಲ ಎನ್ನುವ ವಿಷಯ ಗೊತ್ತಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ, ಅಂತಿಮವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಮನವಿ ಸಲ್ಲಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಪ್ರತಿಭಟನಾಕಾರರು, ಸಿಇಒ ಎಸ್‌. ಅಶ್ವತಿ, ಉಪ ಕಾರ್ಯದರ್ಶಿ ಜಿ.ಎಸ್‌.ಷಡಕ್ಷರಪ್ಪ ಇಬ್ಬರು ಸಹ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಜಗಳೂರು ತಾಲೂಕಿನ ಅನೇಕ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಆಲಿಸಿ, ಟ್ಯಾಂಕರ್‌ ಇಲ್ಲವೇ ಖಾಸಗಿಯವರಿಂದ ಕೊಳವೆಬಾವಿ ಬಾಡಿಗೆ ಆಧಾರದಲ್ಲಿ
ನೀರು ಒದಗಿಸುವ ವ್ಯವಸ್ಥೆ ಮಾಡಿದ್ದಾರೆ.

ಕೆಲವು ಗ್ರಾಮಗಳಲ್ಲಿ ಬೋರ್‌ವೆಲ್‌ ಕೊರೆಸಿ, ನೀರಿನ ವ್ಯವಸ್ಥೆ ಮಾಡಿಸಿದ್ದಾರೆ. ಅನೇಕ ಕಡೆ ಶೌಚಾಲಯ ನಿರ್ಮಾಣಕ್ಕೆ
ಕಾರಣರಾಗಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು ಸಲ್ಲಿಸಿರುವ ಅಧ್ಯಕ್ಷೆ ಕೆ.ಆರ್‌. ಜಯಶೀಲಾ ಒಂದೇ ಒಂದು ಹಳ್ಳಿಗೆ ಭೇಟಿ ನೀಡಿಲ್ಲ. ಜನರ ಸಮಸ್ಯೆ ಕೇಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಮಾತು ಕೇಳುವುದಿಲ್ಲ.

ಹೇಳಿದ ಕೆಲಸ ಮಾಡುವುದಿಲ್ಲ ಎಂದು ಅಧಿಕಾರಿಗಳ ವಿರುದ್ಧ ಈ ರೀತಿ ದೂರು ದಾಖಲಿಸಿದರೆ ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಮುಂದೆ ಬರುವುದೇ ಇಲ್ಲ. ಒಂದು ವೇಳೆ ಅವ್ಯವಹಾರ, ಭ್ರಷ್ಟಾಚಾರ ನಡೆದಿದ್ದರೆ ಆಯಾಯ ಗ್ರಾಮ ಪಂಚಾಯತ್‌ಗಳ ವಿರುದ್ಧ ತನಿಖೆ ನಡೆಸಲಿ. ಅದರಿಂದ ಇತರೆ ಗ್ರಾಮ ಪಂಚಾಯತ್‌ಗಳಲ್ಲಿ ತೊಂದರೆ ಉಂಟು ಮಾಡಬಾರದು.

ಗ್ರಾಮ ಪಂಚಾಯತ್‌ ಸದಸ್ಯರು ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ಹೇಳಿದ್ದಾರೆ ಎಂದು ಅಧ್ಯಕ್ಷರು ಹೇಳಿದ್ದಾರೆ. ಅದು ಯಾವ ಗ್ರಾಮ ಪಂಚಾಯತಿಯವರು ಎಂಬುದರ ದಾಖಲೆ ತೋರಿಸಲಿ. ಅಧ್ಯಕ್ಷರು ಎಸಿಬಿಗೆ ದೂರು ಸಲ್ಲಿಸುವ ಮುನ್ನ ಗ್ರಾಮ ಪಂಚಾಯತ್‌ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಬೇಕಿತ್ತು ಎಂದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅವ್ಯವಹಾರ ಆಗಿದೆ ಎಂದು ಅಧ್ಯಕ್ಷರು ಎಸಿಬಿಗೆ ದೂರು ಸಲ್ಲಿಸಿದ್ದಾರೆ. ತನಿಖೆ ನಡೆಸಬೇಕು ಎಂದು ಮೂರು ತಿಂಗಳು ಯಾವುದೇ ಕೆಲಸಕ್ಕೆ ಅವಕಾಶವನ್ನೇ ನೀಡುವುದಿಲ್ಲ. ಮೊದಲೇ ಮಳೆ, ಬೆಳೆ ಇಲ್ಲದ ಬರಗಾಲದಲ್ಲಿ ಇರುವ ಕೆಲಸವೂ ಇಲ್ಲದಂತಾಗುತ್ತದೆ.

ಕೂಲಿ ಮಾಡುವರಿಗೆ ಸಮಸ್ಯೆ ಆಗುತ್ತದೆ. ಅಧ್ಯಕ್ಷರು, ಅಧಿಕಾರಿಗಳು ನಡುವೆ ಏನೇ ಆಗಲಿ ಅದರಿಂದ ಕೂಲಿ ಮಾಡುವರಿಗೆ ತೊಂದರೆ ಆಗಬಾರದು. ಕೆಲಸಕ್ಕೆ ಯಾವುದೇ ಕಾರಣಕ್ಕೂ ಅಡ್ಡಿ ಆಗಬಾರದು. ಕೆಲಸ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಹಾಲೇಕಲ್‌, ದೇವಿಕೆರೆ, ದಿದ್ದಗಿ, ಬಸವನಕೋಟೆ, ಬಿದರಕೆರೆ, ಮಡ್ರಳ್ಳಿ(ಗುರುಸಿದ್ದಾಪುರ), ಹೊಸಕೆರೆ ಇತರೆ ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ಕೂಲಿ ಕಾರ್ಮಿಕರು ಇದ್ದರು. 

ಪ್ರತಿಭಟನೆಯ ಪ್ರಾರಂಭದ ಸಮಯದಲ್ಲಿ ಜಿಲ್ಲಾ ಪಂಚಾಯತ್‌ ನಲ್ಲೇ ಇದ್ದ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಸ್‌. ಅಶ್ವತಿ, ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ ಬೇರೆ ಕಡೆಯಿಂದ ಹೊರ ಹೋದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.