ಆಶ್ರಯ ಮನೆ, ಉದ್ಯೋಗ, ರಸ್ತೆ ಸಮಸ್ಯೆ


Team Udayavani, Dec 18, 2018, 4:08 PM IST

dvg-3.jpg

ದಾವಣಗೆರೆ: ಆಶ್ರಯ ಮನೆ…, ಉದ್ಯೋಗಾವಕಾಶ…, ಆಪರೇಷನ್‌ ವೆಚ್ಚಕ್ಕೆ ನೆರವು…, ರಸ್ತೆ ಸಮಸ್ಯೆ ನಿವಾರಣೆ…, ಇವು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ ಕೆಲವು ಅಹವಾಲುಗಳು.

ದಾವಣಗೆರೆಯ ಜಾಲಿನಗರದ 2ನೇ ಮೇನ್‌ ನಿವಾಸಿ ಪ್ಯಾರಿಜಾನ್‌, ಸಮೀಮ್‌ಬಾನು, ಆಜಾದ್‌ ನಗರದ 1ನೇ ಮುಖ್ಯ ರಸ್ತೆ 4ನೇ ಕ್ರಾಸ್‌ನ ರೇಶ್ಮಾ ಬಾನು, ಸಲ್ಮಾಬಾನು, ಹೀನಾ ಕೌಸರ್‌, ಮಿಲ್ಲತ್‌ ಸ್ಕೂಲ್‌ ಸಮೀಪದ ನಿವಾಸಿ ಶಾಬಾನಾ, ವೆಂಕಾಭೋವಿ ಕಾಲೋನಿಯ ರೇಷ್ಮಾ… ಇತರರು ಆಶ್ರಯ ಮನೆ ಮಂಜೂರಾತಿ ಮೂಲಕ ಅನುಕೂಲ ಮಾಡಿಕೊಡಲು ಮನವಿ ಮಾಡಿದರು.

ಆಶ್ರಯ ಮನೆ ಕೋರಿ ಅರ್ಜಿ ಸಲ್ಲಿಸಲಿಕ್ಕೆ ಬಂದವರಿಗೆ ಏಕಕಾಲದಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟ ಅಪರ ಜಿಲ್ಲಾಧಿಕಾರಿ, ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ಮಹಾನಗರ ಪಾಲಿಕೆ ಆಯುಕ್ತರಿಗೆ ಕಳಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ದಾವಣಗೆರೆಯ ಇ.ವಿ. ಪೂಜಾ, ಕೆ.ಸಿ. ಶಿವನಗೌಡ, ಎಚ್‌. ಮಂಜುನಾಥ್‌ ಇತರರು ಯಾವುದಾದರೂ ಉದ್ಯೋಗ ಸೌಲಭ್ಯ ಒದಗಿಸುವ ಮೂಲಕ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಜಿಲ್ಲಾಡಳಿತಕ್ಕೆ ನೇರವಾಗಿ ಉದ್ಯೋಗವಕಾಶ ಮಾಡಿಕೊಡುವ ಅಧಿಕಾರ ಇಲ್ಲ. ಯಾವುದಾದರೂ ಇಲಾಖೆಯಲ್ಲಿ ಅರ್ಜಿ ಆಹ್ವಾನಿಸಿದರೆ ಅರ್ಜಿ ಸಲ್ಲಿಸಿ ಎಂದು ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಸಲಹೆ ನೀಡಿದರು.
 
ಹರಪನಹಳ್ಳಿ ತಾಲೂಕಿನ ದುಗ್ಗಾವತಿಯ ಪುಟ್ಟಪ್ಪ ದೇಸಾಯಿ ಎಂಬುವರು ತಮಗೆ ಇರುವ 5 ಎಕರೆ 13 ಗುಂಟೆ ಜಮೀನನ್ನು ದಾಖಲೆಯಲ್ಲಿ 8 ಎಕರೆ 13 ಗುಂಟೆ ಎಂಬುದಾಗಿ ಅಧಿಕಾರಿಗಳು ನಮೂದಿಸಿದ್ದಾರೆ. ಅದರಿಂದ ಸಾಕಷ್ಟು ತೊಂದರೆ ಆಗುತ್ತಿದೆ. ದಾಖಲೆ ಸರಿಪಡಿಸಿಕೊಡುವಂತೆ ಅನೇಕ ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡ ಅವರು, ಅಧಿಕಾರಿಗಳ ವಿರುದ್ಧ ಏಕ ವಚನದಲ್ಲೇ ಹರಿಹಾಯ್ದರು.

ಹೊನ್ನಾಳಿ ತಾಲೂಕಿನ ರಾಂಪುರ ಗ್ರಾಮದ ಪ್ರವೀಣ್‌ಕುಮಾರ್‌ ಎಂಬುವರು ಜಮೀನುಗಳಿಗೆ ರಸ್ತೆ ಮಾಡಿಕೊಡುವಂತೆ ಮನವಿ ಮಾಡಿದರು. ಹರಿಹರ ತಾಲೂಕಿನ ಗುತ್ತೂರು ಗ್ರಾಮದ ಎಸ್‌. ನಾಗರಾಜ್‌ ಎನ್ನುವರು, ರಾಜೀವ್‌ಗಾಂಧಿ ವಸತಿ ನಿಗದಮದಿಂದ ಗುತ್ತೂರು ಗ್ರಾಮಕ್ಕೆ ವಸತಿ ಯೋಜನೆಯ ಗುರಿ ನಿಗದಿ ಕಳಿಸಿಕೊಡಬೇಕು ಎಂದು ಕೋರಿದಾಗ ಅರ್ಜಿಯನ್ನು ಜಿಲ್ಲಾ ಪಂಚಾಯತ್‌ಗೆ ಕಳಿಸಿಕೊಡುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು. 

ಹೊನ್ನಾಳಿ ತಾಲೂಕಿನ ಕುಳಗಟ್ಟೆಯ ಎಚ್‌.ಡಿ. ಚಂದ್ರಪ್ಪ ಎಂಬುವರು, ಸಾಸ್ವೇಹಳ್ಳಿ ಟ್ರೇಡರ್ಸ್‌ನ ಸಂತೋಷ್‌ಕುಮಾರ್‌ ಎಂಬುವರು ಭತ್ತದ ಕಳಪೆ ಬೀಜ ನೀಡುವ ಮೂಲಕ ರೈತರಿಗೆ ಮೋಸ ಮಾಡಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

ಭತ್ತದ ಕಳಪೆ ಬೀಜ ವಿತರಣೆ ಬಗ್ಗೆ ಗಮನಕ್ಕೆ ಬಂದಿದೆ. ವಿತರಿಸಿರುವ ಬೀಜವನ್ನು ಪರಿಶೀಲನೆಗೆ ಕಳಿಸಿಕೊಡಲಾಗಿದೆ. ವರದಿ ಬಂದ ನಂತರ ಸಂಬಂಧಿತರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು. 

ಹರಿಹರ ತಾಲೂಕಿನ ಗುಳೇದಹಳ್ಳಿಯ ಕೆ.ಎಸ್‌. ಚಂದ್ರಶೇಖರಪ್ಪ ಎಂಬುವರು, ಗ್ರಾಮದ ಸರ್ವೇ ನಂಬರ್‌ 32/2 ರಲ್ಲಿ 1 ಎಕರೆ 13 ಗುಂಟೆ ಜಮೀನು ದೇವರಬೆಳಕೆರೆ ಪಿಕಪ್‌ ಡ್ಯಾಂನ ಹಿನ್ನಿರಿನ ಜೌಗು ಪ್ರದೇಶದಲ್ಲಿ ಮುಳುಗಡೆಯಾಗಿದೆ. ನೇರ ಖರೀದಿ ಮೂಲಕ ಭೂ ಸ್ವಾಧೀನ ಮಾಡಿಸಿಕೊಡಬೇಕು ಎಂದು ಮನವಿ ಮಾಡಿದರು.

ಜಗಳೂರು ತಾಲೂಕಿನಿಂದ ಬಂದಿದ್ದ ಒಬ್ಟಾತ ತನ್ನ ಅಣ್ಣನಿಗೆ ಈಗಾಗಲೇ ಎರಡು ಬಾರಿ ಶಸ್ತ್ರಚಿಕಿತ್ಸೆ ಆಗಿದೆ. ಇನ್ನೊಂದು ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂದು ವೈದ್ಯರು ಹೇಳಿದ್ದಾರೆ. ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿದ್ದೇವೆ. ಇನ್ನೊಂದು ಶಸ್ತ್ರಚಿಕಿತ್ಸೆಗೆ ನೆರವು ನೀಡಬೇಕು ಎಂದು ಮನವಿ ಮಾಡಿದರು. ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ|ಎಂ.ಎಸ್‌. ತ್ರಿಪುಲಾಂಬಗೆ ಸೂಚಿಸಿದರು. 

ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕಿ ಜಿ. ನಜ್ಮಾ, ದಾವಣಗೆರೆ ತಹಶೀಲ್ದಾರ್‌ ಜಿ. ಸಂತೋಷ್‌ ಕುಮಾರ್‌, ಹೀನಾ ಕೌಸರ್‌, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.