ಎಳೆ ವಯಸ್ಸಲ್ಲೇ ಮಾನವೀಯ ಮೌಲ್ಯ ತಿಳಿಸಿ


Team Udayavani, Dec 23, 2018, 12:13 PM IST

dvg-3.jpg

ದಾವಣಗೆರೆ: ರಾಮಾಯಣ, ಮಹಾಭಾರತ ಹಾಗೂ ಇತರೆ ಶೌರ್ಯದ ಕಥೆಗಳನ್ನು ಹೇಳುವ ಮೂಲಕ ಎಳೆ ವಯಸ್ಸಿನಲ್ಲೇ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ
ಹೇಳಿದ್ದಾರೆ.

ಶನಿವಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಗರದ ವಿದ್ಯಾನಿಕೇತನ ಪಬ್ಲಿಕ್‌ ಸ್ಕೂಲ್‌ನಲ್ಲಿ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಮಾನವೀಯ ಮೌಲ್ಯಗಳ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿ,
ಶಿವಾಜಿ ಚಿಕ್ಕವರಿದ್ದಾಗ ತಾಯಿ ಜೀಜಾಬಾಯಿ ಹೇಳಿದ ಧೈರ್ಯ-ಶೌರ್ಯದ ಕಥೆಗಳು ಅವರ ಮುಂದಿನ ಜೀವನಕ್ಕೆ ದಾರಿದೀಪವಾಯಿತು.

ಸುಭದ್ರೆಯ ಗರ್ಭದಲ್ಲಿದ್ದಾಗಲೇ ಅಭಿಮನ್ಯು ಚಕ್ರವ್ಯೂಹ ಬೇಧಿಸುವುದನ್ನು ಕೇಳಿ ತಿಳಿದಿದ್ದ. ಹೀಗೆ ಮಕ್ಕಳು ಚಿಕ್ಕವರಿದ್ದಾಗ ಧೈರ್ಯ-ಶೌರ್ಯ ಮತ್ತು ಮಾನವೀಯ ಮೌಲ್ಯದ ಕಥೆ ಹೇಳಿ, ಅವರಲ್ಲಿ ಉತ್ತಮ ಸಂಸ್ಕಾರ ನೀಡಬೇಕಿದೆ ಎಂದರು.

ಮಗುವಿಗೆ ಮುಕ್ತ ಹಾಗೂ ಉತ್ತಮ ಪರಿಸರ, ಶಿಕ್ಷಣ ಒದಗಿಸುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ. ಪೋಷಕರು ಮನೆಯಲ್ಲಿ ಟಿವಿ ಮತ್ತು ಮೊಬೈಲ್‌ ಬಳಕೆ ಕಡಿಮೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಮೊಬೈಲ್‌ ಫೋನ್‌ ಮೇಲೆ ತೀರಾ ಅವಲಂಬಿತರಾಗಿ, ಮೊಬೈಲ್‌ ಸಿಂಡ್ರೋಮ್‌ ರೋಗ ಲಕ್ಷಣವೇ ಶುರುವಾಗಿದೆ. ಅತಿಯಾಗಿ ಮೊಬೈಲ್‌ ಬಳಕೆಯಿಂದ ಬ್ರೈನ್‌ ಟ್ಯೂಮರ್‌, ಹೃದಯ ಸಮಸ್ಯೆ
ಉಂಟಾಗಲಿದೆ. ಮಕ್ಕಳಿಗೆ ಮೊಬೈಲ್‌ನಲ್ಲಿ ಏನು ಬೇಕು, ಬೇಡವೆಂಬ ಬಗ್ಗೆ ತಿಳಿಯದೆ ಹಾದಿ ತಪ್ಪುತ್ತಿದ್ದಾರೆ. ಆದ್ದರಿಂದ ಪೋಷಕರು ಈ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳು ಶಾಲೆಯಲ್ಲಿ ಹೇಗೆ ಓದುತ್ತಿದ್ದಾರೆ, ಇತರೆ ಚಟುವಟಿಕೆಗಳಲ್ಲಿ ಹೇಗಿದ್ದಾರೆಂದು ಶಾಲೆಗೆ
ನಿಯಮಿತವಾಗಿ ಭೇಟಿ ನೀಡಿ ವಿಚಾರಿಸಬೇಕು ಎಂದು ಕಿವಿಮಾತು ಹೇಳಿದರು.

ಇಂದು ಅನೇಕ ವಯೋವೃದ್ಧರು ಮನೆಯಲ್ಲಿ ಆಶ್ರಯವಿಲ್ಲದೇ ವೃದ್ಧಾಶ್ರಮದಲ್ಲಿದ್ದಾರೆ. ಇಂದಿನ ಪೀಳಿಗೆ ಹಿರಿಯರನ್ನು ನಿರ್ಲಕ್ಷಿಸುವುದು
ಸರಿಯಲ್ಲ. ಸೊಸೆಯಂದಿರು ಅತ್ತೆಯನ್ನು ತಮ್ಮ ತಾಯಿಯಂತೆಯೇ ಕಾಣಬೇಕಿದೆ. ಮಹಿಳೆಯರಿಗೆ ಉಚಿತ ಕಾನೂನು ನೆರವು ಸೌಲಭ್ಯವಿದೆ. ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನೆರವು ನೀಡಲಿದೆ ಎಂದು ತಿಳಿಸಿದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್‌.ಎಚ್‌. ಅರುಣ್‌ಕುಮಾರ್‌ ಮಾತನಾಡಿ, ಸಮಾಜ ಮುಂದೆ ಹೇಗಿರಬೇಕೆಂಬುದು ನಮ್ಮ ಮಕ್ಕಳ ಭವಿಷ್ಯದ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಮುಕ್ತವಾದ ವಾತಾವರಣ ನಿರ್ಮಿಸಿಕೊಡಬೇಕು. ಹಸಿವು ಮತ್ತು ದೌರ್ಜನ್ಯಮುಕ್ತಗೊಳಿಸಿ ಉತ್ತಮ ಪರಿಸರ ನೀಡುವುದೇ ಮಕ್ಕಳ ಹಕ್ಕುಗಳ ಮುಖ್ಯ
ಧ್ಯೇಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ರುದ್ರಮುನಿ ಮಾತನಾಡಿ, ಮಕ್ಕಳ ಹಕ್ಕುಗಳ ಮತ್ತು ಮಾನವೀಯ ಮೌಲ್ಯಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಿರುವುದು ಪರಿಣಾಮಕಾರಿಯಾಗಿದೆ. ಪೋಷಕರು ಸಹ ಮಕ್ಕಳ ಹಕ್ಕುಗಳ ಕುರಿತು ಅರಿತು ಅವುಗಳ ಸಂರಕ್ಷಣೆಗೆ ಸಹಕಾರಿಯಾಗುತ್ತದೆ
ಎಂದರು. 

ನಿವೃತ್ತ ಪ್ರಾಂಶುಪಾಲ ಕೆ.ಬಿ. ಆನಂದ್‌, ವಿದ್ಯಾನಿಕೇತನ ಪಬ್ಲಿಕ್‌ ಸ್ಕೂಲ್‌ನ ಕಾರ್ಯದರ್ಶಿ ಆರ್‌. ಮಂಜುನಾಥ ಹೆಗಡೆ, ಮುಖ್ಯೋಪಾಧ್ಯಾಯಿನಿ ಆರ್‌. ಮೀನಾಕ್ಷಿ ಕಾರ್ಯಕ್ರಮದಲ್ಲಿದ್ದರು. ಶಿಕ್ಷಕಿ ದಿವ್ಯ ಪ್ರಾರ್ಥಿಸಿದರು. ರೇಣುಕಾರಾಧ್ಯ ಸ್ವಾಗತಿಸಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.