10ನೇ ತರಗತಿ ಗಣಿತವಿನ್ನು ಸರಳ!
Team Udayavani, Jan 12, 2019, 8:02 AM IST
ನವದೆಹಲಿ: ಗಣಿತವನ್ನು ಕಬ್ಬಿಣದ ಕಡಲೆ’ ಎಂದು ಪರಿಗಣಿಸಿರುವ, ಗಣಿತ ಪರೀಕ್ಷೆ ಬಂತೆಂದರೆ ಹೌಹಾರುವ 10ನೇ ತರಗತಿ ವಿದ್ಯಾರ್ಥಿಗಳಿಗೊಂದು ಸಿಹಿಸುದ್ದಿ. ಮುಂದಿನ ಶೈಕ್ಷಣಿಕ ವರ್ಷದಿಂದ ನೀವು ಸುಲಭದ ಗಣಿತ ಪರೀಕ್ಷೆ’ಯನ್ನು ಆಯ್ಕೆ ಮಾಡಿಕೊಂಡು, ಅದರಲ್ಲಿ ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಬಹುದು.
2020ರಿಂದ 10ನೇ ತರಗತಿಗೆ ಎರಡು ಹಂತದ ಗಣಿತ ಪರೀಕ್ಷೆ ಪರಿಚಯಿಸಲು ಸಿಬಿಎಸ್ಇ ನಿರ್ಧರಿಸಿದೆ. ಅದರಂತೆ, ಗಣಿತ- ಸ್ಟಾಂಡರ್ಡ್ ಮತ್ತು ಗಣಿತ-ಬೇಸಿಕ್ ಎಂಬ ಎರಡು ಆಯ್ಕೆಗಳಿರುತ್ತವೆ. ಯಾರು ಗಣಿತದಲ್ಲಿ ನಿಸ್ಸೀಮರಾಗಿದ್ದು, ಅದಕ್ಕೆ ಸಂಬಂಧಿಸಿಯೇ ಮುಂದಿನ ವಿದ್ಯಾಭ್ಯಾಸ ಮಾಡಲು ಇಚ್ಛಿಸುತ್ತಾರೋ, ಅಂಥವರು ಗಣಿತ- ಸ್ಟಾಂಡರ್ಡ್ ಪರೀಕ್ಷೆಯನ್ನು ಬರೆಯಬಹುದು, ಯಾರಿಗೆ ಗಣಿತ ಕಷ್ಟ ಎಂಬ ಭಾವನೆಯಿದೆಯೋ, ಅಂಥವರು ಗಣಿತ-ಬೇಸಿಕ್ ಪರೀಕ್ಷೆ ಬರೆದು, ತಮ್ಮ ಆಯ್ಕೆಯ ಕೋರ್ಸ್ ಆಯ್ದುಕೊಂಡು ವಿದ್ಯಾಭ್ಯಾಸ ಮುಂದುವರಿಸಬಹುದು.10ನೇ ತರಗತಿಯ ಪರೀಕ್ಷೆ ವೇಳೆ ವಿದ್ಯಾರ್ಥಿಗಳಲ್ಲಿರುವ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಬಿಎಸ್ಇ ತಿಳಿಸಿದೆ.
ಇಂಟರ್ನಲ್ಗೆ ಅನ್ವಯವಾಗಲ್ಲ: ಆದರೆ, ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಂದರೆ, ಪರೀಕ್ಷೆಗಳು ಪ್ರತ್ಯೇಕವಾಗಿದ್ದರೂ ಶಾಲೆಗಳಲ್ಲಿನ ಪಠ್ಯಕ್ರಮ, ಆಂತರಿಕ ಮೌಲ್ಯಮಾಪನ ಒಂದೇ ಆಗಿರುತ್ತದೆ. ಮಾನ್ಯತೆ ಪಡೆದ ಶಾಲೆಯು ಆನ್ಲೈನ್ ಮೂಲಕ ಅಭ್ಯರ್ಥಿಗಳ ಪಟ್ಟಿಯನ್ನು ಸಿಬಿಎಸ್ಇಗೆ ಕಳುಹಿಸುವ ಸಂದರ್ಭದಲ್ಲೇ ಆಯ್ಕೆಯನ್ನು ನಮೂದಿಸಬೇಕಾಗುತ್ತದೆ.
ಫೇಲಾದರೆ?: ಗಣಿತ-ಬೇಸಿಕ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿ ಅನುತ್ತೀರ್ಣನಾದರೆ, ಗಣಿತ-ಬೇಸಿಕ್ ಪೂರಕ ಪರೀಕ್ಷೆ ಬರೆಯಬೇಕಾಗುತ್ತದೆ. ಆದರೆ, ಗಣಿತ-ಸ್ಟಾಂಡರ್ಡ್ ಪರೀಕ್ಷೆ ಬರೆದು ಅನುತ್ತೀರ್ಣನಾದ ವಿದ್ಯಾರ್ಥಿ, ಪೂರಕ ಪರೀಕ್ಷೆ ವೇಳೆ ಗಣಿತ-ಬೇಸಿಕ್ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಅದೇ ರೀತಿ, ಒಬ್ಬ ವಿದ್ಯಾರ್ಥಿ ಆರಂಭದಲ್ಲಿ ಗಣಿತ-ಬೇಸಿಕ್ ಪರೀಕ್ಷೆ ಬರೆದಿದ್ದರೂ, ನಂತರ ಗಣಿತದಲ್ಲೇ ಉನ್ನತ ಶಿಕ್ಷಣ ಪಡೆಯಬೇಕೆಂದು ಬಯಸಿದರೆ, ಅಂಥ ವಿದ್ಯಾರ್ಥಿ ಪೂರಕ ಪರೀಕ್ಷೆ ಕುಳಿತು ಗಣಿತ-ಸ್ಟಾಂಡರ್ಡ್ ಆಯ್ಕೆ ಮಾಡಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ