ಲೋಕಸಭೆ ಚುನಾವಣೆಗೆ ತಾಲೂಕಾಡಳಿತ ಸಿದ್ಧತೆ
Team Udayavani, Jan 14, 2019, 6:36 AM IST
ಹೊನ್ನಾಳಿ: ಮುಂಬರುವ ಲೋಕಸಭೆ ಚುನಾವಣೆಗೆ ತಾಲೂಕು ಆಡಳಿತ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಹೊಸ ಮತದಾರರಾಗಿ ನೋಂದಣಿ ಮಾಡಿಕೊಂಡಿರುವ ತಾಲೂಕಿನ 3914 ಮತದಾರರಿಗೆ ಮತದಾರರ ಗುರುತಿನ ಕಾರ್ಡ್ನ್ನು ಜ.25 ರಂದು ನಡೆಯುವ ಮತದಾರರ ದಿನಾಚರಣೆಯಂದು ವಿತರಿಸಲು ಮತಗಟ್ಟೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಜ.25 ರ ನಂತರ ಮತ್ತೂಮ್ಮೆ ನೂತನ ಯುವ ಮತದಾರರ ಸೇರ್ಪಡೆಗೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಂಬಂಧ ಹಲವಾರು ಸಭೆಗಳು ಡಿಸಿ ನೇತೃತ್ವದಲ್ಲಿ ನಡೆದಿವೆ. ಚುನಾವಣೆಗೆ ನೇಮಕಗೊಂಡಿರುವ ಸೆಕ್ಟರ್ ಅಧಿಕಾರಿಗಳ ಸಭೆ ಜ. 14ರ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.
ಮತಗಟ್ಟೆಗಳ ಕೇಂದ್ರಗಳ ಸ್ಥಿತಿಗತಿ ಕುರಿತು ತಾಲೂಕು ಆಡಳಿತ ಬಿಇಒ ಕಚೇರಿಯಿಂದ ವರದಿ ಕೇಳಿದ್ದು, ಅವಶ್ಯಕತೆ ಇರುವಲ್ಲಿ ದುರಸ್ತಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲ್ದಾರ್ ತುಷಾರ್ ಬಿ.ಹೊಸೂರ್, ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವ ಬದಲು ಈಗಿನಿಂದಲೇ ಸಿದ್ಧತೆ ಮಾಡಿಕೊಂಡರೆ ಆ ಸಂದರ್ಭದಲ್ಲಿ ಸಮಸ್ಯೆಯಾಗುವುದಿಲ್ಲ. ಆದ್ದರಿಂದ ಸಿದ್ಧತೆಗಳನ್ನು ಆರಂಂಭಿಸಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ