ಬರದ ನಡುವೆಯೂ ಸಂಕ್ರಾಂತಿಗೆ ಸಜ್ಜು


Team Udayavani, Jan 15, 2019, 7:51 AM IST

gul-7.jpg

ದಾವಣಗೆರೆ: ಜಿಲ್ಲೆಯಾದ್ಯಂತ ತೀವ್ರ ಬರಗಾಲದ ನಡುವೆಯೂ ಹೊಸ ವರ್ಷದ ಮೊದಲ ಹಬ್ಬ ಸಂಕ್ರಾತಿ ಸಿದ್ಧತೆ ನಗರದಲ್ಲಿ ಸೋಮವಾರ ಕಳೆಗಟ್ಟಿತ್ತು.

ಸಮೃದ್ಧಿಯ ಸಂಕೇತವಾಗಿರುವ ಸಂಕ್ರಾತಿ, ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಆಚರಿಸಲಾಗುವ ಹಬ್ಬವಾಗಿದ್ದು, ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲೂ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.

ಹಬ್ಬದ ಪ್ರಯುಕ್ತ ಎಳ್ಳು, ಬೆಲ್ಲ, ಸಕ್ಕರೆ ಅಚ್ಚು ಗೊಂಬೆ, ಹಣ್ಣು, ಹೂವು, ಪೂಜಿಸಲು ಕಬ್ಬನ್ನು ಮಹಿಳೆಯರು, ಹಿರಿಯರು, ಯುವತಿಯರು ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ನಡುವೆಯೂ ಅನುಕೂಲಕ್ಕೆ ತಕ್ಕಷ್ಟು ಖರೀದಿ ಮಾಡಿದರು.

ಗಡಿಯಾರ ಕಂಬ, ಚಾಮರಾಜಪೇಟೆಯ ಮಾರುಕಟ್ಟೆಗಳಲ್ಲಿ ಹಳ್ಳಿ ಹಾಗೂ ನಗರದ ಜನರು ಸಂಕ್ರಾತಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಆದರೂ ಮಾರುಕಟ್ಟೆಯಲ್ಲಿ ಕೆಲಮಟ್ಟಿಗೆ ವ್ಯಾಪಾರ ಕುಂಠಿತವಾಗಿತ್ತು.

ಮಾರುಕಟ್ಟೆಯಲ್ಲಿ ಕೆ.ಜಿ ಸೇಬು 200 ರೂ, ಕಿತ್ತಲೆಹಣ್ಣು 50 ರೂ., ದಾಳಿಂಬೆ 60 ರೂ, ಪಪ್ಪಾಯಿ 30 ರೂ., ಕರಿದ್ರಾಕ್ಷಿ 100 ರೂ, ಹಸಿರು ದ್ರಾಕ್ಷಿ 60 ರೂ, ಅಂಜೂರ ಒಂದಕ್ಕೆ 10ರೂ., ಒಂದು ಸಣ್ಣ ಕಲ್ಲಂಗಡಿ 20 ರೂ., ಮಾರು ಸೇವಂತಿಗೆ ಹೂವು 30 ರೂ. ನಂತೆ ಮಾರಾಟ ಮಾಡಲಾಗುತ್ತಿತ್ತು. ಮಾರುಕಟ್ಟೆಗೆ ಬಂದಂತಹ ಜನರು ಸಹ ಅಷ್ಟೇ ಉತ್ಸುಕರಾಗಿ ಖರೀದಿ ಮಾಡಿದರು.

ಪ್ರತಿ ವರ್ಷ 15 ರಿಂದ 20ರೂ.ಗೆ ಮಾರಾಟವಾಗುತ್ತಿದ್ದ ಒಂದು ಕಬ್ಬಿನ ಕೋಲು ಈ ಬಾರಿ 40 ರೂ.ಗೆ ಮಾರಾಟವಾದವು. ಮಾಮೂಲಿಯಾಗಿ ಜಿಲ್ಲೆಯಲ್ಲಿ ಸಿಗುವ ಕಬ್ಬು ಇದಲ್ಲ. ಮೈಸೂರು, ಮಂಡ್ಯ, ಶಿವಮೊಗ್ಗ ಭಾಗದಿಂದ ತರಿಸುತ್ತೇವೆ. ಹಾಗಾಗಿ ಸಾಗಾಣಿಕೆ ವೆಚ್ಚ ಹೆಚ್ಚಿದ್ದು, ಬೆಲೆ ಏರಿಕೆ ಅನಿವಾರ್ಯವಾಗಿದೆ ಎನ್ನುತ್ತಾರೆ ಕಬ್ಬು ವ್ಯಾಪಾರಿ ಚಾನ್‌.

ಮಾರುಕಟ್ಟೆಯಲ್ಲಿ ಹೂವು, ಹಣ್ಣು ಇತರೆ ಬೆಲೆ ಏನೇ ಹೆಚ್ಚಿದರೂ ಕೂಡ ವರ್ಷದ ಮೊದಲ ಸುಗ್ಗಿ ಹಬ್ಬವನ್ನು ಮಾಡದೇ ಬಿಡುವಂತಿಲ್ಲ. ಕಬ್ಬು, ಹಣ್ಣು, ಎಳ್ಳು ಬೆಲ್ಲವಿಟ್ಟು ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸುತ್ತೇವೆ. ಹಬ್ಬಕ್ಕೆ ಸಾರ್ವಜನಿಕ ರಜೆ ಇರುವುದರಿಂದ ರೊಟ್ಟಿ, ಬುತ್ತಿ, ಪಲ್ಯ, ಚಟ್ನಿಪುಡಿ, ಮೊಸರು ಹೀಗೆ ಬಗೆ ಬಗೆಯ ಅಡುಗೆ ಖಾದ್ಯ ಮಾಡಿಕೊಂಡು ಹೊಳೆ ಇಲ್ಲವೇ ಉದ್ಯಾನಗಳಿಗೆ ಕುಟುಂಬ ಸಮೇತರಾಗಿ ಹೋಗಿ ಭೋಜನ ಸವಿಯುತ್ತೇವೆ. ಆ ಮೂಲಕ ಹಬ್ಬವನ್ನು ಸಂತಸದಿಂದ ಆಚರಣೆ ಮಾಡುತ್ತೇವೆ ಎಂದು ನಗರದ ಶಿವಕುಮಾರ್‌ ಬಡಾವಣೆಯ ಗೃಹಿಣಿ ಗಾಯಿತ್ರಿ ತಿಳಿಸಿದರು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.