ಶೀಘ್ರವೇ ಮತ್ತೂಂದು ಕೇಂದ್ರೀಯ ವಿದ್ಯಾಲಯ


Team Udayavani, Jan 18, 2019, 6:13 AM IST

dvg-3.jpg

ದಾವಣಗೆರೆ: ಜಿಲ್ಲೆಯಲ್ಲಿ ಮತ್ತೂಂದು ಕೇಂದ್ರೀಯ ವಿದ್ಯಾಲಯ ಆರಂಭಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದ್ದಾರೆ.

ಆವರಗೊಳ್ಳ ಸಮೀಪ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರೀಯ ವಿದ್ಯಾಲಯವನ್ನು ಜಿಲ್ಲೆಯಲ್ಲಿ ಪ್ರಾರಂಭಿಸಲು ಕೇಂದ್ರ ಸರ್ಕಾರದ ನೌಕರರ ಸಂಖ್ಯೆ ಜಿಲ್ಲೆಯಲ್ಲಿ ಇನ್ನೂ ಹೆಚ್ಚಾಗಬೇಕಿದೆ. ಈಗಾಗಲೇ ಚನ್ನಗಿರಿ ಭಾಗದಲ್ಲಿ ನವೋದಯ ಶಾಲೆ ಇದೆ. ಹಾಗಾಗಿ ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಹೊನ್ನಾಳಿಯಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸಲು ಪ್ರಯತ್ನಿಸುವೆ ಎಂದರು.

ಕೇಂದ್ರೀಯ ವಿದ್ಯಾಲಯವನ್ನು ನಮ್ಮ ತಾಲೂಕಿನಲ್ಲಿ ಆರಂಭಿಸಿ ಎಂದು ಈಗಾಗಲೇ ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಬೇಡಿಕೆಯನ್ನಿಟ್ಟಿದ್ದಾರೆ. ಅಲ್ಲದೇ ಇದಕ್ಕಾಗಿ ಬೇಕಾಗುವ 10 ಎಕರೆ ಜಾಗವನ್ನು ಕೂಡ ನಾವು ನೀಡುತ್ತೇವೆ ಎಂದು ಮುಂದೆ ಬಂದಿದ್ದಾರೆ. ಜಗಳೂರು ಬಳಿ ಈಗಾಗಲೇ ಸುಮಾರು 25 ಎಕರೆ ಜಾಗದಲ್ಲಿ, 20 ಲಕ್ಷ ರೂ. ವೆಚ್ಚದಲ್ಲಿ ಏಕಲವ್ಯ ವಿದ್ಯಾಲಯ ಪ್ರಾರಂಭವಾಗುತ್ತಿದೆ. ಇದು ಜಿಲ್ಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಲು ಸಹಕಾರಿ ಆಗುತ್ತದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭವಾಗಿ 5 ವರ್ಷವಾಗಿದೆ. ಆಗ ಬಾಡಿಗೆ ಮನೆಯಲ್ಲಿ ಆರಂಭಿಸಲಾಗಿತ್ತು. ಇದೀಗ ಆವರಗೊಳ್ಳ ಸಮೀಪದಲ್ಲಿ ಹದಿಮೂರೂವರೆ ಕೋಟಿ ರೂ. ವೆಚ್ಚದಲ್ಲಿ ಸುಂದರ, ಭವ್ಯ ಕಟ್ಟಡ ನಿರ್ಮಿಸಲಾಗಿದೆ ಎಂದರು.

ಈ ಸಂಸ್ಥೆಯಲ್ಲಿ ಒಟ್ಟು 24 ಶಿಕ್ಷಕರಿದ್ದು, ಅದರಲ್ಲಿ 14 ಶಿಕ್ಷಕರು ಮಾತ್ರ ಕಾಯಂ ಆಗಿದ್ದು, 10 ಹುದ್ದೆಗಳು ಖಾಲಿ ಇವೆ. ಈ ಬಗ್ಗೆ ಪೋಷಕರು ಪ್ರಧಾನಿಗೆ ಪತ್ರ ಬರೆದು ನನಗೂ ಪ್ರತಿ ನೀಡಿದ್ದಾರೆ. ಕೇಂದ್ರ ಮಂತ್ರಿಗಳ ಜೊತೆ ಚರ್ಚಿಸಿ ಹುದ್ದೆಗಳನ್ನು ತುಂಬಿಸಿಕೊಡಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಮಕ್ಕಳು ಕ್ರೀಡೆ, ಕಲೆ ಮುಂತಾದ ಚುಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಆ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ, ಸಂಸ್ಕೃತಿ, ಸಂಸ್ಕಾರ ಕಲಿಸಿ ಕೊಡುವಲ್ಲಿ ಶಿಕ್ಷಕ ಸಿಬ್ಬಂದಿ ಶ್ರಮಿಸಬೇಕು ಎಂದು ಹೇಳಿದರು.

ಕಸ್ತೂರಿ ರಂಗನ್‌ ಸಮಿತಿಯು ಪಠ್ಯಪುಸ್ತಕ, ಹೋಮ್‌ವರ್ಕ್‌, ಬ್ಯಾಗ್‌ ಹೊರೆ ತಗ್ಗಿಸುವ ಸಲುವಾಗಿ ಶಿಫಾರಸು ಮಾಡಿದೆ. ಅದರಂತೆ ಕೇಂದ್ರ ಸರ್ಕಾರ ಸೂಕ್ತ ನಿರ್ದೇಶನ ನೀಡಲಿದೆ. ಇದು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಎಂದರು.

ಶಾಸಕ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಆಗಿರುವುದು ಸಂತಸ ತಂದಿದೆ. ರೈತರು, ತುಳಿತಕ್ಕೊಳಗಾದ ಮಕ್ಕಳಿಗೂ ಇಂತಹ ವಿದ್ಯಾಸಂಸ್ಥೆಯಲ್ಲಿ ಓದಲು ಅವಕಾಶ ಸಿಗುವಂತಾಗಬೇಕು. ಏಕೆಂದರೆ ದೊಡ್ಡವರ ಮಕ್ಕಳು ಎಲ್ಲಿ ಆದ್ರೂ ಓದಬಹುದು. ಈ ಕೆಲಸವನ್ನು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದು ಮುಂದಿನ ದಿನಗಳಲ್ಲಿ ಸಂಸದರು ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಡಾ| ಎ.ಕೆ. ಮಿಶ್ರಾ, ಕೆಂದ್ರೀಯ ವಿದ್ಯಾಲಯ ಸಂಸ್ಥೆ ಉಪ ಆಯುಕ್ತ ಡಿ.ಟಿ.ಎಸ್‌. ರಾವ್‌, ಧಾರವಾಡದ ಮುರುಳಿ ಕೃಷ್ಣ, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಪಿ.ಸಿ. ರಾಜು, ವಿದ್ಯಾಲಯದ ಪ್ರಾಂಶುಪಾಲ ಪಿ.ವಿ. ಬೀಜು ಉಪಸ್ಥಿತರಿದ್ದರು.

ಪ್ರತಿಭಾ ಪಲಾಯನ ಬೇಡ
ಶಿಕ್ಷಣ ಪಡೆದ ಪ್ರತಿಭಾನ್ವಿತರು ವಿದೇಶದ ಕಡೆ ಮುಖ ಮಾಡುತ್ತಿದ್ದಾರೆ. ಈ ರೀತಿಯ ಪ್ರತಿಭಾ ಪಲಾಯನ ಅತ್ಯಂತ ಅಪಾಯಕಾರಿ. ಬುದ್ಧಿವಂತರಾದ ಮಕ್ಕಳು ವಿದೇಶಕ್ಕೆ ಹೋಗುವುದನ್ನು ಬಿಡಬೇಕು. ಯಾರೇ ಜ್ಞಾನವಂತರಾದರೂ ಕೂಡ ಅವರ ಸೇವೆ ದೇಶಕ್ಕೆ ದೊರೆಯಬೇಕು ಎಂದು ಸಂಸದರು ಹೇಳಿದರು. ಒಬ್ಬ ವಿದ್ಯಾರ್ಥಿ ವೈದ್ಯಕೀಯ ಶಿಕ್ಷಣ ಮುಗಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ 30ರಿಂದ 40 ಲಕ್ಷ ರೂ.ವರೆಗೆ ಖರ್ಚು ಮಾಡುತ್ತಿವೆ. ಆದರೆ, ವೈದ್ಯಕೀಯ ಶಿಕ್ಷಣ ಪಡೆದು ವೈದ್ಯರಾದವರು ಗ್ರಾಮೀಣ ಪ್ರದೇಶದ ಜನರಿಗೆ ಸೇವೆ ನೀಡಲು ಮುಂದೆ ಬರುತ್ತಿಲ್ಲ. ಬದಲಾಗಿ ವಿದೇಶಕ್ಕೆ ಹೋಗುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.