ಮಿನಿ ವಿಧಾನಸೌಧದಲ್ಲಿ ಮೂಲ ಸೌಲಭ್ಯಗಳೇ ಮರೀಚಿಕೆ!


Team Udayavani, Jan 20, 2019, 10:01 AM IST

20-january-16.jpg

ಚನ್ನಗಿರಿ: ವಿವಿಧ ಕೆಲಸ ಕಾರ್ಯಗಳಿಗೆಂದು ತಾಲೂಕು ಕಚೇರಿಗೆ ಬರುವ ಸಾರ್ವಜನಿಕರು ಮೂಲ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದೆ.

ಪಟ್ಟಣದ ತಾಲೂಕು ಕಚೇರಿಗೆ ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ವಯೋ ವೃದ್ಧರು ಸೇರಿದಂತೆ ಮಹಿಳೆಯರು, ಯುವಕರು ಬರುತ್ತಾರೆ. ಕೆಲವೊಮ್ಮೆ ಕೆಲಸಕ್ಕಾಗಿ ಬೆಳಗಿನಿಂದ ಸಂಜೆಯವರೆಗೆ ಅಲ್ಲಿಯೇ ಕಾಯಬೇಕಾಗುತ್ತದೆ.

ಆಗ ಕನಿಷ್ಟಪಕ್ಷ ಜನರು ಕುಳಿತುಕೊಳ್ಳಲು ಕೂಡ ಕಚೇರಿಯಲ್ಲಿ ಆಸನದ ವ್ಯವಸ್ಥೆ ಇಲ್ಲ. ನಿಂತು ನಿಂತು ಸುಸ್ತಾಗಿ ಕಚೇರಿ ನೆಲದ ಮೇಲೆಯೇ ಕುಳಿತುಕೊಳ್ಳುವಂತಾಗಿದೆ. ಇಂತಹ ವ್ಯವಸ್ಥೆಯಿಂದ ತಾಲೂಕು ಕಚೇರಿಯೆಂದರೆ ಜನತೆ ಬೇಸತ್ತುಹೋಗಿದ್ದಾರೆ.

ಪಹಣಿ ಪಡೆಯಲು ಬಿಸಿಲಲ್ಲಿ ಕ್ಯೂ: ಪಹಣಿ ಮತ್ತು ಜಾತಿ, ಆದಾಯ ಪ್ರಮಾಣಪತ್ರ ಪಡೆಯವುದಕ್ಕೆ ಕಚೇರಿಯ ಬಲಭಾಗದಲ್ಲಿ ಕೌಂಟರ್‌ ವ್ಯವಸ್ಥೆ ಮಾಡಲಾಗಿದೆ. ಪಹಣಿಗಾಗಿ ರೈತರು ದಿನವಿಡಿ ಬಿಸಿಲಲ್ಲಿ ಕ್ಯೂ ನಿಲ್ಲಬೇಕಿದೆ.

ಕುಡಿಯುವ ನೀರಿಗಾಗಿ ಪರದಾಟ: ಕಚೇರಿಯ ಒಳಗಡೆ ಕುಡಿಯುವ ನೀರಿಗಾಗಿ ಅಳವಡಿಸಲಾಗಿದ್ದ ಶುದ್ಧ ನೀರು ಘಟಕ ವರ್ಷದ ಹಿಂದೆ ರಿಪೇರಿಗೆ ಬಂದಿದ್ದು ಇನ್ನೂ ದುರಸ್ತಿ ಆಗಿಲ್ಲ.

ಮಹಿಳೆಯರಿಗಿಲ್ಲ ಶೌಚಾಲಯ: ಕಚೇರಿಯಲ್ಲಿ ಮಹಿಳೆಯರಿಗಾಗಿ ಶೌಚಾಲಯವಿದೆ. ಅದರೆ ಅದನ್ನು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಮಾತ್ರ ಉಪಯೋಗಿಸುತ್ತಿದ್ದಾರೆ. ಹೀಗಾಗಿ ಕೆಲಸ ಕಾರ್ಯಗಳಿಗೆ ಬರುವ ಗ್ರಾಮೀಣ ಮಹಿಳೆಯರು ಶೌಚಾಲಯವಿಲ್ಲದೇ ಪರದಾಡುವಂತಾಗಿದೆ. ಪುರುಷರ ಶೌಚಾಲಯ ನಿರ್ವಹಣೆಯಿಲ್ಲದೇ ಮೂಗು ಮುಚ್ಚಿಕೊಂಡು ಹೋಗುವಂತಾಗಿದೆ.

ಮಿನಿ ವಿಧಾನಸೌಧದಲ್ಲಿ ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಆದರೆ ಸದ್ಯಕ್ಕೆ ಅನುದಾನದ ಕೊರತೆ ಇದೆ. ಲೋಕಸಭೆ ಚುನಾವಣೆ ನಂತರ ಕುಡಿಯುವ ನೀರು, ಆಸನದ ವ್ಯವಸ್ಥೆ ಮಾಡಲಾಗುವುದು.
• ಎನ್‌.ಜೆ ನಾಗರಾಜ್‌, ತಹಶೀಲ್ದಾರ್‌,
  ಚನ್ನಗಿರಿ

ಕೆಲವೊಮ್ಮೆ ನಿಗದಿತ ಸಮಯದಲ್ಲಿ ಕೆಲಸಗಳು ಆಗದೇ ದಿನವಿಡಿ ಕಚೇರಿಯಲ್ಲಿ ಕಾಯಬೇಕಾಗಿ ಬರುತ್ತದೆ. ಕುಡಿಯುವ ನೀರು, ಆಸನದ ವ್ಯವಸ್ಥೆಯಿಲ್ಲದೆ ಕಚೇರಿ ಎದುರಿನ ಹೋಟೆಲ್‌, ಅಂಗಡಿಗಳನ್ನು ಅವಲಂಬಿಸಬೇಕಿದೆ. ಇನ್ನು ಅಂಗಡಿಗಳಲ್ಲಿ ದುಪ್ಪಟ್ಟು ಹಣ ನೀಡಿ ನೀರಿನ ಬಾಟಲಿಗಳನ್ನು ಖರೀದಿಸಬೇಕು. ಕಚೇರಿಗೆ ಬರುವಂತಹವರು ಬಡವರು. ಆದ್ದರಿಂದ ಮೂಲಸೌಕರ್ಯವನ್ನು ಒದಗಿಸಬೇಕು.
ಶಿವಕುಮಾರ್‌,
ಬುಳ್ಳುಸಾಗರ ಗ್ರಾಮಸ್ಥರು.

ಹಳ್ಳಿಯಿಂದ ದಣಿದು ಬರುವ ಜನರು ಕಚೇರಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಇನ್ನು ವಯಸ್ಸಾದವರಿಗೆ, ಅಂಗವಿಕಲರಿಗೆ ಕಚೇರಿಯ ಒಳಗಡೆ ಆಸನದ ವ್ಯವಸ್ಥೆಯಿಲ್ಲ. ಎಲ್ಲರೂ ನೆಲದ ಮೇಲೆಯೇ ಕುಳಿತುಕೊಳ್ಳುತ್ತಿದ್ದಾರೆ. ಸಾರ್ವಜನಿಕ ಶೌಚಾಲಯ ಕೂಡ ಇಲ್ಲ. ಆದ್ದರಿಂದ ತಕ್ಷಣ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು.
ಗಾಂಧಿ ನಗರದ ಚಿತ್ರಲಿಂಗಪ್ಪ,
 ತಾಲೂಕು ಡಿಎಸ್‌ಎಸ್‌ ಸಂಚಾಲಕ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.